ರಾಜ್ಯ

ಅಧಿವೇಶನದ ವೇಳೆ ಶಾಸಕರ ವಿಶ್ರಾಂತಿಗೆ ಪ್ರತ್ಯೇಕ ಆಸನ ವ್ಯವಸ್ಥೆ

ಬೆಂಗಳೂರು : ಅಧಿವೇಶನದ ವೇಳೆ ಮಧ್ಯಾಹ್ನದ ಕಿರು ನಿದ್ರೆಗಾಗಿ ಶಾಸಕರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗಿದೆ. ಅಧಿವೇಶನದ ನಡೆದ ಸಮಯದಲ್ಲಿ ಮಧ್ಯಾಹ್ನ ಊಟದ ನಂತರ ಶಾಸಕರ ಹಾಜರಾತಿ ಕಡಿಮೆ ಆಗುತ್ತಿದೆ. ವಿಧಾನಸಭೆಯಲ್ಲಿ ಶಾಸಕರ ಹಾಜರಾತಿ ಹೆಚ್ಚಿಸಲು ಸ್ಪೀಕರ್‌ ಯು.ಟಿ ಖಾದರ್‌ ಹೊಸ ಐಡಿಯಾ ಮಾಡಿದ್ದಾರೆ.

ಲಾಂಜ್‌ ನಲ್ಲಿ ಕಿರು ನಿದ್ರೆಗಾಗಿ ವಿಶೇಷ ಆಸನ ವ್ಯವಸ್ಥೆ ಮಾಡಲಾಗಿದ್ದು, ನಾಲ್ಕನೇ ದಿನದ ಅಧಿವೇಶನದಲ್ಲಿ ಸೀಕರ್‌ ಈ ಬಗ್ಗೆ ಪ್ರಸ್ತಾಪಿಸಿದರು. ವಿಧಾನಸಭೆ ಸದಸ್ಯರಿಗಾಗಿ ಬೆಳಗ್ಗೆ ಉಪಹಾರ, ಮಧ್ಯಾಹ್ನ ಉತ್ತಮ ಊಟದ ವ್ಯವಸ್ಥೆ ಮಾಡಲಾಗಿದೆ. ಊಟವಾದ ಮೇಲೆ ಕೆಲ ಶಾಸಕರು ಕಿರು ನಿದ್ದೆ ಮಾಡಿ ಬರುತ್ತೇನೆ ಎಂದು ಹೇಳಿ ಹೋದವರು ಮರಳಿ ಬರುವುದಿಲ್ಲ. ಇದನ್ನ ತಪ್ಪಿಸಲು ಶಾಸಕರ ಕಿರು ನಿದ್ರೆಗಾಗಿ ಪ್ರಾಯೋಗಿಕವಾಗಿ ಆಡಳಿತ ಪಕ್ಷದ ಮೊಗಸಾಲೆಯಲ್ಲಿ ಒಂದು ರಿಕ್ಲೈನರ್‌ ಕುರ್ಚಿ ಹಾಕಲಾಗಿದೆ. ಶಾಸಕರು ಅದರೆ ಮೇಲೆ ನಿದ್ರೆ ಮಾಡಿ ಸದನಕ್ಕೆ ಬರಬಹುದು. ಆ ರಿಕ್ಲೈನರ್‌ ಕುರ್ಚಿ ನಿಮಗೆ ಸರಿ ಎನಿಸಿದರೆ ಮುಂದಿನ ಅಧಿವೇಶನದಲ್ಲಿ ಈ ವ್ಯವಸ್ಥೆಯನ್ನು ಜಾರಿಗೆ ತರುತ್ತೇನೆ ಎಂದು ಸದಸ್ಯರಿಗೆ ಹೇಳಿದರು.

ಇದೇ ವೇಳೆ ಶಾಸಕರು ಪಿಎಗಳನ್ನ ವಿಧಾನಸಭೆ ಲಾಂಜ್ ಗೆ ಕರೆದುಕೊಂಡು ಬರಬೇಡಿ. ಶಾಸಕರು ಕೂರಲು ಜಾಗ ಇರಲ್ಲ. ಈ ವಿಚಾರದಲ್ಲಿ ಶಾಸಕರು ಮಾರ್ಷಲ್‌ ಗಳ ಜೊತೆ ವಾಗ್ವಾದ ಮಾಡಬೇಡಿ ಎಂದು ಸೂಚನೆ ನೀಡಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಹನೂರು| ಮೇಕೆ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…

17 mins ago

ಮಲೆ ಮಹದೇಶ್ವರನ ಹುಂಡಿಯಲ್ಲಿ 2.16 ಕೋಟಿ ರೂ. ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…

23 mins ago

ನೀಟ್‌ ಪರೀಕ್ಷೆ ನಡೆಸುವ ಅಧಿಕಾರ ಆಯಾಯ ರಾಜ್ಯಗಳಿಗೆ ನೀಡಲಿ: ಸಿಎಂ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…

42 mins ago

ಎಬೋಲಾಗೆ 136 ಮಂದಿ ಬಲಿ: WHO ಕಳವಳ

ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…

2 hours ago

ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…

2 hours ago

ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಯಥಾಸ್ಥಿತಿ ಮುಂದುವರಿಸಲು ಸುಪ್ರೀಂ ಸೂಚನೆ

ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…

2 hours ago