ರಾಜ್ಯ

ವಿಧಾನಸೌಧದಲ್ಲಿ ಶಾಸಕರಿಗೆ ನಿದ್ದೆ ಮಾಡಲು ರಿಕ್ಲೈನರ್‌ ಚೇರ್‌ ಭಾಗ್ಯ: ಸ್ಪೀಕರ್‌ ಯು.ಟಿ.ಖಾದರ್‌

ಬೆಂಗಳೂರು: ಮುಂದಿನ ತಿಂಗಳ ಮಾರ್ಚ್.‌3ರಂದು ವಿಧಾನಸಭೆ ಅಧಿವೇಶನ ಆರಂಭವಾಗಲಿದ್ದು, ಮಧ್ಯಾಹ್ನದ ಭೋಜನದ ಬಳಿಕ ಕಿರು ನಿದ್ರೆ ಮಾಡುವ ಶಾಸಕರಿಗೆ ಈ ಬಾರಿ ರಿಕ್ಲೈನರ್‌ ಚೇರ್‌ ವ್ಯವಸ್ಥೆ ಕಲ್ಪಿಸಲು ಸ್ಪೀಕರ್‌ ಯು.ಟಿ.ಖಾದರ್‌ ಮುಂದಾಗಿದ್ದಾರೆ.

ಕಲಾಪದಲ್ಲಿ ಶಾಸಕರ ಹಾಜರಾತಿ ಹೆಚ್ಚಳಕ್ಕೆ ಹಾಗೂ ಬೆಳಿಗ್ಗೆ ಬೇಗ ಕಲಾಪಕ್ಕೆ ಆಗಮಿಸಲು ಅನುವಾಗುವಂತೆ ಸ್ಪೀಕರ್‌ ಖಾದರ್‌ ಶಾಸಕರಿಗೆ ವಿಧಾನಸೌಧದಲ್ಲೇ ಉಚಿತವಾಗಿ ಬೆಳಿಗ್ಗೆ 9 ಗಂಟೆಗೆ ಉಪಹಾರ ಹಾಗೂ ಮಧ್ಯಾಹ್ನದ ಭೋಜನ ವ್ಯವಸ್ಥೆ ಕಲ್ಪಿಸಿದ್ದಾರೆ.

ಈ ಮೂಲಕ ಶಾಸಕರು ಹೊರಗಡೆ ಉಪಹಾರ ಮಾಡಿ ಕಲಾಪಕ್ಕೆ ತಡವಾಗಿ ಬರುವುದನ್ನು ತಪ್ಪಿಸಲು ಹಾಗೂ ಮಧ್ಯಾಹ್ನ ಭೋಜನಕ್ಕೆ ಹೊರಗಡೆ ಹೋಗಿ ಬಳಿಕ ಕಲಾಪಕ್ಕೆ ಗೈರಾಗುವುದನ್ನು ತಪ್ಪಿಸಲು ಈ ಕ್ರಮ ಕೈಗೊಂಡಿದ್ದು, ಈ ಪರಿಪಾಠವನ್ನು ಕಳೆದ ಎರಡು ಮೂರು ಅಧಿವೇಶನಗಳಿಂದಲೂ ಮುಂದುವರಿಸಿಕೊಂಡು ಬರುತ್ತಿದ್ದಾರೆ.

ಶಾಸಕರು ಭೋಜನದ ಬಳಿಕ ನಿದ್ರೆ ಮಾಡಲು ಹೊರಗೆ ಹೋಗುವುದನ್ನು ತಪ್ಪಿಸಲು ವಿಶ್ರಾಂತಿಗಾಗಿ ವಿಧಾನಸಭೆಯ ಮೊಗಸಾಲೆಯನ್ನೇ ರಿಕ್ಲೈನರ್‌ ಚೇರ್‌ಗಳ ವ್ಯವಸ್ಥೆ ಕಲ್ಪಿಸಲು ಸ್ಪೀಕರ್‌ ಖಾದರ್‌ ತೀರ್ಮಾನಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

4 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

4 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

7 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

7 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

7 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

7 hours ago