ಬೆಂಗಳೂರು: ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಆಹ್ವಾನಿಸಿದ್ದೆವು. ಆದರೆ ರಶ್ಮಿಕಾ ಮಂದಣ್ಣ ನನಗೆ ಸಮಯವಿಲ್ಲ, ಬರಲ್ಲವೆಂದು ಹೇಳಿದ್ದರು ಎಂದು ಶಾಸಕ ಗಣಿಗ ಕಿಡಿಕಾರಿದ್ದಾರೆ.
ವಿಧಾನಸೌಧದಲ್ಲಿ ಇಂದು(ಮಾರ್ಚ್.3) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿನಿಮಾದವರು ಬಾಯಿಮುಚ್ಚಿಕೊಂಡು ಇರಬೇಕು. ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ ಸಿನಿಮಾದಿಂದ ಬೆಳೆದವರು. ಅವರನ್ನು ಕಳೆದ ಚಲನಚಿತ್ರೋತ್ಸವಕ್ಕೆ ಆಹ್ವಾನ ನೀಡಿದ್ದೇವು. ಆದರೆ ಅವರು ನಾನು ಹೈದರಾಬಾದ್ನಲ್ಲಿ ಇರೋದು, ಬರಲು ನನಗೆ ಸಮಯವಿಲ್ಲ ಎಂದು ಹೇಳಿದ್ದರು. ಅವರಿಗೆ ಬುದ್ದಿ ಕಲಿಸಬೇಕು ಅಲ್ವಾ ಎಂದು ವಾಗ್ದಾಳಿ ನಡೆಸಿದರು.
ನಾನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆಯುತ್ತೇನೆ. ಆದರೆ ಸಿನಿಮಾ ಸಬ್ಸಿಡಿಗಳನ್ನು ನಿಲ್ಲಿಸುವ ಬಗ್ಗೆ ಯೋಚಿಸಬೇಕು. ಆಂಧ್ರದ ನರಸಿಂಹಲು ನಮ್ಮ ರಾಜ್ಯದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಹೇಳಿಕೆಗಳನ್ನು ನೀಡುತ್ತಾರೆ. ಆಂಧ್ರಪ್ರದೇಶದಿಂದ ನಮ್ಮ ರಾಜ್ಯಕ್ಕೆ ಬಂದು ದುಡ್ಡು ದೋಚಿಕೊಂಡು ಹೋಗಿ, ನಮ್ಮ ಬಗ್ಗೆ ಮಾತನಾಡುತ್ತಾನೆ. ಮೊನ್ನೆ ಸಿಸಿಎಲ್ ಮ್ಯಾಚ್ ನಡೆಯಿತು, ಆಗ ನಾವು ಅದನ್ನು ನಿಲ್ಲಿಸಬೇಕಿತ್ತು. ಇದು ಲಾಸ್ಟ್ ವಾರ್ನಿಂಗ್, ಚಲನಚತ್ರ ಮಂಡಳಿಯವರು ಬಾಯಿ ಮುಚ ಇರಬೇಕು ಎಂದು ಎಚ್ಚರಿಕೆ ನೀಡಿದರು.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…