ರಾಜ್ಯ

ಕಾಲ್ತುಳಿತಕ್ಕೆ ಬಲಿಯಾದ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಆರ್‌ಸಿಬಿ

ಬೆಂಗಳೂರು: ರಾಜ್ಯ ಸರ್ಕಾರದ ಬುಡವನ್ನೇ ಅಲುಗಾಡಿಸಿದ್ದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಬೆಂಗಳೂರು ರಾಯಲ್‌ ಚಾಲೆಂಜ್‌ರ್ಸ  ತಂಡ ಸಂತ್ರಸ್ತ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರವನ್ನು ಘೋಷಿಸಿದೆ.

ಸಂತ್ರಸ್ತ ಕುಟುಂಬಗಳಿಗೆ ನಾವು ನೀಡುತ್ತಿರುವುದು ಆರ್ಥಿಕ ನೆರವಲ್ಲ. ತಮ್ಮವರನ್ನು ಕಳೆದುಕೊಂಡವರ ಕುಟುಂಬಗಳಿಗೆ ನಾವು ಕೊಡುತ್ತಿರುವುದು ಕಾಳಜಿ ಮತ್ತು ಸಹಾನುಭೂತಿಯ ಫಲ ಎಂದು ಆರ್‌ಸಿಬಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಘೋಷಣೆ ಮಾಡಿದೆ.

ಕಳೆದ ಜೂ.4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ಕೇಳಿ ನಮ್ಮ ಹೃದಯಗಳು ಛಿದ್ರವಾಗಿಸಿವೆ. ಈ ಘಟನೆ ಎಂದಿಗೂ ಮರೆಯಲು ಸಾಧ್ಯವೇ ಇಲ್ಲ.

ತಮ್ಮವರನ್ನು ಕಳೆದುಕೊಂಡವರಿಗೆ ಸಾಂತ್ವನ ಹೇಳಲು ನಮ್ಮಲ್ಲಿ ಪದಗಳಿಲ್ಲ. ನಾವು ನೀಡುತ್ತಿರುವ ಪರಿಹಾರ ನೊಂದ ಕುಟುಂಬವನ್ನು ಪರಿಹರಿಸುತ್ತದೆ ಎಂಬ ಭಾವನೆಯೂ ಇಲ್ಲ. ಆದರೆ ನಿಮ್ಮ ನೋವಿನಲ್ಲಿ ನಾವಿದ್ದೇವೆ. ನಿಮ್ಮ ಧ್ವನಿಗೆ ನಾವು ದನಿಯಾಗುತ್ತೇವೆ ಎಂದು ಹೇಳಿದೆ.

ಆಂದೋಲನ ಡೆಸ್ಕ್

Recent Posts

ಚಿಪ್ಪುಹಂದಿ ಬೇಟೆಯಾಡಿ ಮಾರಾಟಕ್ಕೆ ಯತ್ನ: ಓರ್ವ ಬಂಧನ

ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…

28 mins ago

ʼದೃಷ್ಟಿ ಉಪಗ್ರಹʼ ಉಡಾವಣೆ ಯಶಸ್ವಿ

ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…

1 hour ago

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

4 hours ago

ನಾಳೆ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ

ನವದೆಹಲಿ: ದೇಶದ ಗಮನ ಸೆಳೆದಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದ್ದು, ಘಟಾನುಘಟಿ ರಾಜಕೀಯ ನಾಯಕರ ಭವಿಷ್ಯ…

4 hours ago

ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ-ಗಂಭೀರ ಗಾಯ

ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ…

5 hours ago

ಕೆ.ಆರ್‌.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಕೆ.ಆರ್.‌ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್‌.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.…

7 hours ago