ಬೆಂಗಳೂರು : ತನಿಖಾ ತಂಡಕ್ಕೆ ಘಟನೆಯ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದೇನೆ. ಕಾನೂನು ಚೌಕಟ್ಟಿನಲ್ಲಿ ಕ್ರಮ ಆಗಲಿದೆ ಎನ್ನುವ ವಿಶ್ವಾಸವಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯಿಸಿದ್ದಾರೆ.
ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ಕಲಾಪದ ವೇಳೆ ಸಚಿವರ ವಿರುದ್ಧ ಬಿಜೆಪಿಯ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಅಶ್ಲೀಲ ಪದ ಬಳಿಸಿದ್ದರು. ಈ ಕುರಿತು ಸಿಒಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿತ್ತು. ಇದರ ಭಾಗವಾಗಿ ಸಿಒಡಿ ಅಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಅಧಿಕಾರಿಗಳ ಎದುರು ಘಟನೆ ಬಗ್ಗೆ ವಿವರಣೆ ನೀಡಿರುವೆ ಎಂದರು.
ಪ್ರಕರಣದ ಬಗ್ಗೆ ಕಾನೂನು ಚೌಕಟ್ಟಿನಲ್ಲಿ ಏನಾಗಬೇಕು ಅದು ಆಗುತ್ತೆ. ನನಗೆ ಅನ್ಯಾಯ ಆಗಿದೆ, ಇದು ಇಡೀ ಮನುಕುಲಕ್ಕೆ ಆಗಿರುವ ಅನ್ಯಾಯ. ನನ್ನ ಜೊತೆ ಎಲ್ಲರೂ ನಿಂತುಕೊಳ್ಳಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಪ್ರಕರಣವನ್ನು ಪ್ರತಿಷ್ಠೆಯಾಗಿ, ರಾಜಕೀಯವಾಗಿ ತೆಗೆದುಕೊಂಡಿಲ್ಲ. ನನಗೆ ಅನ್ಯಾಯ ಆಗಿದೆ. ಇದು ನನ್ನ ಸ್ವಾಭಿಮಾನದ ಪ್ರಶ್ನೆ. ತನಿಖೆ ಈಗಷ್ಟೇ ಆರಂಭವಾಗಿದೆ. ತನಿಖೆ ಸೂಕ್ತ ರೀತಿಯಲ್ಲಿ ನಡೆಯಲಿ. ಈ ಹಂತದಲ್ಲಿ ಹೆಚ್ಚು ಮಾತನಾಡುವುದು ಸರಿಯಲ್ಲ ಎಂದು ಸಚಿವರು ತಿಳಿಸಿದರು.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…