ರಾಜ್ಯ

‘ಗ್ರಂಥಾಲಯದೆಡೆಗೆ ನಾನು ನನ್ನ ಸ್ನೇಹಿತರು’ ಅಭಿಯಾನದಡಿ ಓದು ಕಾರ್ಯಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಓದುವ ಬೆಳಕು ಕಾರ್ಯಕ್ರಮದಡಿ ಹಲವಾರು ಅಭಿಯಾನಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸಚಿವರು, ಫೆಬ್ರವರಿ ತಿಂಗಳಲ್ಲಿ ‘ಗ್ರಂಥಾಲಯದೆಡೆಗೆ ನಾನು ನನ್ನ ಸ್ನೇಹಿತರು’ ಅಭಿಯಾನದಡಿ ಗ್ರಾಮೀಣ ಪ್ರದೇಶದ ಎಲ್ಲಾ ಮಕ್ಕಳು ಹಾಗೂ ಹದಿಹರೆಯದವರಲ್ಲಿ ಓದುವ ಹವ್ಯಾಸ ಹೆಚ್ಚಿಸಲು ಹಾಗೂ ಅರಿವು ಕೇಂದ್ರಗಳ ಉಪಯೋಗಗಳನ್ನು ಪಡೆಯಲು ಪ್ರೇರಿಪಿಸಲಾಗುವುದು ಎಂದು ಹೇಳಿದ್ದಾರೆ.

ನಾನು ಓದಿದ ಪುಸ್ತಕ ಚಟುವಟಿಕೆಯಡಿ ಅರಿವು ಕೇಂದ್ರದಿಂದ ಒಂದು ಪುಸ್ತಕವನ್ನು ಆಯ್ಕೆ ಮಾಡಿ ಓದಿ, ಪುಸ್ತಕದ ಬಗ್ಗೆ ಮುಕ್ತವಾಗಿ ಅಭಿಪ್ರಾಯವನ್ನು ಇತರೆ ಮಕ್ಕಳಿಗೆ ಹೇಳುವುದು, ಮಕ್ಕಳು ತಮ್ಮ ಅಜ್ಜ-ಅಜ್ಜಿಯರನ್ನು ಅರಿವು ಕೇಂದ್ರಕ್ಕೆ ಕರೆತರಲು ಪ್ರೋತ್ಸಾಹಿಸುವುದು, ಫೆಬ್ರವರಿ 28ರಂದು ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಅರಿವು ಕೇಂದ್ರಗಳಿಗೆ ಬರುವ ಮಕ್ಕಳಿಗೆ ವಿಜ್ಞಾನ ಕ್ಷೇತ್ರದ ಸಾಧನೆಗಳು, ವಿಜ್ಞಾನಿಗಳ ಪರಿಚಯ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಆಯೋಜಿಸುವ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಫೆಬ್ರವರಿ ತಿಂಗಳು ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಪಾಲಿಗೆ ಮಹತ್ವದ ಸಮಯವಾಗಿದೆ. ಈ ಅವಧಿಯಲ್ಲಿ ಪರೀಕ್ಷಾ ಸಿದ್ಧತೆ ಕುರಿತಂತೆ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಕರಿಂದ, ಹಿರಿಯರಿಂದ ಮಾರ್ಗದರ್ಶನ ಮತ್ತು ಆತ್ಮಸ್ಥೆರ್ಯ ತುಂಬುವ ಹಿತನುಡಿಗಳು ಹಾಗೂ ಪೋಷಕರು ಮತ್ತು ಮಕ್ಕಳೊಂದಿಗೆ ಸೌಹಾರ್ದ ಸಭೆ ನಡೆಸಲಾಗುವುದು ಎಂದು ತಿಳಿಸಿರುವ ಸಚಿವರು ಮಕ್ಕಳು ವ್ಯಾಸಂಗದಲ್ಲಿ ನಿರತರಾಗಿ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ಪಡೆಯುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

7 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

10 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

10 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

11 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

12 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

12 hours ago