ರಾಜ್ಯ

ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ವಿರುದ್ದ ಅತ್ಯಾಚಾರ ಆರೋಪ ; FIR ದಾಖಲು

ಬೆಂಗಳೂರು : ಕಾಮಿಡಿ ಕಿಲಾಡಿ ಖ್ಯಾತಿಯ ನಟ ಮಡೆನೂರು ಮನು ವಿರುದ್ಧ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.

ಬನಶಂಕರಿ 3ನೇ ಹಂತ, 5ನೇ ಕ್ರಾಸ್ ಚೌಡೇಶ್ವರಿ ನಿಲಯದಲ್ಲಿ ಸುಮಾರು 5 ವರ್ಷಗಳಿಂದ 33 ವರ್ಷದ ನಟಿ ವಾಸವಾಗಿದ್ದರು. ಇದೀಗ ನಾಗರಬಾವಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ನೆಲೆಸಿದ್ದಾರೆ.

2018ರಲ್ಲಿ ಈ ನಟಿಗೆ ಕಾಮಿಡಿ ಕಿಲಾಡಿ ಕಾರ್ಯಕ್ರಮದ ಮಡೆನೂರು ಮನು ಪರಿಚಯವಾಗಿದ್ದು, ಇವರಿಬ್ಬರು ಸ್ನೇಹಿತರಾಗಿದ್ದಾರೆ. ಈ ನಡುವೆ ಮಡೆನೂರು ಮನುಗೆ ಈಗಾಗಲೇ ಮದುವೆಯಾಗಿದ್ದು ಒಂದು ಹೆಣ್ಣುಮಗು ಇದೆ.
2022, ನವಂಬರ್ 29ರಂದು ಶಿವಮೊಗ್ಗದ ಶಿಕಾರಿಪುರದಲ್ಲಿ ಕಾರ್ಯಕ್ರಮದ ನಿಮಿತ್ತ ಮಡೆನೂರು ಮನು ಅವರು ನನ್ನನ್ನು ಹಾಗೂ ಇತರೆ ಕಾಮಿಡಿ ನಟರನ್ನು ಕರೆದುಕೊಂಡು ಹೋಗಿದ್ದರು. ಕಾರ್ಯಕ್ರಮ ಮುಗಿದ ನಂತರ ನಾನು ಶಿಕಾರಿಪುರದ ಹೋಟೆಲ್‍ನ ರೂಮ್‍ನಲ್ಲಿದ್ದಾಗ ನನಗೆ ಸಂಭಾವನೆ ನೀಡುವ ನೆಪದಲ್ಲಿ ಮಡೆನೂರು ಮನು ರೂಮಿಗೆ ಬಂದು ನನ್ನ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಆರೋಪಿಸಿ ನಟಿ ದೂರಿನಲ್ಲಿ ತಿಳಿಸಿದ್ದಾರೆ.

ಅಲ್ಲದೆ 2022ರ ಡಿಸೆಂಬರ್ 3ರಂದು ನನ್ನ ವಿರೋಧದ ನಡುವೆಯೂ ನನಗೆ ತಾಳಿ ಕಟ್ಟಿದ್ದಾನೆ. ನಂತರದ ದಿನಗಳಲ್ಲಿ ನನ್ನ ಮನೆಗೆ ಬಂದು ಹಲವಾರು ಬಾರಿ ಅತ್ಯಾಚಾರ ಮಾಡಿದ್ದಾನೆ. ನಾನು ಗರ್ಭಿಣಿಯಾಗಿರುವುದು ತಿಳಿದು ಮಾತ್ರೆ ನೀಡಿ ಎರಡು ಬಾರಿ ಗರ್ಭಪಾತ ಮಾಡಿಸಿದ್ದಾನೆ. ನನ್ನ ಮೇಲೆ ಅತ್ಯಾಚಾರ ಮಾಡಿರುವ ಖಾಸಗಿ ವಿಡಿಯೋವನ್ನು ಆತನ ಮೊಬೈಲ್‍ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದು, ಈ ವಿಚಾರವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ ಎಂದು ನಟಿ ದೂರಿನಲ್ಲಿ ತಿಳಿಸಿದ್ದಾರೆ.

ಈತ ನಾಯಕ ನಟನಾಗಿ ಸಿನಿಮಾವೊಂದನ್ನು ಮಾಡಿದ್ದು, ಅದಕ್ಕಾಗಿ ನಾನು ಲಕ್ಷಾಂತರ ಹಣವನ್ನು ಆತನಿಗೆ ನೀಡಿದ್ದೇನೆ. ತನಗೆ ಮೋಸ ಮಾಡಿ ನನ್ನ ಮೇಲೆ ಹಲ್ಲೆ ಮಾಡಿ ಪ್ರಾಣ ಬೆದರಿಕೆ ಹಾಕಿರುವ ಮಡೆನೂರು ಮನು ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಟಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಡವರಿಗೆ ಮನರೇಗಾ ಅಡಿ ಕೂಲಿ ಕೆಲಸ ಕೊಟ್ಟಿದ್ದು ಮನಮೋಹನ್‌ ಸಿಂಗ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮನರೇಗಾ ಯೋಜನೆ ಇದು ಬಡವರ ಹಕ್ಕು ಹಾಗೂ ಉದ್ಯೋಗ. ಬಡವರ ಹಕ್ಕಿಗೋಸ್ಕರ ನಾವು ಹೋರಾಟ ಮಾಡುತ್ತಿದ್ದೇವೆ. ಬಡವರಿಗೆ ಮನರೇಗಾ…

2 mins ago

ಮನರೇಗಾ ಮರು ಜಾರಿ ಮಾಡುವವರೆಗೆ ಹೋರಾಟದಿಂದ ಹಿಂದೆ ಸರಿಯಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮನರೇಗಾ ಮರು ಜಾರಿ ಮಾಡುವವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು…

5 mins ago

ಮಂಡ್ಯ| ಜೂಜಾಟದಲ್ಲಿ ತೊಡಗಿದ್ದ 29 ಮಂದಿ ಬಂಧನ: 10 ಲಕ್ಷ ರೂ. ವಶ

ಮಂಡ್ಯ: ನಗರದ ಹೊರವಲಯದಲ್ಲಿರುವ ಅಗ್ರಿ ಕ್ಲಬ್ ಮೇಲೆ ದಾಳಿ ನಡೆಸಿರುವ ಮಂಡ್ಯ ಗ್ರಾಮಾಂತರ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ 29 ಮಂದಿಯನ್ನು…

14 mins ago

ಮನರೇಗಾ ಹೆಸರು ಬದಲಾವಣೆಗೆ ವಿರೋಧ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್‌ ನಾಯಕರು…

1 hour ago

ಚಾಮರಾಜನಗರ| ನಂಜೇದೇವನಪುರದಲ್ಲಿ ಮತ್ತೊಂದು ಹುಲಿ ಮರಿ ಸೆರೆ: ಇನ್ನೊಂದು ಮಾತ್ರ ಬಾಕಿ

ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು…

1 hour ago

ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಮಹಿಳೆ ಸಾವು: ಇಬ್ಬರಿಗೆ ಗಾಯ

ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್‌ ಬಳಿ…

2 hours ago