ರಾಜ್ಯ

ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಕೊಲೆ: ವಿ.ಸಿ.ಎನ್.ವೈದ್ಯರ ಕ್ಷೇಮಾಭಿವೃದ್ದಿ ಸಂಘ ಖಂಡನೆ

ಬೆಂಗಳೂರು: ಕೊಲ್ಕತ್ತಾ ವೈದ್ಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಗೈದು, ಹತ್ಯೆ ಮಾಡಿದವರಿಗೆ ಉಗ್ರ ಶಿಕ್ಷೆಯಾಗಬೇಕು ಮತ್ತು ಆಸ್ಪತ್ರೆ ಮೇಲೆ ದಾಂಧಲೆ ಮಾಡಿದವರನ್ನು ಸಹ ತಕ್ಷಣವೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿ.ಸಿ.ಎನ್.ಡಾಕ್ಟರ್ಸ್ ವೇಲ್ ಫೇರ್ ಅಸೋಸಿಯೇಷನ್ ಆಗ್ರಹಿಸಿದೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅಸೋಸಿಯೇಷನ್ ಅಧ್ಯಕ್ಷ ಡಾ.ಎಸ್. ರಾಜು, ಕಾರ್ಯದರ್ಶಿ ಬಿ.ಟಿ.ರಮೇಶ್, ಕೊಲ್ಕತ್ತಾ ಘಟನೆ ಅತ್ಯಂತ ಅಮಾನವೀಯವಾಗಿದ್ದು, ಈ ಷಡ್ಯಂತ್ರದ ಹಿಂದೆ ಇರುವವರನ್ನು ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು. ವೈದ್ಯಕೀಯ ಸಮೂಹದ ಮೇಲೆ ವಿಶ್ವಾಸ ಮೂಡುವ ರೀತಿಯಲ್ಲಿ ಸರ್ಕಾರ ಹೆಜ್ಜೆ ಇಡಬೇಕು ಎಂದು ಹೇಳಿದರು.

ಎಲ್ಲಾ ರೀತಿಯ ಆರೋಗ್ಯ ಸೇವಾ ಸೌಲಭ್ಯಗಳು ಮತ್ತು ಸರ್ಕಾರಿ, ಖಾಸಗಿ ಚಿಕಿತ್ಸಾಲಯಗಳು ಆರೋಗ್ಯ ಸೇವೆಯಲ್ಲಿ ನಿರತರಾಗಿರುವ ವೈದ್ಯರು, ಆರೋಗ್ಯ ಸಿಬ್ಬಂದಿಗೆ ಸೂಕ್ತ ಭದ್ರತೆ ಒದಗಿಸಬೇಕು. ವೈದ್ಯರು ದೇವರ ಸಮಾನವಾಗಿದ್ದು, ರೋಗಿಗಳ ಜೀವ ರಕ್ಷಿಸುವ ವೈದ್ಯರನ್ನು ಗೌರವದಿಂದ ನೋಡುವ ಪರಿಸ್ಥಿತಿ ನಿರ್ಮಾಣವಾಗಬೇಕು ಎಂದರು.
ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ, ಹಿಂಸೆ, ದಾಂಧಲೆ ನಡೆಯುತ್ತಿರುವುದು ವಿಷಾದಕರ. ದಾಳಿ, ಗಲಭೆ, ಅಹಿತಕರ ಘಟನೆಗಳನ್ನು ತಡೆಯಲು ಕೇಂದ್ರ ಸರ್ಕಾರ ರಚನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಬೇಕು. ಪೊಲೀಸ್ ಮತ್ತು ಆರೋಗ್ಯ ಇಲಾಖೆಯಿಂದ ಆರೋಗ್ಯ ಸಂಸ್ಥೆಗಳಿಗೆ ಸೂಕ್ತ ಭದ್ರತೆ ಕಲ್ಪಿಸಬೇಕು. ಕರ್ತವ್ಯ ನಿರತ ವೈದ್ಯರನ್ನು ಗೌರವದಿಂದ ನೋಡಬೇಕು. ಆರೋಗ್ಯ ಕಾರ್ಯಕರ್ತರು ಎದುರಿಸುತ್ತಿರುವ ಅಪಾಯಗಳನ್ನು ಮತ್ತು ಸೇವೆಯಲ್ಲಿ ನಿರತರಾಗಿರುವವರಿಗೆ ರಕ್ಷಣೆ ನೀಡಲ ಕಠಿಣ ಕಾನೂನು ಜಾರಿಗೆಯಾಗಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ವೈದ್ಯರು ಯಾವುದೇ ಭಯವಿಲ್ಲದೇ ಕರ್ತವ್ಯ ನಿರ್ವಹಿಸಬೇಕು. ರೋಗಿಗಳ ಆರೈಕೆ ಮತ್ತು ಚಿಕಿತ್ಸೆ ನೀಡುವಾಗ ಜಾತಿ, ಧರ್ಮಗಳ ಬೇಧಭಾವವಿಲ್ಲದೇ ಕಾರ್ಯನಿರ್ವಹಿಸುತ್ತಾರೆ. ಎಂತಹ ಸಂದರ್ಭಗಳಲ್ಲೂ ತುರ್ತು ಮತ್ತು ಅಗತ್ಯ ಆರೋಗ್ಯ ಸೇವೆಗಳು ಮುಂದುವರೆಯತ್ತವೆ. ರೋಗಿಗಳ ತಕ್ಷಣ ಚಿಕಿತ್ಸೆ ನೀಡುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಸಂಘದ ಪದಾಧಿಕಾರಿಗಳಾದ ಡಾ|| ಭೋಜಮ್ಮ, ಡಾ|| ವೆಂಕಟರಾಮ್, ಡಾ|| ಚಂದ್ರಶೇಖರ್, ಡಾ|| ಚಂದ್ರಿಕಾ ಆನಂದ್, ಡಾ|| ಪ್ರೀತ್ ಶೆಟ್ಟಿ, ಡಾ ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

43 mins ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

2 hours ago

ಸಾಲಬಾಧೆ; ರೈತ ಆತ್ಮಹತ್ಯೆ

ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…

3 hours ago

ಹರಿಹರದಲ್ಲಿ ಶಂಕಿತ ಉಗ್ರನ ಬಂಧನ: ಪೊಲೀಸರಿಂದ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರ ಸುಹೈಲ್ ಉತ್ತರಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರವನ್ನು ಸ್ಫೋಟಿಸಲು ಸಂಚು ನಡೆಸಿದ್ದ…

3 hours ago

ಮುಂಗಾರು ಮಳೆ ಹಿನ್ನಡೆ ; ರಾಜ್ಯದ ಹಲವೆಡೆ ಕೃಷಿ ಕುಂಠಿತ

ಬೆಂಗಳೂರು : ಮುಂಗಾರು ಮಳೆ ಹಿನ್ನಡೆಯಿಂದ ರಾಜ್ಯದ ಹಲವು ಕಡೆ ಕೃಷಿ ಚಟುವಟಿಕೆಗಳು ಕುಂಟುತ್ತಾ ಸಾಗುತ್ತಿದ್ದು, ದಾವಣಗೆರೆ, ಕಲಬುರಗಿ, ಬೆಳಗಾವಿ, ಹಾವೇರಿ,…

4 hours ago

ಮುಂಬೈನಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

ಮುಂಬೈ: ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.…

4 hours ago