ರಾಜ್ಯ

ಆರ್.ಸಿ.ಬಿ ಕಾಲ್ತುಳಿತ : ಸಿಎಂ ಕ್ಷಮೆಯಾಚನೆಗೆ ಪಟ್ಟು ಹಿಡಿದು ಸಭಾತ್ಯಾಗ ಮಾಡಿದ ಪ್ರತಿಪಕ್ಷಗಳು

ಬೆಂಗಳೂರು : ಆರ್.ಸಿ.ಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿರುವ ಕಾಲ್ತುಳಿತ ಪ್ರಕರಣಕ್ಕೆ ರಾಜ್ಯ ಸರ್ಕಾರವೇ ಹೊಣೆಗಾರಿಕೆಯಾಗಿದ್ದು, ಮುಖ್ಯಮಂತ್ರಿಯವರು ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ವಿರೋಧ ಪಕ್ಷಗಳು ಪಟ್ಟು ಹಿಡಿದಿದ್ದು, ಸರ್ಕಾರದ ಉತ್ತರದಿಂದ ಅಸಮಾಧಾನಗೊಂಡು ಸಭಾತ್ಯಾಗ ನಡೆಸಿದವು.

ಚಿನ್ನಸ್ವಾಮಿ ಕ್ರೀಡಾಂಗದ ಬಳಿಯ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಧಾನ ಮಂಡಲದ ಅಧಿವೇಶನದಲ್ಲಿ ನಡೆದ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದೀರ್ಘ ಉತ್ತರ ನೀಡಿದರು. ಬಳಿಕ ಸ್ಪಷ್ಟನೆ ಕೇಳಿದ ಬಿಜೆಪಿಯ ಅರಗ ಜ್ಞಾನೇಂದ್ರ, ರಾಜ್ಯ ಸರ್ಕಾರ ಸಮರ್ಪಕವಾದ ಬಂದೋಬಸ್ತ್ ಆಯೋಜಿಸಿರಲಿಲ್ಲ. ಹೀಗಾಗಿ ಅಮಾಯಕರ ಸಾವಿಗೆ ರಾಜ್ಯ ಸರ್ಕಾರವೇ ಹೊಣೆ ಎಂದು ವಾಗ್ದಾಳಿ ನಡೆಸಿದರು.

ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಸೌಧದ ಮುಂದೆ ಆರ್‍ಸಿಬಿ ಆಟಗಾರರನ್ನು ಅಭಿನಂದಿಸುವಾಗಲೇ ಕಾಲ್ತುಳಿತವಾಗಿತ್ತು. ಕೆಲವರು ಮೃತಪಟ್ಟಿದ್ದರು. ಈ ವಿಚಾರ ತಮಗೆ ಗೊತ್ತೇ ಇಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಇದು ಗುಪ್ತದಳ ಮತ್ತು ಸರ್ಕಾರದ ವೈಫಲ್ಯವನ್ನು ತೋರಿಸುತ್ತದೆ ಎಂದರು.

ಕಾರ್ಯಕ್ರಮ ಮಾಡಿದ್ದು ಸರ್ಕಾರ, ಪೊಲೀಸ್ ಇಲಾಖೆ ಅಲ್ಲ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಅವರು ಅಭಿಮಾನಿಗಳಿಗೆ ವಿಧಾನಸೌಧದ ಬಳಿ ಬರಬೇಡಿ ಕ್ರೀಡಾಂಗಣದ ಬಳಿ ಕಾರ್ಯಕ್ರಮ ಇದೆ. ಅಲ್ಲಿ ಹೋಗಿ ಎಂದು ಎರಡು ಬಾರಿ ಪತ್ರಿಕಾಗೋಷ್ಠಿ ನಡೆಸಿ ಹೇಳಿದ್ದಾರೆ. ಹೀಗಾಗಿ ಸರ್ಕಾರವೇ ಹೊಣೆ ಎಂದರು.

