ರಾಜ್ಯ

‘ಗ್ರಂಥಾಲಯದೆಡೆಗೆ ನಾನು ನನ್ನ ಸ್ನೇಹಿತರು’ ಅಭಿಯಾನದಡಿ ಓದು ಕಾರ್ಯಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಓದುವ ಬೆಳಕು ಕಾರ್ಯಕ್ರಮದಡಿ ಹಲವಾರು ಅಭಿಯಾನಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸಚಿವರು, ಫೆಬ್ರವರಿ ತಿಂಗಳಲ್ಲಿ ‘ಗ್ರಂಥಾಲಯದೆಡೆಗೆ ನಾನು ನನ್ನ ಸ್ನೇಹಿತರು’ ಅಭಿಯಾನದಡಿ ಗ್ರಾಮೀಣ ಪ್ರದೇಶದ ಎಲ್ಲಾ ಮಕ್ಕಳು ಹಾಗೂ ಹದಿಹರೆಯದವರಲ್ಲಿ ಓದುವ ಹವ್ಯಾಸ ಹೆಚ್ಚಿಸಲು ಹಾಗೂ ಅರಿವು ಕೇಂದ್ರಗಳ ಉಪಯೋಗಗಳನ್ನು ಪಡೆಯಲು ಪ್ರೇರಿಪಿಸಲಾಗುವುದು ಎಂದು ಹೇಳಿದ್ದಾರೆ.

ನಾನು ಓದಿದ ಪುಸ್ತಕ ಚಟುವಟಿಕೆಯಡಿ ಅರಿವು ಕೇಂದ್ರದಿಂದ ಒಂದು ಪುಸ್ತಕವನ್ನು ಆಯ್ಕೆ ಮಾಡಿ ಓದಿ, ಪುಸ್ತಕದ ಬಗ್ಗೆ ಮುಕ್ತವಾಗಿ ಅಭಿಪ್ರಾಯವನ್ನು ಇತರೆ ಮಕ್ಕಳಿಗೆ ಹೇಳುವುದು, ಮಕ್ಕಳು ತಮ್ಮ ಅಜ್ಜ-ಅಜ್ಜಿಯರನ್ನು ಅರಿವು ಕೇಂದ್ರಕ್ಕೆ ಕರೆತರಲು ಪ್ರೋತ್ಸಾಹಿಸುವುದು, ಫೆಬ್ರವರಿ 28ರಂದು ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಅರಿವು ಕೇಂದ್ರಗಳಿಗೆ ಬರುವ ಮಕ್ಕಳಿಗೆ ವಿಜ್ಞಾನ ಕ್ಷೇತ್ರದ ಸಾಧನೆಗಳು, ವಿಜ್ಞಾನಿಗಳ ಪರಿಚಯ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಆಯೋಜಿಸುವ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಫೆಬ್ರವರಿ ತಿಂಗಳು ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಪಾಲಿಗೆ ಮಹತ್ವದ ಸಮಯವಾಗಿದೆ. ಈ ಅವಧಿಯಲ್ಲಿ ಪರೀಕ್ಷಾ ಸಿದ್ಧತೆ ಕುರಿತಂತೆ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಕರಿಂದ, ಹಿರಿಯರಿಂದ ಮಾರ್ಗದರ್ಶನ ಮತ್ತು ಆತ್ಮಸ್ಥೆರ್ಯ ತುಂಬುವ ಹಿತನುಡಿಗಳು ಹಾಗೂ ಪೋಷಕರು ಮತ್ತು ಮಕ್ಕಳೊಂದಿಗೆ ಸೌಹಾರ್ದ ಸಭೆ ನಡೆಸಲಾಗುವುದು ಎಂದು ತಿಳಿಸಿರುವ ಸಚಿವರು ಮಕ್ಕಳು ವ್ಯಾಸಂಗದಲ್ಲಿ ನಿರತರಾಗಿ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ಪಡೆಯುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜ್ಯದ ಹಲವೆಡೆ ಇಂದೂ ಕೂಡ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ…

21 mins ago

ಕುವೈತ್‌ ಮೇಲೆ ಇರಾನ್‌ ಭೀಕರ ದಾಳಿ: ಭಾರತೀಯ ಕಾರ್ಮಿಕ ಸಾವು

ಟೆಹರಾನ್:‌ ಕುವೈತ್‌ ವಿದ್ಯುತ್‌ ಸ್ಥಾವರದ ಮೇಲೆ ಇರಾನ್‌ ಭೀಕರ ದಾಳಿ ನಡೆಸಿದ ಪರಿಣಾಮ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಇದು ದೇಶದ…

51 mins ago

ನಂಜನಗೂಡಿನ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತ: ಓರ್ವ ಭಕ್ತ ಸಾವು

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದು ನಡೆದ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತವೊಂದು ಸಂಭವಿಸಿದ್ದು, ಜಗಜಂಗುಳಿಯಲ್ಲಿ ಸಿಲುಕಿ ಓರ್ವ ಭಕ್ತ ಸಾವನ್ನಪ್ಪಿರುವ…

1 hour ago

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಸಾವು

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರಿನಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ…

2 hours ago

ಇವ ನಮ್ಮವ ಮಸೂದೆ; ಅಮಾಯಕ ಯುವ ಜೀವಗಳ ರಕ್ಷಣೆ

ಜಾತಿ ಆಧಾರಿತ ಅಪರಾಧಕ್ಕೆ ತಡೆ, ಅಂತರ್ಜಾತಿ ವಿವಾಹಿತರಿಗೆ ರಕ್ಷಣೆ ಒದಗಿಸುವ ಮಹತ್ವಪೂರ್ಣವಾದ ‘ಇವ ನಮ್ಮವ ಇವ ನಮ್ಮವ’ ಮಸೂದೆಯನ್ನು ರಾಜ್ಯ…

2 hours ago

ಪ್ರೊ.ಡಿ.ಆನಂದ್ – ಮ್ಯಾನೇಜ್‌ಮೆಂಟ್ ಶಿಕ್ಷಣದ ಜಂಗಮ

ನಾಳೆ ಸೇವೆಯಿಂದ ನಿವೃತ್ತಿ ಹೊಂದಲಿರುವ ಮೇಷ್ಟ್ರು  ಸಿ.ಹರಕುಮಾರ್, ಬರಹಗಾರ ಮೂರ್ನಾಲ್ಕು ದಶಕಗಳ ಹಿಂದೆ ಮ್ಯಾನೇಜ್ಮೆಂಟ್ ಕೋರ್ಸ್ ಅಥವಾ ಎಂಬಿಎ ಪದವಿ…

2 hours ago