ರಾಜ್ಯ

ಆರ್.ಸಿ.ಬಿ ಕಾಲ್ತುಳಿತ : ಸಿಎಂ ಕ್ಷಮೆಯಾಚನೆಗೆ ಪಟ್ಟು ಹಿಡಿದು ಸಭಾತ್ಯಾಗ ಮಾಡಿದ ಪ್ರತಿಪಕ್ಷಗಳು

ಬೆಂಗಳೂರು : ಆರ್.ಸಿ.ಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿರುವ ಕಾಲ್ತುಳಿತ ಪ್ರಕರಣಕ್ಕೆ ರಾಜ್ಯ ಸರ್ಕಾರವೇ ಹೊಣೆಗಾರಿಕೆಯಾಗಿದ್ದು, ಮುಖ್ಯಮಂತ್ರಿಯವರು ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ವಿರೋಧ ಪಕ್ಷಗಳು ಪಟ್ಟು ಹಿಡಿದಿದ್ದು, ಸರ್ಕಾರದ ಉತ್ತರದಿಂದ ಅಸಮಾಧಾನಗೊಂಡು ಸಭಾತ್ಯಾಗ ನಡೆಸಿದವು.

ಚಿನ್ನಸ್ವಾಮಿ ಕ್ರೀಡಾಂಗದ ಬಳಿಯ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಧಾನ ಮಂಡಲದ ಅಧಿವೇಶನದಲ್ಲಿ ನಡೆದ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದೀರ್ಘ ಉತ್ತರ ನೀಡಿದರು. ಬಳಿಕ ಸ್ಪಷ್ಟನೆ ಕೇಳಿದ ಬಿಜೆಪಿಯ ಅರಗ ಜ್ಞಾನೇಂದ್ರ, ರಾಜ್ಯ ಸರ್ಕಾರ ಸಮರ್ಪಕವಾದ ಬಂದೋಬಸ್ತ್ ಆಯೋಜಿಸಿರಲಿಲ್ಲ. ಹೀಗಾಗಿ ಅಮಾಯಕರ ಸಾವಿಗೆ ರಾಜ್ಯ ಸರ್ಕಾರವೇ ಹೊಣೆ ಎಂದು ವಾಗ್ದಾಳಿ ನಡೆಸಿದರು.

ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಸೌಧದ ಮುಂದೆ ಆರ್‍ಸಿಬಿ ಆಟಗಾರರನ್ನು ಅಭಿನಂದಿಸುವಾಗಲೇ ಕಾಲ್ತುಳಿತವಾಗಿತ್ತು. ಕೆಲವರು ಮೃತಪಟ್ಟಿದ್ದರು. ಈ ವಿಚಾರ ತಮಗೆ ಗೊತ್ತೇ ಇಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಇದು ಗುಪ್ತದಳ ಮತ್ತು ಸರ್ಕಾರದ ವೈಫಲ್ಯವನ್ನು ತೋರಿಸುತ್ತದೆ ಎಂದರು.

ಕಾರ್ಯಕ್ರಮ ಮಾಡಿದ್ದು ಸರ್ಕಾರ, ಪೊಲೀಸ್ ಇಲಾಖೆ ಅಲ್ಲ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಅವರು ಅಭಿಮಾನಿಗಳಿಗೆ ವಿಧಾನಸೌಧದ ಬಳಿ ಬರಬೇಡಿ ಕ್ರೀಡಾಂಗಣದ ಬಳಿ ಕಾರ್ಯಕ್ರಮ ಇದೆ. ಅಲ್ಲಿ ಹೋಗಿ ಎಂದು ಎರಡು ಬಾರಿ ಪತ್ರಿಕಾಗೋಷ್ಠಿ ನಡೆಸಿ ಹೇಳಿದ್ದಾರೆ. ಹೀಗಾಗಿ ಸರ್ಕಾರವೇ ಹೊಣೆ ಎಂದರು.

