rcb
ಬೆಂಗಳೂರು: ರಾಜ್ಯ ಸರ್ಕಾರದ ಬುಡವನ್ನೇ ಅಲುಗಾಡಿಸಿದ್ದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಬೆಂಗಳೂರು ರಾಯಲ್ ಚಾಲೆಂಜ್ರ್ಸ ತಂಡ ಸಂತ್ರಸ್ತ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರವನ್ನು ಘೋಷಿಸಿದೆ.
ಸಂತ್ರಸ್ತ ಕುಟುಂಬಗಳಿಗೆ ನಾವು ನೀಡುತ್ತಿರುವುದು ಆರ್ಥಿಕ ನೆರವಲ್ಲ. ತಮ್ಮವರನ್ನು ಕಳೆದುಕೊಂಡವರ ಕುಟುಂಬಗಳಿಗೆ ನಾವು ಕೊಡುತ್ತಿರುವುದು ಕಾಳಜಿ ಮತ್ತು ಸಹಾನುಭೂತಿಯ ಫಲ ಎಂದು ಆರ್ಸಿಬಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಘೋಷಣೆ ಮಾಡಿದೆ.
ಕಳೆದ ಜೂ.4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ಕೇಳಿ ನಮ್ಮ ಹೃದಯಗಳು ಛಿದ್ರವಾಗಿಸಿವೆ. ಈ ಘಟನೆ ಎಂದಿಗೂ ಮರೆಯಲು ಸಾಧ್ಯವೇ ಇಲ್ಲ.
ತಮ್ಮವರನ್ನು ಕಳೆದುಕೊಂಡವರಿಗೆ ಸಾಂತ್ವನ ಹೇಳಲು ನಮ್ಮಲ್ಲಿ ಪದಗಳಿಲ್ಲ. ನಾವು ನೀಡುತ್ತಿರುವ ಪರಿಹಾರ ನೊಂದ ಕುಟುಂಬವನ್ನು ಪರಿಹರಿಸುತ್ತದೆ ಎಂಬ ಭಾವನೆಯೂ ಇಲ್ಲ. ಆದರೆ ನಿಮ್ಮ ನೋವಿನಲ್ಲಿ ನಾವಿದ್ದೇವೆ. ನಿಮ್ಮ ಧ್ವನಿಗೆ ನಾವು ದನಿಯಾಗುತ್ತೇವೆ ಎಂದು ಹೇಳಿದೆ.
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…
ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…
ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…