ರಾಜ್ಯ

ಬಿಜೆಪಿ ಅವಧಿಯಲ್ಲಿನ ಎಸ್‌ಸಿ ಒಳ ಮೀಸಲಾತಿ ಪುನರ್‌ ಪರಿಶೀಲನೆ: ಪರಮೇಶ್ವರ್‌

ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿಗೆ (ಎಸ್‌ಸಿ) ನೀಡಲಾಗಿದ್ದ ಒಳ ಮೀಸಲಾತಿಯ ಬಗ್ಗೆ ಪುನರ್‌ ಪರಿಶೀಲನೆ ನಡೆಸಲಾಗುವುದು ಎದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ತನ್ನ ಅಧಿಕಾರಾವಧಿಯಲ್ಲಿ ಪರಿಶಿಷ್ಟ ಜಾತಿಗೆ ಕಾನೂನಾತ್ಮಕವಾಗಿ ಒಳಮೀಸಲಾತಿಯನ್ನು ನೀಡಿಲ್ಲ. ಹಾಗಾಗಿ, ಬಿಜೆಪಿ ನೀಡಿದ್ದ ಒಳ ಮೀಸಲಾತಿಯನ್ನು ಪುನರ್‌ ಪರಿಶೀಲನೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರ ಸದಾಶಿ ಆಯೋಗದ ವರದಿಯನ್ನು ತಿರಸ್ಕಾರ ಮಾಡಿತ್ತು. ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಂಬಂಧ ಅಂತಿಮ ನಿರ್ಣಯ ಕೈಗೊಳ್ಳಲು ನಿರ್ಧರಿಸಲಾಗಿದ್ದು, ಕಾನೂನಾತ್ಮಕವಾಗಿ ಮೀಸಲಾತಿ ನೀಡುವಾಗ ನಾವೇ ಸಂವಿಧಾನಕ್ಕೆ ತಿದ್ದುಪಡಿ ಮಾಡಲು ಆಗುವುದಿಲ್ಲ. ಹಾಗಾಗಿ ಸಂವಿಧಾನ ತಿದ್ದುಪಡಿ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಕಳುಹಿಸುವ ಬಗ್ಗೆ ಇವತ್ತಿನ ಸಂಪುಟದಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.

ನಿಗಮ ಮಂಡಳಿ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ, ಅಧ್ಯಕ್ಷರ ನೇಮಕ ಪಟ್ಟಿ ಶೀಘ್ರದಲ್ಲೇ ಪ್ರಕಟವಾಗಲಿದೆ. ಮಾಧ್ಯಮಗಳಲ್ಲಿ ಬಂದ ಮೇಲೆ ಪ್ರಕಟಿಸಲೇ ಬೇಕಲ್ಲ ಎಂದರು.

ಸಂಸದ ಅನಂತಕುಮಾರ್‌ ಹೆಗಡೆ ವಿಚಾರಕ್ಕೆ ಸಂಬಂಧಿಸಿದಂತೆ, ನಾವು ಅನಂತ್‌ ಕುಮಾರ್‌ ವಿಷಯದಲ್ಲಿ ಸಂಯಮದಿಂದ ವರ್ತಿಸಬೇಕು. ಕೇಂದ್ರ ಸಚಿವರಾಗಿರುವ ಅವರು ಅರ್ಥಮಾಡಿಕೊಂಡು ಮಾತನಾಡಬೇಕು. ಇದು ಪೊಲೀಸರ ದೌರ್ಬಲ್ಯ ಅಲ್ಲ. ಇದೇ ರೀತಿ ಮಾತುಗಳನ್ನು ಮುಂದುವರೆಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಇನ್ನೂ ಲೋಕಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ ವಿಚಾರವಾಗಿ ಮಾತನಾಡಿದ ಸಚಿವರು, ಮಲ್ಲಿಕಾರ್ಜುನ ಖರ್ಗೆ ಅವರು ಸ್ಪರ್ಧೆ ಮಾಡುವ ವಿಚಾರ ಗೊತ್ತಿಲ್ಲ. ಈ ಬಗ್ಗೆ ಅವರೂ ನಮ್ಮೊಂದಿಗೆ ಚರ್ಚಿಸಿಲ್ಲ ಎಂದು ಹೇಳಿದರು.

andolanait

Recent Posts

ಮೇ.20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…

6 hours ago

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

7 hours ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

8 hours ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

8 hours ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

9 hours ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

12 hours ago