ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿಗೆ (ಎಸ್ಸಿ) ನೀಡಲಾಗಿದ್ದ ಒಳ ಮೀಸಲಾತಿಯ ಬಗ್ಗೆ ಪುನರ್ ಪರಿಶೀಲನೆ ನಡೆಸಲಾಗುವುದು ಎದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ತನ್ನ ಅಧಿಕಾರಾವಧಿಯಲ್ಲಿ ಪರಿಶಿಷ್ಟ ಜಾತಿಗೆ ಕಾನೂನಾತ್ಮಕವಾಗಿ ಒಳಮೀಸಲಾತಿಯನ್ನು ನೀಡಿಲ್ಲ. ಹಾಗಾಗಿ, ಬಿಜೆಪಿ ನೀಡಿದ್ದ ಒಳ ಮೀಸಲಾತಿಯನ್ನು ಪುನರ್ ಪರಿಶೀಲನೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಹಿಂದಿನ ಬಿಜೆಪಿ ಸರ್ಕಾರ ಸದಾಶಿ ಆಯೋಗದ ವರದಿಯನ್ನು ತಿರಸ್ಕಾರ ಮಾಡಿತ್ತು. ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಂಬಂಧ ಅಂತಿಮ ನಿರ್ಣಯ ಕೈಗೊಳ್ಳಲು ನಿರ್ಧರಿಸಲಾಗಿದ್ದು, ಕಾನೂನಾತ್ಮಕವಾಗಿ ಮೀಸಲಾತಿ ನೀಡುವಾಗ ನಾವೇ ಸಂವಿಧಾನಕ್ಕೆ ತಿದ್ದುಪಡಿ ಮಾಡಲು ಆಗುವುದಿಲ್ಲ. ಹಾಗಾಗಿ ಸಂವಿಧಾನ ತಿದ್ದುಪಡಿ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಕಳುಹಿಸುವ ಬಗ್ಗೆ ಇವತ್ತಿನ ಸಂಪುಟದಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.
ನಿಗಮ ಮಂಡಳಿ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ, ಅಧ್ಯಕ್ಷರ ನೇಮಕ ಪಟ್ಟಿ ಶೀಘ್ರದಲ್ಲೇ ಪ್ರಕಟವಾಗಲಿದೆ. ಮಾಧ್ಯಮಗಳಲ್ಲಿ ಬಂದ ಮೇಲೆ ಪ್ರಕಟಿಸಲೇ ಬೇಕಲ್ಲ ಎಂದರು.
ಸಂಸದ ಅನಂತಕುಮಾರ್ ಹೆಗಡೆ ವಿಚಾರಕ್ಕೆ ಸಂಬಂಧಿಸಿದಂತೆ, ನಾವು ಅನಂತ್ ಕುಮಾರ್ ವಿಷಯದಲ್ಲಿ ಸಂಯಮದಿಂದ ವರ್ತಿಸಬೇಕು. ಕೇಂದ್ರ ಸಚಿವರಾಗಿರುವ ಅವರು ಅರ್ಥಮಾಡಿಕೊಂಡು ಮಾತನಾಡಬೇಕು. ಇದು ಪೊಲೀಸರ ದೌರ್ಬಲ್ಯ ಅಲ್ಲ. ಇದೇ ರೀತಿ ಮಾತುಗಳನ್ನು ಮುಂದುವರೆಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಇನ್ನೂ ಲೋಕಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ ವಿಚಾರವಾಗಿ ಮಾತನಾಡಿದ ಸಚಿವರು, ಮಲ್ಲಿಕಾರ್ಜುನ ಖರ್ಗೆ ಅವರು ಸ್ಪರ್ಧೆ ಮಾಡುವ ವಿಚಾರ ಗೊತ್ತಿಲ್ಲ. ಈ ಬಗ್ಗೆ ಅವರೂ ನಮ್ಮೊಂದಿಗೆ ಚರ್ಚಿಸಿಲ್ಲ ಎಂದು ಹೇಳಿದರು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…