ರಾಜ್ಯ

ಹೋಮ್‌ ಸ್ಟೇ ಮಾಲಕಿ ಮೇಲೆ ಅತ್ಯಾಚಾರ: ಪೊಲೀಸ್‌ ಸಬ್‌ ಡಿವಿಷನ್‌ ಸ್ಥಾಪನೆಗೆ ಜನಾರ್ಧನ ರೆಡ್ಡಿ ಒತ್ತಾಯ

ವಿಜಯನಗರ: ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರು ಹಂಪಿ ಬಳಿ ಇರುವ ಹೋಮ್‌ಸ್ಟೇನ ಮಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆ ಸ್ಥಳದಲ್ಲಿ ಪೊಲೀಸ್‌ ಸಬ್‌ ಡಿವಿಷನ್‌ ಸ್ಥಾಪನೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಭಾರತದಲ್ಲಿ ಅತಿ ಹೆಚ್ಚು ವಿದೇಶಿ ಪ್ರವಾಸಿಗಳು ಬರುವ ಪ್ರವಾಸಿ ಸ್ಥಳ ಹಂಪಿಯಾಗಿದೆ. ಈ ಸ್ಥಳದ ತುಸು ದೂರದಲ್ಲಿರುವ ಹೋಮ್ ಸ್ಟೇ ಮಾಲಕಿಯ ಮೇಲೆ ಅತ್ಯಾಚಾರ ನಡೆದ ಘಟನೆ ವರದಿಯಾಗಿದೆ. ಇದಕ್ಕೆ ರಾಜ್ಯ ಸರ್ಕಾರದ ವಿಫಲತೆಯೇ ಕಾರಣ. ಇಲ್ಲಿ ಮಾಡಲಾಗಿದ್ದ ಪೊಲೀಸ್ ಭದ್ರತಾ ವ್ಯವಸ್ಥೆಯನ್ನು ಹಿಂಪಡೆದಿದ್ದರಿಂದ ಈ ಅವಘಡ ಸಂಭವಿಸಿದ್ದು, ಹಂಪಿಯಲ್ಲಿ ಕೂಡಲೇ ಪೊಲೀಸ್ ಸಬ್ ಡಿವಿಷನ್ ಆರಂಭಿಸಬೇಕು ಎಂದು ಆಗ್ರಹಿಸಿದ್ದಾರೆ.

ಗಂಗಾವತಿ ತಾಲ್ಲೂಕಿನ ಸಣಾಪುರದಲ್ಲಿ ಇಸ್ರೇಲಿ ಪ್ರವಾಸಿಗರೊಬ್ಬರು ಹೋಮ್‌ ಸ್ಟೇ ಮಾಲಕಿಯ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಪ್ರಕರಣ ಅತ್ಯಂತ ಹೀನ ಕೃತ್ಯವಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಘಟನೆ ಕುರಿತು ವರದಿ ಪಡೆದು ತಕ್ಷಣವೇ ಆರೋಪಿಗಳನ್ನು ಬಂಧಿಸುವಂತೆ ಪೊಲೀಸರಿಗೆ ಸೂಚಿಸಿದ್ದೇನೆ. ಅದರಂತೆ ಪೊಲೀಸ್ ಅಧಿಕಾರಿಗಳು ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪನವರ ಸರ್ಕಾರದಲ್ಲಿ ನಾನು ಅಖಂಡ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಅವರ ಸಹಕಾರದೊಂದಿಗೆ ಹಂಪಿಯಲ್ಲಿ ಪೊಲೀಸ್ ಸಬ್ ಡಿವಿಷನ್ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಡಿವೈಎಸ್ಪಿ ಮಟ್ಟದ ಅಧಿಕಾರಿಯನ್ನು ನೇಮಿಸಿ 32 ಪೊಲೀಸ್ ತಂಡಗಳನ್ನು ರಚಿಸಿ ಅವರಿಗೆ ದ್ವಿಚಕ್ರ ವಾಹನವನ್ನು ನೀಡಲಾಗಿತ್ತು. ಈ ಮೂಲಕ ಹಂಪಿ ಅಭಿವೃದ್ಧಿ ಪ್ರಾಧಿಕಾರದಲ್ಲಿ ಆನೆಗೊಂದಿ ಸಹ ಒಳಗೊಂಡಿರುವ ಕಾರಣ ಎರಡು ಐತಿಹಾಸಿಕ ಸ್ಥಳಗಳಿಗೆ ಆಗಮಿಸುವ ದೇಶ ವಿದೇಶದ ಪ್ರವಾಸಿಗರ ರಕ್ಷಣೆಗೆ ಹಗಲಿರುಳು ಗಸ್ತು ತಿರುಗುವ ಉತ್ತಮ ಪೊಲೀಸ್ ವ್ಯವಸ್ಥೆ ಕಲ್ಪಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಇದೀಗ ದುರಾದೃಷ್ಟಕರ ಸಂಗತಿ ಎಂದರೆ ನಂತರ ಬಂದ ಸರ್ಕಾರ ಆ ಪೊಲೀಸ್ ಸಬ್ ಡಿವಿಷನ್ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ ಅದನ್ನು ಬೇರೆಡೆಗೆ ಸ್ಥಳಾಂತರಗೊಳಿಸಲಾಗಿದೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಅತ್ಯಂತ ವಿನಮ್ರವಾಗಿ ವಿನಂತಿಸುತ್ತಾ, ಹಂಪಿ ಹಾಗೂ ಆನೆಗೊಂದಿಗೆ ಆಗಮಿಸುವ ದೇಶ-ವಿದೇಶಗಳ ಪ್ರವಾಸಿಗರ ರಕ್ಷಣೆಗಾಗಿ ಈ ಹಿಂದೆ ಕಲ್ಪಿಸಲಾಗಿದ್ದ ಪೊಲೀಸ್ ಸಬ್ ಡಿವಿಷನ್ ಹಂಪಿಯಲ್ಲಿ ಪುನಃ ಸ್ಥಾಪಿಸಬೇಕು. ಜೊತೆಗೆ, ಆನೆಗೊಂದಿಯಲ್ಲಿ ಪ್ರತ್ಯೇಕ ಪೊಲೀಸ್ ಠಾಣೆ ನಿರ್ಮಿಸಿ ಉತ್ತಮ ಭದ್ರತಾ ವ್ಯವಸ್ಥೆ ಕಲ್ಪಿಸಬೇಕೆಂದು ಮನವಿ ಮಾಡುತ್ತೇನೆ ಎಂದಿದ್ದಾರೆ.

ಭಾರತದಲ್ಲಿಯೇ ಅತಿ ಹೆಚ್ಚು ದೇಶ-ವಿದೇಶಗಳ ಪ್ರವಾಸಿಗರು ಆಗಮಿಸುವ ಪ್ರಸಿದ್ಧ ಪುಣ್ಯಕ್ಷೇತ್ರ ಹಾಗೂ ಪ್ರವಾಸಿ ತಾಣಗಳಾಗಿರುವ ಹಂಪಿ ಮತ್ತು ಆನೆಗೊಂದಿ ಭಾಗದ ಪ್ರತಿಯೊಬ್ಬರ ಸುರಕ್ಷತೆ ಕಾಪಾಡುವಲ್ಲಿ ಸರ್ಕಾರ ಬದ್ಧತೆ ತೋರಲಿ ಎಂಬುವುದು ನನ್ನ ಆಶಯವಾಗಿದೆ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

2 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

5 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

7 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

7 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

7 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

7 hours ago