ರಾಜ್ಯ

ರಾಜೀನಾಮೆ ಕೊಡಲು ಸಿದ್ಧ ಎಂದ ಗೃಹ ಸಚಿವ ಪರಮೇಶ್ವರ್‌

ತುಮಕೂರು: ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾದ ಬೆನ್ನಲ್ಲೇ ಈಗ ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿಕೆಯೊಂದು ಭಾರೀ ಸಂಚಲನ ಮೂಡಿಸಿದೆ.

ತುಮಕೂರಿನಲ್ಲಿಂದು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್‌ ಅವರು, ನೀವೆಲ್ಲ ಸೇರಿ ದೊಡ್ಡ ಮನಸ್ಸು ಮಾಡಿ ನನ್ನ ರಾಜೀನಾಮೆ ಕೇಳಿದ್ರೆ ಕೊಡೋಕೆ ರೆಡಿ ಇದ್ದೀನಿ ಎಂದು ಹೇಳುವ ಮೂಲಕ ಕಾರ್ಯಕರ್ತರಿಗೆ ಬಿಗ್‌ ಶಾಕ್‌ ನೀಡಿದ್ದಾರೆ.

ಇತ್ತೀಚೆಗೆ ಕ್ಷೇತ್ರದ ಕಾರ್ಯಕರ್ತರ ಜೊತೆ ಬೆರೆಯಲು ಸಾಧ್ಯವಾಗುತ್ತಿಲ್ಲ. ನಿಮ್ಮ ಮನಸ್ಸಿನ ಆಕಾಂಕ್ಷೆಯಂತೆ ಸ್ಪಂದಿಸಲು ಆಗುತ್ತಿಲ್ಲ. ಇದಕ್ಕಾಗಿ ಕ್ಷಮೆ ಕೇಳುತ್ತೇನೆ. ನೀವು ಹೇಳಿದರೆ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲು ಸಿದ್ಧ ಎಂದು ಹೇಳಿದ್ದಾರೆ.

ಗೃಹ ಸಚಿವ ಪರಮೇಶ್ವರ್‌ ಅವರ ಹೇಳಿಕೆಯಿಂದ ಕಾರ್ಯಕರ್ತರು ಹಾಗೂ ಮುಖಂಡರು ವಿಚಲಿತರಾದ ಘಟನೆ ನಡೆಯಿತು.

ಈ ವೇಳೆ ಮಾತನಾಡಿದ ಕಾರ್ಯಕರ್ತರು ದಯವಿಟ್ಟು ತಕ್ಷಣ ರಾಜೀನಾಮೆ ಕೊಡಬೇಡಿ ಎಂದು ಕೂಗಿ ಪರಮೇಶ್ವರ್‌ ಅವರನ್ನು ತಡೆದರು.

ಸಿಎಂ ಹಾಗೂ ಕೆಪಿಸಿಸಿ ಬದಲಾವಣೆ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ ಗೃಹ ಸಚಿವರ ಈ ಹೇಳಿಕೆ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಿದ್ದು, ಇದು ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ಬಂದು ತಲುಪುತ್ತದೆ ಎಂಬುದನ್ನು ಕಾದುನೋಡಬೇಕಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

108 ವರ್ಷದ ಶಾಲೆಯ ಕುಂಟು ನಡಿಗೆ..

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ…

3 hours ago

ಎಚ್‌ಪಿವಿ ಲಸಿಕಾ ಅಭಿಯಾನಕ್ಕೆ ಸಿಗದ ನಿರೀಕ್ಷಿತ ಸ್ಪಂದನೆ

ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ  ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ…

3 hours ago

‘ಟ್ರಾನ್ಸ್ ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ಆತುರದಲ್ಲಿ ಹೇರಲಾದ ಕ್ರಮ’

ಸಂದರ್ಶನ: ರಶ್ಮಿ ಕೋಟಿ " ಟ್ರಾನ್ಸ್‌ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಸಮುದಾಯದವರೊಂದಿಗೆ ಸಮಾಲೋಚನೆ ಇಲ್ಲದೆ…

3 hours ago

ರಂಗಸಮುದ್ರ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ

ಎಂ.ನಾರಾಯಣ ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಪಾತ್ರವಾದ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ ತಿ.ನರಸೀಪುರ: ಗ್ರಾಮೀಣ ಆಡಳಿತ ಸಂಸ್ಥೆಯಾಗಿ…

3 hours ago

ರಾಮಕೃಷ್ಣನಗರ ಉದ್ಯಾನ: ಸಂಪೂರ್ಣ ಅಧ್ವಾನ!

ಕೆ.ಪಿ.ಮದನ್ ಮೈಸೂರು: ಬಾಗಿಲಿಗೆ ಬೀಗವಿಲ್ಲದೆ ವರ್ಷ ಪೂರ್ತಿ ತೆರೆದೇ ಇರುವ ಉದ್ಯಾನ.., ನೀರಿಲ್ಲದೆ ನಲುಗುತ್ತಿರುವ ಸಸಿಗಳು.., ಹಸಿರು ಕಂಡು ಪಾರ್ಕ್‌ಗೆ…

3 hours ago