dinesh gundurao
ಬೆಂಗಳೂರು : ಸಂಪುಟ ಪುನರ್ರಚನೆ ಕುರಿತು ನಡೆಯುತ್ತಿರುವ ಚರ್ಚೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡುರಾವ್ ಹೇಳಿಕೆ ಮತ್ತಷ್ಟು ಪುಷ್ಠಿ ನೀಡಿದ್ದು, ಸಚಿವ ಸ್ಥಾನ ಬಿಡುವಂತೆ ಹೈಕಮಾಂಡ್ ಕೇಳಿದರೆ, ಬಿಡಲು ಸಿದ್ಧ ಎಂದು ಅವರು ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ಪುನಾರಚನೆ ವಿಚಾರವಾಗಿ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿದ್ದೇನೆ. ಮುಖ್ಯಮಂತ್ರಿಗಳ ಮನೆಯಲ್ಲಿ ಸೋಮವಾರ ರಾತ್ರಿ ನಡೆದ ಔತಣಕೂಟದಲ್ಲಿ ಸಚಿವ ಸಂಪುಟ ಪುನಾರಚನೆಯ ವಿಚಾರ ಚರ್ಚೆಯೇ ಆಗಿಲ್ಲ. ಎಲ್ಲ ಇಲಾಖೆಯ ಸಚಿವರು ತಮ್ಮ ಇಲಾಖೆಗಳಲ್ಲಿ ಇನ್ನೂ ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ ಅಷ್ಟೇ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ:-ಜಾಬ್ ಕಾರ್ಡ್ಗಳಿಗೆ ಇ-ಕೆವೈಸಿ ಕಡ್ಡಾಯ
ನಾನು ಸಂಘದ ನಿಷೇಧದ ಬಗ್ಗೆ ಏನನ್ನೂ ಪ್ರತಿಕ್ರಿಯಿಸಲ್ಲ. ಆದರೆ, ಸರ್ಕಾರಿ ಶಾಲೆಗಳ ಆವರಣದಲ್ಲಿ ಚಟುವಟಿಕೆ ನಡೆಯಬಾರದೆಂಬುದಕ್ಕೆ ನನ್ನ ಬೆಂಬಲವಿದೆ ಎಂದ ಅವರು, ಆರ್ಎಸ್ಎಸ್ ತಮ್ಮದು ಸರ್ಕಾರಿ ಸಂಘಟನೆಯಲ್ಲ ಎಂದು ಹೇಳಿ, ರಾಜಕೀಯದಲ್ಲಿಯೇ ತೊಡಗಿ ಹೋಗಿದ್ದಾರೆ ಎಂಬ ಸಂಗತಿ ಇಡೀ ದೇಶಕ್ಕೆ ತಿಳಿದಿದೆ. ಹಾಗಾಗಿ ಸರ್ಕಾರಿ ಕಟ್ಟಡಗಳು, ಅದರ ಆವಾರಗಳಲ್ಲಿ ಚಟುವಟಿಕೆಗಳು ನಡೆಯದಂತೆ ನಿಷೇಧ ಹೇರುವುದು ಸರಿಯಾದ ಕ್ರಮ ಎಂದರು.
ಹುಣಸೂರು: ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್ ಬಳಿ…
ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು…
ವಾಷಿಂಗ್ಟನ್: ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…
ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…