ರಾಜ್ಯ

ನಿಜವಾದ ಅಕ್ರಮ ನಡೆದಿರುವುದು ಕಾಂಗ್ರೆಸ್‌ ನಾಯಕತ್ವದಲ್ಲಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಂಗಳೂರು: ಚುನಾವಣಾ ಸೋಲುಗಳನ್ನು ಜೀರ್ಣಿಸಿಕೊಳ್ಳಲಾಗದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪದೇ ಪದೇ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಅಕ್ರಮದ ಆರೋಪ ಮಾಡುತ್ತಲೇ ಬಂದಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಚುನಾವಣಾ ಆಯೋಗ ಕೂಡಾ ರಾಹುಲ್ ಆರೋಪವನ್ನು ತಳ್ಳಿಹಾಕಿ ಕಾನೂನು ಮಾರ್ಗದಲ್ಲೇ ಚುನಾವಣೆ ನಡೆದಿದೆ ಎಂದು ಸ್ಪಷ್ಟನೆ ನೀಡಿದ್ದರೂ ಆಕ್ಷೇಪ ಏಕೆ ಎಂದು ಪ್ರಶ್ನೆ ಮಾಡಿದ್ದಾರೆ.

ಸೋಲುಗಳಿಗೆ ಚುನಾವಣಾ ಆಯೋಗವನ್ನು ದೂರುವುದು ಬಿಟ್ಟು ದೇಶ ವಿರೋಧಿ ಚಿಂತನೆಗಳನ್ನು, ಉಗ್ರರನ್ನು ಬೆಂಬಲಿಸುವ ನೀತಿಗಳನ್ನು, ಅತಿಯಾದ ಮುಸಲ್ಮಾನರ ಓಲೈಕೆ ನೀತಿಗಳನ್ನು, ಹಿಂದೂ ವಿರೋಧಿ ನೀತಿಗಳನ್ನು ಕಾಂಗ್ರೆಸ್ ಪಕ್ಷ ತ್ಯಜಿಸಲಿ ಎಂದು ಆಗ್ರಹಿಸಿದ್ದಾರೆ.

ನಿಜವಾಗಿಯೂ ಅಕ್ರಮ ನಡೆದಿರುವುದು ಕಾಂಗ್ರೆಸ್ ನಾಯಕತ್ವದಲ್ಲಿ. ನಕಲಿ ಗಾಂಧಿ ಕುಟುಂಬಕ್ಕೆ ಮಣೆ ಹಾಕಿದ್ದು, ಚುನಾವಣೆ ಎಂದರೇನು, ರಾಜಕೀಯ ಎಂದರೇನು ಎಂದರಿಯದ ಎಳಸುಗಳಿಗೆ ಕಾಂಗ್ರೆಸ್ ನಾಯಕತ್ವ ನೀಡಿದ್ದೇ ಚುನಾವಣಾ ಸೋಲುಗಳಿಗೆ ಕಾರಣ. ಈಗ ಹಿರಿಯ ನಾಯಕರೊಬ್ಬರನ್ನು ಎಐಸಿಸಿ ಅಧ್ಯಕ್ಷರನ್ನಾಗಿ ನೇಮಿಸಿ ಬೆದರುಬೊಂಬೆಯಾಗಿ ನಿಲ್ಲಿಸಿದ್ದಾರೆ. ಅಧಿಕಾರ ಎಲ್ಲವೂ ಈಗಲೂ ನಕಲಿ ಗಾಂಧಿಗಳ ಕೈಯಲ್ಲಿದೆ. ಹೀಗಾಗಿಯೇ ದೇಶದ ಜನರು ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸುತ್ತಿದ್ದಾರೆ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

3 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

3 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

3 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

3 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

3 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

3 hours ago