ರಾಜ್ಯ

ವಿಧಾನಸೌಧದಲ್ಲಿ ಶಾಸಕರಿಗೆ ನಿದ್ದೆ ಮಾಡಲು ರಿಕ್ಲೈನರ್‌ ಚೇರ್‌ ಭಾಗ್ಯ: ಸ್ಪೀಕರ್‌ ಯು.ಟಿ.ಖಾದರ್‌

ಬೆಂಗಳೂರು: ಮುಂದಿನ ತಿಂಗಳ ಮಾರ್ಚ್.‌3ರಂದು ವಿಧಾನಸಭೆ ಅಧಿವೇಶನ ಆರಂಭವಾಗಲಿದ್ದು, ಮಧ್ಯಾಹ್ನದ ಭೋಜನದ ಬಳಿಕ ಕಿರು ನಿದ್ರೆ ಮಾಡುವ ಶಾಸಕರಿಗೆ ಈ ಬಾರಿ ರಿಕ್ಲೈನರ್‌ ಚೇರ್‌ ವ್ಯವಸ್ಥೆ ಕಲ್ಪಿಸಲು ಸ್ಪೀಕರ್‌ ಯು.ಟಿ.ಖಾದರ್‌ ಮುಂದಾಗಿದ್ದಾರೆ.

ಕಲಾಪದಲ್ಲಿ ಶಾಸಕರ ಹಾಜರಾತಿ ಹೆಚ್ಚಳಕ್ಕೆ ಹಾಗೂ ಬೆಳಿಗ್ಗೆ ಬೇಗ ಕಲಾಪಕ್ಕೆ ಆಗಮಿಸಲು ಅನುವಾಗುವಂತೆ ಸ್ಪೀಕರ್‌ ಖಾದರ್‌ ಶಾಸಕರಿಗೆ ವಿಧಾನಸೌಧದಲ್ಲೇ ಉಚಿತವಾಗಿ ಬೆಳಿಗ್ಗೆ 9 ಗಂಟೆಗೆ ಉಪಹಾರ ಹಾಗೂ ಮಧ್ಯಾಹ್ನದ ಭೋಜನ ವ್ಯವಸ್ಥೆ ಕಲ್ಪಿಸಿದ್ದಾರೆ.

ಈ ಮೂಲಕ ಶಾಸಕರು ಹೊರಗಡೆ ಉಪಹಾರ ಮಾಡಿ ಕಲಾಪಕ್ಕೆ ತಡವಾಗಿ ಬರುವುದನ್ನು ತಪ್ಪಿಸಲು ಹಾಗೂ ಮಧ್ಯಾಹ್ನ ಭೋಜನಕ್ಕೆ ಹೊರಗಡೆ ಹೋಗಿ ಬಳಿಕ ಕಲಾಪಕ್ಕೆ ಗೈರಾಗುವುದನ್ನು ತಪ್ಪಿಸಲು ಈ ಕ್ರಮ ಕೈಗೊಂಡಿದ್ದು, ಈ ಪರಿಪಾಠವನ್ನು ಕಳೆದ ಎರಡು ಮೂರು ಅಧಿವೇಶನಗಳಿಂದಲೂ ಮುಂದುವರಿಸಿಕೊಂಡು ಬರುತ್ತಿದ್ದಾರೆ.

ಶಾಸಕರು ಭೋಜನದ ಬಳಿಕ ನಿದ್ರೆ ಮಾಡಲು ಹೊರಗೆ ಹೋಗುವುದನ್ನು ತಪ್ಪಿಸಲು ವಿಶ್ರಾಂತಿಗಾಗಿ ವಿಧಾನಸಭೆಯ ಮೊಗಸಾಲೆಯನ್ನೇ ರಿಕ್ಲೈನರ್‌ ಚೇರ್‌ಗಳ ವ್ಯವಸ್ಥೆ ಕಲ್ಪಿಸಲು ಸ್ಪೀಕರ್‌ ಖಾದರ್‌ ತೀರ್ಮಾನಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ನಗುಮೊಗದ ಮೌನ ಸಾಧಕ!

ದಣಿವರಿಯದೆ ದುಡಿದಿರಿ ಆರೋಗ್ಯ ಶಿಕ್ಷಣ ಕ್ಷೇತ್ರಗಳಲಿ ಉಸಿರಾಗಿತ್ತು ನಿಮಗೆ ಸಮಾಜಸೇವೆ! ಧಿಕ್ಕರಿಸಿದಿರಿ ಮೌಢ್ಯಕಂದಾಚಾರಗಳ ಪ್ರೀತಿಸಿದಿರಿ ಎಲ್ಲರನೂ ಸಮಭಾವದಲಿ! ಮನಮಾಗಿದ ನಗುಮೊಗದ…

22 mins ago

ಓದುಗರ ಪತ್ರ: ಮಂಗನ ಕೈಗೆ ……….

ನಾರ್ತ್ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್ ( ನಾಟೋ) ದೇಶಗಳ ಗುಂಪಿಗೆ ಸೇರಿದ ಕೆನಡಾ, ಆಸ್ಟ್ರೇಲಿಯಾ, ಬ್ರಿಟನ್ ಮುಂತಾದ ದೇಶಗಳು ಇರಾನಿನ…

25 mins ago

ಓದುಗರ ಪತ್ರ: ಡೇಟಾ ತೆರಿಗೆ ಎಂಬ ಹೊರೆ

ಮೊಬೈಲ್ ಡೇಟಾ ಬಳಕೆಯ ಮೇಲೆ ಪ್ರತಿ ಜಿಬಿಗೆ  ತೆರಿಗೆ ವಿಧಿಸುವ ಸರ್ಕಾರದ ಪ್ರಸ್ತಾವನೆ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ…

27 mins ago

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳಿಗೆ ವಾಹನ ಚಾಲನೆ ಅಪಾಯ

ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ…

3 hours ago

ಯುಗಾದಿ; ಹೊನ್ನೇರು ಕಟ್ಟಿ ಸಂಭ್ರಮಿಸಿದ ರೈತರು

ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ…

3 hours ago

ಕೇರಳಕ್ಕೆ ನೂರಾರು ಟಿಪ್ಪರ್‌ಗಳಲ್ಲಿ ರಾಜ್ಯದ ಸಂಪತ್ತು ಸಾಗಣೆ

ಮಹೇಂದ್ರ ಹಸಗೂಲಿ ಕಡಿವಾಣ ಹಾಕದಿದ್ದರೆ ರೈತಸಂಘ, ಕನ್ನಡಪರ ಸಂಘಟನೆಗಳು, ಜನಸಾಮಾನ್ಯರಿಂದ ಉಗ್ರ ಹೋರಾಟದ ಎಚ್ಚರಿಕೆ  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಕೇರಳ ನೋಂದಣಿಯ…

3 hours ago