ಬೆಳಗಾವಿ: ವಕ್ಫ್ ಮಂಡಳಿ ಕುರಿತು ಸರ್ಕಾರ ಸದನದಲ್ಲಿ ಉತ್ತರ ನೀಡಬೇಕಿದೆ. ಜೊತೆಗೆ ಉತ್ತರ ಕರ್ನಾಟಕದ ಚರ್ಚೆಗೂ ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಕ್ಫ್ ಮಂಡಳಿ ಆಸ್ತಿ ಕಬಳಿಕೆ ಕುರಿತಂತೆ ಮೌನ ವಹಿಸಲು ಶಾಸಕ ಬಿ.ವೈ.ವಿಜಯೇದ್ರ ತಮಗೆ 150 ಕೋಟಿ ರೂ ಆಮಿಷ ಒಡ್ಡಿದ್ದರು ಎಂದು ಸಿಎಂ ಸಿದ್ದರಾಮಯ್ಯ ಅವರು ಮಾಡಿರುವ ಆರೋಪ ಸುಳ್ಳು ಎಂಬ ಮಾಣಿಪ್ಪಾಡಿ ಹೇಳಿಕೆಗೆ ಪ್ರತಿಕ್ರಿಯಿಸಿದರು.
ಸ್ವತಃ ಮಾಣಿಪ್ಪಾಡಿ ಅವರೇ ಈ ಹಿಂದೆ ಆಮಿಷ ಒಡ್ಡಿದ್ದರು ಎಂದು ಹೇಳಿರುವುದರ ಮೇಲೆ ನಾವು ಪ್ರತಿಕ್ರಿಯೆ ನೀಡಿದ್ದೇವೆ. ಅವರೇ ಪತ್ರಿಕಾಗೋಷ್ಠಿ ಕರೆದು ನೀಡಿರುವ ಹೇಳಿಕೆಗೆ ನನ್ನ ಪ್ರಕಾರ ಪ್ರತಿಕ್ರಿಯೆ ನೀಡಿರುವುದು ಸರಿಯಾಗಿದೆ. ಈಗ ಬಹಳ ವರ್ಷಗಳ ನಂತರ ಹೇಳಿಲ್ಲ ಎನ್ನುತ್ತಿದ್ದಾರೆ. ಈ ಬಗ್ಗೆ ಏನು ಮಾಡಬೇಕು ಎಂದು ನೀವೇ ಹೇಳಿ ಎಂದು ಮಾಧ್ಯಮಗಳನ್ನೇ ಪ್ರಶ್ನೆ ಮಾಡಿದರು.
ಇನ್ನು ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಹೋರಾಟದಲ್ಲಿ ಆಗಿರುವ ಅವಘಡಕ್ಕಾಗಿ ಸಿಎಂ ಕ್ಷಮೆ ಕೇಳಬೇಕು ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಗೆ ಕಿಡಿಕಾರಿದ ಅವರು, ಯಾರು ಸಮಸ್ಯೆಯನ್ನು ಇತ್ಯರ್ಥ ಮಾಡಿಲ್ಲವೋ, ಅವರೇ ಕ್ಷಮೆ ಕೇಳಲಿ ಎಂದು ತಿರುಗೇಟು ನೀಡಿದರು.
ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…
ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…
ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…
ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…
ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…