ರಾಜ್ಯ

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಬೆಳಗಿನ ಪ್ರಾರ್ಥನೆ ಸಮಯದಲ್ಲಿ ಕನಿಷ್ಠ 10 ನಿಮಿಷ ಮಕ್ಕಳಿಗೆ ಸುದ್ದಿಪತ್ರಿಕೆ ಓದುವಂತೆ ಸೂಚನೆ ನೀಡಲಾಗಿದೆ.

ಡಿಜಿಟಲ್ ಯುಗದಲ್ಲಿ ಮಕ್ಕಳು ಹೆಚ್ಚಾಗಿ ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸಮಯ ಕಳೆಯುತ್ತಿರುವ ಹಿನ್ನೆಲೆಯಲ್ಲಿ, ಅವರ ಒಟ್ಟಾರೆ ಬೆಳವಣಿಗೆಯಲ್ಲಿ ಕೆಲವು ಹಿನ್ನಡೆಯ ಲಕ್ಷಣಗಳು ಕಂಡು ಬರುತ್ತಿವೆ. ವಿಶೇಷವಾಗಿ ಜ್ಞಾಪಕ ಶಕ್ತಿ ಕುಂದು, ಶ್ರವಣದೋಷ, ಹಾಗೂ ದೈಹಿಕ ಚಟುವಟಿಕೆಗಳಲ್ಲಿ ಆಸಕ್ತಿ ಕಡಿಮೆಯಾಗುತ್ತಿರುವುದು ಗಮನಕ್ಕೆ ಬಂದಿದೆ.

ಈ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಲ್ಲಿ ಓದು ಅಭ್ಯಾಸ ಬೆಳೆಸಲು ದಿನಪತ್ರಿಕೆ ಓದುವಿಕೆಯನ್ನು ಉತ್ತೇಜಿಸುವ ಕ್ರಮ ಕೈಗೊಳ್ಳಲಾಗಿದೆ. ದಿನನಿತ್ಯ ಪತ್ರಿಕೆ ಓದುವುದರಿಂದ ಪ್ರಚಲಿತ ವಿದ್ಯಮಾನಗಳ ಅರಿವು ಹೆಚ್ಚುತ್ತದೆ ಸಾಮಾನ್ಯ ಜ್ಞಾನ ವೃದ್ಧಿಯಾಗುತ್ತದೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಸುಲಭವಾಗುತ್ತದೆ ಶಬ್ದಕೋಶ, ಭಾಷಾ ಶೈಲಿ ಮತ್ತು ಬರವಣಿಗೆ ಕೌಶಲ್ಯ ಸುಧಾರಣೆ ಆಗುತ್ತದೆ. ಈ ಸಂಬಂಧ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಶಿಕ್ಷಣ ಇಲಾಖೆಗೆ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿತ್ತು. ಆ ಪತ್ರದಲ್ಲಿನ ಅಂಶಗಳನ್ನು ಪರಿಶೀಲಿಸಿದ ಶಿಕ್ಷಣ ಇಲಾಖೆ, ನಿಯಮಾನುಸಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.

ಇದರಿಂದ ರಾಜ್ಯದ ಎಲ್ಲಾ ಶಾಲೆಗಳು ಹಾಗೂ ವಿವಿಧ ಇಲಾಖೆಗಳ ಅಡಿಯಲ್ಲಿ ನಡೆಯುವ ವಸತಿ ಶಾಲೆಗಳು ಮತ್ತು ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದುವುದು ಕಡ್ಡಾಯವಾಗಲಿದೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

13 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

16 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

16 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

16 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

17 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

17 hours ago