ರಾಜ್ಯ

ಬಿಜೆಪಿ ಅವಧಿಯಲ್ಲಿನ ಎಸ್‌ಸಿ ಒಳ ಮೀಸಲಾತಿ ಪುನರ್‌ ಪರಿಶೀಲನೆ: ಪರಮೇಶ್ವರ್‌

ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿಗೆ (ಎಸ್‌ಸಿ) ನೀಡಲಾಗಿದ್ದ ಒಳ ಮೀಸಲಾತಿಯ ಬಗ್ಗೆ ಪುನರ್‌ ಪರಿಶೀಲನೆ ನಡೆಸಲಾಗುವುದು ಎದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ತನ್ನ ಅಧಿಕಾರಾವಧಿಯಲ್ಲಿ ಪರಿಶಿಷ್ಟ ಜಾತಿಗೆ ಕಾನೂನಾತ್ಮಕವಾಗಿ ಒಳಮೀಸಲಾತಿಯನ್ನು ನೀಡಿಲ್ಲ. ಹಾಗಾಗಿ, ಬಿಜೆಪಿ ನೀಡಿದ್ದ ಒಳ ಮೀಸಲಾತಿಯನ್ನು ಪುನರ್‌ ಪರಿಶೀಲನೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರ ಸದಾಶಿ ಆಯೋಗದ ವರದಿಯನ್ನು ತಿರಸ್ಕಾರ ಮಾಡಿತ್ತು. ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಂಬಂಧ ಅಂತಿಮ ನಿರ್ಣಯ ಕೈಗೊಳ್ಳಲು ನಿರ್ಧರಿಸಲಾಗಿದ್ದು, ಕಾನೂನಾತ್ಮಕವಾಗಿ ಮೀಸಲಾತಿ ನೀಡುವಾಗ ನಾವೇ ಸಂವಿಧಾನಕ್ಕೆ ತಿದ್ದುಪಡಿ ಮಾಡಲು ಆಗುವುದಿಲ್ಲ. ಹಾಗಾಗಿ ಸಂವಿಧಾನ ತಿದ್ದುಪಡಿ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಕಳುಹಿಸುವ ಬಗ್ಗೆ ಇವತ್ತಿನ ಸಂಪುಟದಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.

ನಿಗಮ ಮಂಡಳಿ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ, ಅಧ್ಯಕ್ಷರ ನೇಮಕ ಪಟ್ಟಿ ಶೀಘ್ರದಲ್ಲೇ ಪ್ರಕಟವಾಗಲಿದೆ. ಮಾಧ್ಯಮಗಳಲ್ಲಿ ಬಂದ ಮೇಲೆ ಪ್ರಕಟಿಸಲೇ ಬೇಕಲ್ಲ ಎಂದರು.

ಸಂಸದ ಅನಂತಕುಮಾರ್‌ ಹೆಗಡೆ ವಿಚಾರಕ್ಕೆ ಸಂಬಂಧಿಸಿದಂತೆ, ನಾವು ಅನಂತ್‌ ಕುಮಾರ್‌ ವಿಷಯದಲ್ಲಿ ಸಂಯಮದಿಂದ ವರ್ತಿಸಬೇಕು. ಕೇಂದ್ರ ಸಚಿವರಾಗಿರುವ ಅವರು ಅರ್ಥಮಾಡಿಕೊಂಡು ಮಾತನಾಡಬೇಕು. ಇದು ಪೊಲೀಸರ ದೌರ್ಬಲ್ಯ ಅಲ್ಲ. ಇದೇ ರೀತಿ ಮಾತುಗಳನ್ನು ಮುಂದುವರೆಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಇನ್ನೂ ಲೋಕಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ ವಿಚಾರವಾಗಿ ಮಾತನಾಡಿದ ಸಚಿವರು, ಮಲ್ಲಿಕಾರ್ಜುನ ಖರ್ಗೆ ಅವರು ಸ್ಪರ್ಧೆ ಮಾಡುವ ವಿಚಾರ ಗೊತ್ತಿಲ್ಲ. ಈ ಬಗ್ಗೆ ಅವರೂ ನಮ್ಮೊಂದಿಗೆ ಚರ್ಚಿಸಿಲ್ಲ ಎಂದು ಹೇಳಿದರು.

andolanait

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

6 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

7 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

7 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

7 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

7 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

8 hours ago