ಜನಸಂದಣಿ ನಿರ್ವಹಣೆಯ ಬಗ್ಗೆ ನೆನ್ನೆ ವಿಧಾನಸಭೆಯಲ್ಲಿ ಮಸೂದೆಯೊಂದನ್ನು ಮಂಡಿಸಲಾಗಿತ್ತು. ಅದರ ಅಗತ್ಯ ಇರಲಿಲ್ಲ. 2009ರಲ್ಲೇ ಪ್ರಮಾಣಿತ ಕಾರ್ಯ ಸೂಚಿಯನ್ನು ರೂಪಿಸಲಾಗಿದೆ. ಅದರಲ್ಲಿ ಪೂರ್ವಾನುಮತಿ ಪಡೆಯುವುದು ಸೇರಿದಂತೆ ಎಲ್ಲಾ ರೀತಿಯ ಸೂಚನೆಗಳಿವೆ. ಆರ್‌ಸಿಬಿ ವಿಜಯೋತ್ಸವ ಬೇಡ ಎಂದು ವಿಧಾನಸೌಧದ ಭದ್ರತಾ ಅಧಿಕಾರಿ ಪತ್ರ ಬರೆದಿದ್ದರು. ಅದನ್ನು ಉಲ್ಲಂಘಿಸಿ ಕಾರ್ಯಕ್ರಮ ಮಾಡಲಾಗಿದೆ ಎಂದು ಟೀಕಿಸಿದರು.

ಕರ್ನಾಟಕ ಕ್ರಿಕೆಟ್ ಸಂಸ್ಥೆ ಹೈಕೋರ್ಟ್‍ಗೆ ಪ್ರಮಾಣಪತ್ರ ಸಲ್ಲಿಸಿ ದುರ್ಘಟನೆಗೆ ರಾಜ್ಯ ಸರ್ಕಾರವೇ ಹೊಣೆ. ಐಪಿಎಲ್ ಆಟಗಾರರನ್ನು ಕರೆತರುವಂತೆ ಸರ್ಕಾರವೇ ಕೇಳಿಕೊಂಡಿತ್ತು. ನಮಗೆ ವಿಜಯೋತ್ಸವ ಮಾಡುವ ಉದ್ದೇಶ ಇರಲಿಲ್ಲ. ಜನಾಕೋಶದಿಂದ ತಪ್ಪಿಸಿಕೊಳ್ಳಲು ಸರ್ಕಾರ ನಮ ಮೇಲೆ ಆರೋಪ ಮಾಡಿದೆ ಎಂದು ದೂರಿದ್ದಾರೆ. ಸರ್ಕಾರ ಈ ಆರೋಪಕ್ಕೆ ಯಾವ ರೀತಿಯ ಉತ್ತರ ನೀಡಿದೆ ಎಂದು ಅಶೋಕ್ ಪ್ರಶ್ನಿಸಿದರು.

ಸರ್ಕಾರದಿಂದ ಲೋಪಗಳಾಗಿವೆ. ತಪ್ಪಾಗಿದೆ ಎಂದು ಕೇಳಿಕೊಂಡರೆ. ಮುಖ್ಯಮಂತ್ರಿ ಅವರ ಮೇಲಿರುವ ಕಪ್ಪು ಚುಕ್ಕೆ ಅಳಿಸಿ ಹೋಗುತ್ತದೆ. ಕ್ಷಮೆ ಕೇಳುವುದರಿಂದ ಯಾರೂ ಚಿಕ್ಕವರಾಗುವುದಿಲ್ಲ. ತಪ್ಪನ್ನು ಒಪ್ಪಿಕೊಳ್ಳಿ ಎಂದು ಅಶೋಕ್ ಆಗ್ರಹಿಸಿದರು.

ಸರ್ಕಾರದಿಂದ ಇದಕ್ಕೆ ಪ್ರತಿಕ್ರಿಯೆ ಬರದೇ ಇದ್ದಾಗ ಮುಖ್ಯಮಂತ್ರಿಯವರು ಕ್ಷಮೆ ಕೇಳುತ್ತಿಲ್ಲ 11 ಜನರ ಸಾವಿಗೆ ಸರ್ಕಾರವೇ ಹೊಣೆ. ಇದನ್ನು ಸರ್ಕಾರದ ಉತ್ತರವನ್ನು ವಿರೋಧಿಸಿ ನಾವು ಸಭಾತ್ಯಾ ಮಾಡುತ್ತಿದ್ದೇವೆ ಎಂದು ಹೇಳಿ ಹೊರ ನಡೆದರು. ಜೆಡಿಎಸ್-ಬಿಜೆಪಿ ಶಾಸಕರು ವಿರೋಧ ಪಕ್ಷದ ನಾಯಕರನ್ನು ಅನುಸರಿಸಿ ಹೊರನಡೆದರು.

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

45 mins ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

1 hour ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

3 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

3 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

4 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

4 hours ago