ಬೆಂಗಳೂರು: ಮುಂದಿನ ತಿಂಗಳ ಮಾರ್ಚ್.3ರಂದು ವಿಧಾನಸಭೆ ಅಧಿವೇಶನ ಆರಂಭವಾಗಲಿದ್ದು, ಮಧ್ಯಾಹ್ನದ ಭೋಜನದ ಬಳಿಕ ಕಿರು ನಿದ್ರೆ ಮಾಡುವ ಶಾಸಕರಿಗೆ ಈ ಬಾರಿ ರಿಕ್ಲೈನರ್ ಚೇರ್ ವ್ಯವಸ್ಥೆ ಕಲ್ಪಿಸಲು ಸ್ಪೀಕರ್ ಯು.ಟಿ.ಖಾದರ್ ಮುಂದಾಗಿದ್ದಾರೆ.
ಕಲಾಪದಲ್ಲಿ ಶಾಸಕರ ಹಾಜರಾತಿ ಹೆಚ್ಚಳಕ್ಕೆ ಹಾಗೂ ಬೆಳಿಗ್ಗೆ ಬೇಗ ಕಲಾಪಕ್ಕೆ ಆಗಮಿಸಲು ಅನುವಾಗುವಂತೆ ಸ್ಪೀಕರ್ ಖಾದರ್ ಶಾಸಕರಿಗೆ ವಿಧಾನಸೌಧದಲ್ಲೇ ಉಚಿತವಾಗಿ ಬೆಳಿಗ್ಗೆ 9 ಗಂಟೆಗೆ ಉಪಹಾರ ಹಾಗೂ ಮಧ್ಯಾಹ್ನದ ಭೋಜನ ವ್ಯವಸ್ಥೆ ಕಲ್ಪಿಸಿದ್ದಾರೆ.
ಈ ಮೂಲಕ ಶಾಸಕರು ಹೊರಗಡೆ ಉಪಹಾರ ಮಾಡಿ ಕಲಾಪಕ್ಕೆ ತಡವಾಗಿ ಬರುವುದನ್ನು ತಪ್ಪಿಸಲು ಹಾಗೂ ಮಧ್ಯಾಹ್ನ ಭೋಜನಕ್ಕೆ ಹೊರಗಡೆ ಹೋಗಿ ಬಳಿಕ ಕಲಾಪಕ್ಕೆ ಗೈರಾಗುವುದನ್ನು ತಪ್ಪಿಸಲು ಈ ಕ್ರಮ ಕೈಗೊಂಡಿದ್ದು, ಈ ಪರಿಪಾಠವನ್ನು ಕಳೆದ ಎರಡು ಮೂರು ಅಧಿವೇಶನಗಳಿಂದಲೂ ಮುಂದುವರಿಸಿಕೊಂಡು ಬರುತ್ತಿದ್ದಾರೆ.
ಶಾಸಕರು ಭೋಜನದ ಬಳಿಕ ನಿದ್ರೆ ಮಾಡಲು ಹೊರಗೆ ಹೋಗುವುದನ್ನು ತಪ್ಪಿಸಲು ವಿಶ್ರಾಂತಿಗಾಗಿ ವಿಧಾನಸಭೆಯ ಮೊಗಸಾಲೆಯನ್ನೇ ರಿಕ್ಲೈನರ್ ಚೇರ್ಗಳ ವ್ಯವಸ್ಥೆ ಕಲ್ಪಿಸಲು ಸ್ಪೀಕರ್ ಖಾದರ್ ತೀರ್ಮಾನಿಸಿದ್ದಾರೆ.
ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆಯಲ್ಲಿ ಈ ಘಟನೆ…
ಬೆಂಗಳೂರು: ಕೆಂಪೇಗೌಡ ಏರ್ಪೋರ್ಟ್ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…
ನಂಜನಗೂಡಿನ ಸದ್ವೈದ್ಯ ಶಾಲಾ ಸಂಸ್ಥಾಪಕರಾಗಿದ್ದ ಬಿ.ವಿ.ಪಂಡಿತರು ಆಯುರ್ವೇದ ಉತ್ಪನ್ನಗಳನ್ನು ರೂಪಿಸಿದ ಹಿರಿಮೆ ಹೊಂದಿದ್ದಾರೆ. ದಂತಧಾವನ ಚೂರ್ಣ (ನಂಜನಗೂಡು ಹಲ್ಲು ಪುಡಿ)…
ಮೈಸೂರಿನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಾಣ ಹಾಗೂ ಬೇಲೂರಿನಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ವಸ್ತು ಸಂಗ್ರಹಾಲಯ…
ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶವಿರುವುದಿಲ್ಲ. ರಾಜ್ಯ ರಸ್ತೆ ಸಾರಿಗೆ ನಿಗಮದ…
ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಆರಂಭವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸದನದಲ್ಲಿ ಯಾವುದೇ ವಿಷಯ, ಜನರ ಸಮಸ್ಯೆ, ಮಸೂದೆಗಳ ಬಗ್ಗೆ ರಚನಾತ್ಮಕ ಚರ್ಚೆ…