ಬೆಂಗಳೂರು: ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಆಹ್ವಾನಿಸಿದ್ದೆವು. ಆದರೆ ರಶ್ಮಿಕಾ ಮಂದಣ್ಣ ನನಗೆ ಸಮಯವಿಲ್ಲ, ಬರಲ್ಲವೆಂದು ಹೇಳಿದ್ದರು ಎಂದು ಶಾಸಕ ಗಣಿಗ ಕಿಡಿಕಾರಿದ್ದಾರೆ.
ವಿಧಾನಸೌಧದಲ್ಲಿ ಇಂದು(ಮಾರ್ಚ್.3) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿನಿಮಾದವರು ಬಾಯಿಮುಚ್ಚಿಕೊಂಡು ಇರಬೇಕು. ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ ಸಿನಿಮಾದಿಂದ ಬೆಳೆದವರು. ಅವರನ್ನು ಕಳೆದ ಚಲನಚಿತ್ರೋತ್ಸವಕ್ಕೆ ಆಹ್ವಾನ ನೀಡಿದ್ದೇವು. ಆದರೆ ಅವರು ನಾನು ಹೈದರಾಬಾದ್ನಲ್ಲಿ ಇರೋದು, ಬರಲು ನನಗೆ ಸಮಯವಿಲ್ಲ ಎಂದು ಹೇಳಿದ್ದರು. ಅವರಿಗೆ ಬುದ್ದಿ ಕಲಿಸಬೇಕು ಅಲ್ವಾ ಎಂದು ವಾಗ್ದಾಳಿ ನಡೆಸಿದರು.
ನಾನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆಯುತ್ತೇನೆ. ಆದರೆ ಸಿನಿಮಾ ಸಬ್ಸಿಡಿಗಳನ್ನು ನಿಲ್ಲಿಸುವ ಬಗ್ಗೆ ಯೋಚಿಸಬೇಕು. ಆಂಧ್ರದ ನರಸಿಂಹಲು ನಮ್ಮ ರಾಜ್ಯದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಹೇಳಿಕೆಗಳನ್ನು ನೀಡುತ್ತಾರೆ. ಆಂಧ್ರಪ್ರದೇಶದಿಂದ ನಮ್ಮ ರಾಜ್ಯಕ್ಕೆ ಬಂದು ದುಡ್ಡು ದೋಚಿಕೊಂಡು ಹೋಗಿ, ನಮ್ಮ ಬಗ್ಗೆ ಮಾತನಾಡುತ್ತಾನೆ. ಮೊನ್ನೆ ಸಿಸಿಎಲ್ ಮ್ಯಾಚ್ ನಡೆಯಿತು, ಆಗ ನಾವು ಅದನ್ನು ನಿಲ್ಲಿಸಬೇಕಿತ್ತು. ಇದು ಲಾಸ್ಟ್ ವಾರ್ನಿಂಗ್, ಚಲನಚತ್ರ ಮಂಡಳಿಯವರು ಬಾಯಿ ಮುಚ ಇರಬೇಕು ಎಂದು ಎಚ್ಚರಿಕೆ ನೀಡಿದರು.
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…
ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…
ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…
ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…
ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…