ಜನಸಂದಣಿ ನಿರ್ವಹಣೆಯ ಬಗ್ಗೆ ನೆನ್ನೆ ವಿಧಾನಸಭೆಯಲ್ಲಿ ಮಸೂದೆಯೊಂದನ್ನು ಮಂಡಿಸಲಾಗಿತ್ತು. ಅದರ ಅಗತ್ಯ ಇರಲಿಲ್ಲ. 2009ರಲ್ಲೇ ಪ್ರಮಾಣಿತ ಕಾರ್ಯ ಸೂಚಿಯನ್ನು ರೂಪಿಸಲಾಗಿದೆ. ಅದರಲ್ಲಿ ಪೂರ್ವಾನುಮತಿ ಪಡೆಯುವುದು ಸೇರಿದಂತೆ ಎಲ್ಲಾ ರೀತಿಯ ಸೂಚನೆಗಳಿವೆ. ಆರ್‌ಸಿಬಿ ವಿಜಯೋತ್ಸವ ಬೇಡ ಎಂದು ವಿಧಾನಸೌಧದ ಭದ್ರತಾ ಅಧಿಕಾರಿ ಪತ್ರ ಬರೆದಿದ್ದರು. ಅದನ್ನು ಉಲ್ಲಂಘಿಸಿ ಕಾರ್ಯಕ್ರಮ ಮಾಡಲಾಗಿದೆ ಎಂದು ಟೀಕಿಸಿದರು.

ಕರ್ನಾಟಕ ಕ್ರಿಕೆಟ್ ಸಂಸ್ಥೆ ಹೈಕೋರ್ಟ್‍ಗೆ ಪ್ರಮಾಣಪತ್ರ ಸಲ್ಲಿಸಿ ದುರ್ಘಟನೆಗೆ ರಾಜ್ಯ ಸರ್ಕಾರವೇ ಹೊಣೆ. ಐಪಿಎಲ್ ಆಟಗಾರರನ್ನು ಕರೆತರುವಂತೆ ಸರ್ಕಾರವೇ ಕೇಳಿಕೊಂಡಿತ್ತು. ನಮಗೆ ವಿಜಯೋತ್ಸವ ಮಾಡುವ ಉದ್ದೇಶ ಇರಲಿಲ್ಲ. ಜನಾಕೋಶದಿಂದ ತಪ್ಪಿಸಿಕೊಳ್ಳಲು ಸರ್ಕಾರ ನಮ ಮೇಲೆ ಆರೋಪ ಮಾಡಿದೆ ಎಂದು ದೂರಿದ್ದಾರೆ. ಸರ್ಕಾರ ಈ ಆರೋಪಕ್ಕೆ ಯಾವ ರೀತಿಯ ಉತ್ತರ ನೀಡಿದೆ ಎಂದು ಅಶೋಕ್ ಪ್ರಶ್ನಿಸಿದರು.

ಸರ್ಕಾರದಿಂದ ಲೋಪಗಳಾಗಿವೆ. ತಪ್ಪಾಗಿದೆ ಎಂದು ಕೇಳಿಕೊಂಡರೆ. ಮುಖ್ಯಮಂತ್ರಿ ಅವರ ಮೇಲಿರುವ ಕಪ್ಪು ಚುಕ್ಕೆ ಅಳಿಸಿ ಹೋಗುತ್ತದೆ. ಕ್ಷಮೆ ಕೇಳುವುದರಿಂದ ಯಾರೂ ಚಿಕ್ಕವರಾಗುವುದಿಲ್ಲ. ತಪ್ಪನ್ನು ಒಪ್ಪಿಕೊಳ್ಳಿ ಎಂದು ಅಶೋಕ್ ಆಗ್ರಹಿಸಿದರು.

ಸರ್ಕಾರದಿಂದ ಇದಕ್ಕೆ ಪ್ರತಿಕ್ರಿಯೆ ಬರದೇ ಇದ್ದಾಗ ಮುಖ್ಯಮಂತ್ರಿಯವರು ಕ್ಷಮೆ ಕೇಳುತ್ತಿಲ್ಲ 11 ಜನರ ಸಾವಿಗೆ ಸರ್ಕಾರವೇ ಹೊಣೆ. ಇದನ್ನು ಸರ್ಕಾರದ ಉತ್ತರವನ್ನು ವಿರೋಧಿಸಿ ನಾವು ಸಭಾತ್ಯಾ ಮಾಡುತ್ತಿದ್ದೇವೆ ಎಂದು ಹೇಳಿ ಹೊರ ನಡೆದರು. ಜೆಡಿಎಸ್-ಬಿಜೆಪಿ ಶಾಸಕರು ವಿರೋಧ ಪಕ್ಷದ ನಾಯಕರನ್ನು ಅನುಸರಿಸಿ ಹೊರನಡೆದರು.

ಆಂದೋಲನ ಡೆಸ್ಕ್

Recent Posts

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

1 hour ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

1 hour ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

2 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

5 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

5 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

6 hours ago