ರಾಜ್ಯ

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಬೆಳಗಿನ ಪ್ರಾರ್ಥನೆ ಸಮಯದಲ್ಲಿ ಕನಿಷ್ಠ 10 ನಿಮಿಷ ಮಕ್ಕಳಿಗೆ ಸುದ್ದಿಪತ್ರಿಕೆ ಓದುವಂತೆ ಸೂಚನೆ ನೀಡಲಾಗಿದೆ.

ಡಿಜಿಟಲ್ ಯುಗದಲ್ಲಿ ಮಕ್ಕಳು ಹೆಚ್ಚಾಗಿ ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸಮಯ ಕಳೆಯುತ್ತಿರುವ ಹಿನ್ನೆಲೆಯಲ್ಲಿ, ಅವರ ಒಟ್ಟಾರೆ ಬೆಳವಣಿಗೆಯಲ್ಲಿ ಕೆಲವು ಹಿನ್ನಡೆಯ ಲಕ್ಷಣಗಳು ಕಂಡು ಬರುತ್ತಿವೆ. ವಿಶೇಷವಾಗಿ ಜ್ಞಾಪಕ ಶಕ್ತಿ ಕುಂದು, ಶ್ರವಣದೋಷ, ಹಾಗೂ ದೈಹಿಕ ಚಟುವಟಿಕೆಗಳಲ್ಲಿ ಆಸಕ್ತಿ ಕಡಿಮೆಯಾಗುತ್ತಿರುವುದು ಗಮನಕ್ಕೆ ಬಂದಿದೆ.

ಈ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಲ್ಲಿ ಓದು ಅಭ್ಯಾಸ ಬೆಳೆಸಲು ದಿನಪತ್ರಿಕೆ ಓದುವಿಕೆಯನ್ನು ಉತ್ತೇಜಿಸುವ ಕ್ರಮ ಕೈಗೊಳ್ಳಲಾಗಿದೆ. ದಿನನಿತ್ಯ ಪತ್ರಿಕೆ ಓದುವುದರಿಂದ ಪ್ರಚಲಿತ ವಿದ್ಯಮಾನಗಳ ಅರಿವು ಹೆಚ್ಚುತ್ತದೆ ಸಾಮಾನ್ಯ ಜ್ಞಾನ ವೃದ್ಧಿಯಾಗುತ್ತದೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಸುಲಭವಾಗುತ್ತದೆ ಶಬ್ದಕೋಶ, ಭಾಷಾ ಶೈಲಿ ಮತ್ತು ಬರವಣಿಗೆ ಕೌಶಲ್ಯ ಸುಧಾರಣೆ ಆಗುತ್ತದೆ. ಈ ಸಂಬಂಧ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಶಿಕ್ಷಣ ಇಲಾಖೆಗೆ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿತ್ತು. ಆ ಪತ್ರದಲ್ಲಿನ ಅಂಶಗಳನ್ನು ಪರಿಶೀಲಿಸಿದ ಶಿಕ್ಷಣ ಇಲಾಖೆ, ನಿಯಮಾನುಸಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.

ಇದರಿಂದ ರಾಜ್ಯದ ಎಲ್ಲಾ ಶಾಲೆಗಳು ಹಾಗೂ ವಿವಿಧ ಇಲಾಖೆಗಳ ಅಡಿಯಲ್ಲಿ ನಡೆಯುವ ವಸತಿ ಶಾಲೆಗಳು ಮತ್ತು ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದುವುದು ಕಡ್ಡಾಯವಾಗಲಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

8 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

8 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

8 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

8 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

8 hours ago