ರಾಜ್ಯ

ಕಾಲ್ತುಳಿತಕ್ಕೆ ಬಲಿಯಾದ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಆರ್‌ಸಿಬಿ

ಬೆಂಗಳೂರು: ರಾಜ್ಯ ಸರ್ಕಾರದ ಬುಡವನ್ನೇ ಅಲುಗಾಡಿಸಿದ್ದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಬೆಂಗಳೂರು ರಾಯಲ್‌ ಚಾಲೆಂಜ್‌ರ್ಸ  ತಂಡ ಸಂತ್ರಸ್ತ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರವನ್ನು ಘೋಷಿಸಿದೆ.

ಸಂತ್ರಸ್ತ ಕುಟುಂಬಗಳಿಗೆ ನಾವು ನೀಡುತ್ತಿರುವುದು ಆರ್ಥಿಕ ನೆರವಲ್ಲ. ತಮ್ಮವರನ್ನು ಕಳೆದುಕೊಂಡವರ ಕುಟುಂಬಗಳಿಗೆ ನಾವು ಕೊಡುತ್ತಿರುವುದು ಕಾಳಜಿ ಮತ್ತು ಸಹಾನುಭೂತಿಯ ಫಲ ಎಂದು ಆರ್‌ಸಿಬಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಘೋಷಣೆ ಮಾಡಿದೆ.

ಕಳೆದ ಜೂ.4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ಕೇಳಿ ನಮ್ಮ ಹೃದಯಗಳು ಛಿದ್ರವಾಗಿಸಿವೆ. ಈ ಘಟನೆ ಎಂದಿಗೂ ಮರೆಯಲು ಸಾಧ್ಯವೇ ಇಲ್ಲ.

ತಮ್ಮವರನ್ನು ಕಳೆದುಕೊಂಡವರಿಗೆ ಸಾಂತ್ವನ ಹೇಳಲು ನಮ್ಮಲ್ಲಿ ಪದಗಳಿಲ್ಲ. ನಾವು ನೀಡುತ್ತಿರುವ ಪರಿಹಾರ ನೊಂದ ಕುಟುಂಬವನ್ನು ಪರಿಹರಿಸುತ್ತದೆ ಎಂಬ ಭಾವನೆಯೂ ಇಲ್ಲ. ಆದರೆ ನಿಮ್ಮ ನೋವಿನಲ್ಲಿ ನಾವಿದ್ದೇವೆ. ನಿಮ್ಮ ಧ್ವನಿಗೆ ನಾವು ದನಿಯಾಗುತ್ತೇವೆ ಎಂದು ಹೇಳಿದೆ.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

3 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

6 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

6 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

10 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

15 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

15 hours ago