ರಾಜ್ಯ

ನಿಜವಾದ ಅಕ್ರಮ ನಡೆದಿರುವುದು ಕಾಂಗ್ರೆಸ್‌ ನಾಯಕತ್ವದಲ್ಲಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಂಗಳೂರು: ಚುನಾವಣಾ ಸೋಲುಗಳನ್ನು ಜೀರ್ಣಿಸಿಕೊಳ್ಳಲಾಗದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪದೇ ಪದೇ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಅಕ್ರಮದ ಆರೋಪ ಮಾಡುತ್ತಲೇ ಬಂದಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಚುನಾವಣಾ ಆಯೋಗ ಕೂಡಾ ರಾಹುಲ್ ಆರೋಪವನ್ನು ತಳ್ಳಿಹಾಕಿ ಕಾನೂನು ಮಾರ್ಗದಲ್ಲೇ ಚುನಾವಣೆ ನಡೆದಿದೆ ಎಂದು ಸ್ಪಷ್ಟನೆ ನೀಡಿದ್ದರೂ ಆಕ್ಷೇಪ ಏಕೆ ಎಂದು ಪ್ರಶ್ನೆ ಮಾಡಿದ್ದಾರೆ.

ಸೋಲುಗಳಿಗೆ ಚುನಾವಣಾ ಆಯೋಗವನ್ನು ದೂರುವುದು ಬಿಟ್ಟು ದೇಶ ವಿರೋಧಿ ಚಿಂತನೆಗಳನ್ನು, ಉಗ್ರರನ್ನು ಬೆಂಬಲಿಸುವ ನೀತಿಗಳನ್ನು, ಅತಿಯಾದ ಮುಸಲ್ಮಾನರ ಓಲೈಕೆ ನೀತಿಗಳನ್ನು, ಹಿಂದೂ ವಿರೋಧಿ ನೀತಿಗಳನ್ನು ಕಾಂಗ್ರೆಸ್ ಪಕ್ಷ ತ್ಯಜಿಸಲಿ ಎಂದು ಆಗ್ರಹಿಸಿದ್ದಾರೆ.

ನಿಜವಾಗಿಯೂ ಅಕ್ರಮ ನಡೆದಿರುವುದು ಕಾಂಗ್ರೆಸ್ ನಾಯಕತ್ವದಲ್ಲಿ. ನಕಲಿ ಗಾಂಧಿ ಕುಟುಂಬಕ್ಕೆ ಮಣೆ ಹಾಕಿದ್ದು, ಚುನಾವಣೆ ಎಂದರೇನು, ರಾಜಕೀಯ ಎಂದರೇನು ಎಂದರಿಯದ ಎಳಸುಗಳಿಗೆ ಕಾಂಗ್ರೆಸ್ ನಾಯಕತ್ವ ನೀಡಿದ್ದೇ ಚುನಾವಣಾ ಸೋಲುಗಳಿಗೆ ಕಾರಣ. ಈಗ ಹಿರಿಯ ನಾಯಕರೊಬ್ಬರನ್ನು ಎಐಸಿಸಿ ಅಧ್ಯಕ್ಷರನ್ನಾಗಿ ನೇಮಿಸಿ ಬೆದರುಬೊಂಬೆಯಾಗಿ ನಿಲ್ಲಿಸಿದ್ದಾರೆ. ಅಧಿಕಾರ ಎಲ್ಲವೂ ಈಗಲೂ ನಕಲಿ ಗಾಂಧಿಗಳ ಕೈಯಲ್ಲಿದೆ. ಹೀಗಾಗಿಯೇ ದೇಶದ ಜನರು ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸುತ್ತಿದ್ದಾರೆ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

3 hours ago

ವೈಭವದ ವಸಂತ ಮಹಲ್‌ಗೆ ಬೇಕಿದೆ ಕಾಯಕಲ್ಪ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…

5 hours ago

ವಿರಾಜಪೇಟೆ | ಅವಘಡಕ್ಕಾಗಿ ಕಾಯುತ್ತಿದೆ ಮಾರುಕಟ್ಟೆ ಹಳೇ ಕಟ್ಟಡ..!

ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…

5 hours ago

ಗುಂಡ್ಲುಪೇಟೆ | ಶಿಥಿಲಗೊಂಡಿರುವ ಅಂಗನವಾಡಿ, ಶಾಲೆ ಕಟ್ಟಡಗಳು

ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…

5 hours ago

ನಂಜನಗೂಡು ನಗರಸಭೆ ವಾರ್ಡ್ ವಿಂಗಡಣೆ ; ಒಂದರಲ್ಲಿ ಸಾವಿರ ; ಮತ್ತೊಂದರಲ್ಲಿ 6 ಸಾವಿರ ಜನ

ಅವೈಜ್ಞಾನಿಕ ಜನಸಂಖ್ಯೆ ವಿಂಗಡಣೆ ಬಗ್ಗೆ ಸಾರ್ವಜನಿಕರ ಆಕ್ಷೇಪ ಎಸ್. ಎಸ್. ಭಟ್ ನಂಜನಗೂಡು : ನಗರದಲ್ಲಿ ೧,೦೨೩ ಜನರಿಗೆ ಒಂದು…

5 hours ago