ರಾಜ್ಯ

ರಾಜ್ಯದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದೆ: ಕುಮಾರಸ್ವಾಮಿ ಗಂಭೀರ ಆರೋಪ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಪ್ರತಿಯೊಂದಕ್ಕೆ ರೇಟ್ ಕಾರ್ಡ್ ಫಿಕ್ಸ್ ಆಗಿದೆ. ಕಂದಾಯ ಇಲಾಖೆಯಲ್ಲಿ ಎಲ್ಲಾ ಪೋಸ್ಟ್ ಗಳಿಗೂ ರೇಟ್ ನಿಗದಿ ಮಾಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದರು.

ಬೆಂಗಳೂರಿನಲ್ಲಿ ಶನಿವಾರ ಬೆಳಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, 60% ಕಮೀಷನ್ ಆರೋಪವನ್ನು ಪುನರುಚ್ಚರಿಸಿದರು.

60% ಕಮೀಷನ್ ಆರೋಪಕ್ಕೆ ಕುಮಾರಸ್ವಾಮಿ ದಾಖಲೆ ಕೊಡಲಿ ಎಂದು ಹೇಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಮುಖಂಡರು, ಗುತ್ತಿಗೆದಾರರೇ ಪರ್ಸಂಟೇಜ್ ಆರೋಪ ಮಾಡುತ್ತಿದ್ದಾರೆ. ಅವರನ್ನು ಪರ್ಸಂಟೇಜ್ ಕೇಳದಿದ್ದರೆ ಅವರು ಯಾಕೆ ಆರೋಪ ಮಾಡುತ್ತಿದ್ದರು. ಸರ್ಕಾರ ಅವರನ್ನೇ ಕೇಳಿ ದಾಖಲೆ ಪಡೆದುಕೊಳ್ಳಬೇಕು ಎಂದರು.

ಸಿದ್ದರಾಮಯ್ಯ ಅವರು ಮಹಾನ್ ನಾಯಕರು. ಪೇ ಸಿಎಂ ಅಂತ ಪೋಸ್ಟರ್ ಅಂಟಿಸಲು ಹೋಗಿದ್ದರು. ಅವರು ಇಲ್ಲಿಯವರೆಗೆ ಯಾವ ದಾಖಲೆ ಇಟ್ಟಿದ್ದಾರೆ ಜನರ ಮುಂದೆ. ಕೆಂಪಣ್ಣ ಹೇಳಿದರು ಕೆಂಪಣ್ಣ ಹೇಳಿದರು ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಆದರೆ, ಕೆಂಪಣ್ಣ ಅವರಿಂದ ಸಿದ್ದರಾಮಯ್ಯ ಅವರು ದಾಖಲೆ ಪಡೆದುಕೊಳ್ಳಬೇಕಿತ್ತಲ್ಲವೇ? ಈಗ ಕಂಟ್ರಾಕ್ಟರ್ ಗಳೇ 60% ವಸೂಲಿ ಬಗ್ಗೆ ಆರೋಪ ಮಾಡುತ್ತಿದ್ದಾರೆ. ಅದಕ್ಕಿಂತ ಸಾಕ್ಷಿ ಬೇಕಾ ಇವರಿಗೆ? ಈ ಆಟ ಸರಕಾರ ಬಿಡಬೇಕು ಎಂದು ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.

ಕೃಷ್ಣಭೈರೇಗೌಡ ವಿರುದ್ದ ಕುಮಾರಸ್ವಾಮಿ ವಾಗ್ದಾಳಿ

ಮಗ ಸೋತಿರುವುದಕ್ಕೆ ಹತಾಶರಾಗಿ ಕುಮಾರಸ್ವಾಮಿ 60% ಆರೋಪ ಮಾಡುತ್ತಿದ್ದಾರೆ ಎಂದು ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ. ನಾನು ಮಗ ಸೋತಿರುವುದಕ್ಕೆ ಹತಾಶನಾಗಿದ್ದೇನೋ ಇಲ್ಲವೋ. ಎಂಬುದ್ಧು ಇರಲಿ. ಅದನ್ನು ಬಿಟ್ಟು ಮೊದಲು 60% ಕಮೀಷನ್ ಬಗ್ಗೆ ಉತ್ತರ ಹೇಳಲಿ ಎಂದು ಸಚಿವರು ಸವಾಲು ಹಾಕಿದರು.

ಕಂದಾಯ ಇಲಾಖೆ ಸತ್ಯ ಮಾರ್ಗದಲ್ಲಿ ನಡೆಯುತ್ತಿದೆಯಾ? ಬೆಂಗಳೂರು AC ಪೋಸ್ಟ್ ಗೆ ಎಷ್ಟು ದುಡ್ಡು ತೆಗೆದುಕೊಳ್ಳುತ್ತಿದ್ದೀರಿ? ಎಷ್ಟು ರೇಟ್ ಫಿಕ್ಸ್ ಮಾಡಿಕೊಂಡಿದ್ದೀರಾ? ಆ ಹಣ ಯಾರು ಯಾರಿಗೆ ಹೋಗುತ್ತದೆ? ಏನೇನು ದಂಧೆ ನಡೆಸುತ್ತಿದ್ದೀರಿ ಎನ್ನುವುದು ನಮಗೆ ಗೊತ್ತಿಲ್ಲವಾ? ಎಂದು ಕಂದಾಯ ಇಲಾಖೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

5 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

8 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

12 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

14 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

15 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

16 hours ago