ಬೆಂಗಳೂರು: ಮುಂದಿನ ತಿಂಗಳ ಮಾರ್ಚ್.3ರಂದು ವಿಧಾನಸಭೆ ಅಧಿವೇಶನ ಆರಂಭವಾಗಲಿದ್ದು, ಮಧ್ಯಾಹ್ನದ ಭೋಜನದ ಬಳಿಕ ಕಿರು ನಿದ್ರೆ ಮಾಡುವ ಶಾಸಕರಿಗೆ ಈ ಬಾರಿ ರಿಕ್ಲೈನರ್ ಚೇರ್ ವ್ಯವಸ್ಥೆ ಕಲ್ಪಿಸಲು ಸ್ಪೀಕರ್ ಯು.ಟಿ.ಖಾದರ್ ಮುಂದಾಗಿದ್ದಾರೆ.
ಕಲಾಪದಲ್ಲಿ ಶಾಸಕರ ಹಾಜರಾತಿ ಹೆಚ್ಚಳಕ್ಕೆ ಹಾಗೂ ಬೆಳಿಗ್ಗೆ ಬೇಗ ಕಲಾಪಕ್ಕೆ ಆಗಮಿಸಲು ಅನುವಾಗುವಂತೆ ಸ್ಪೀಕರ್ ಖಾದರ್ ಶಾಸಕರಿಗೆ ವಿಧಾನಸೌಧದಲ್ಲೇ ಉಚಿತವಾಗಿ ಬೆಳಿಗ್ಗೆ 9 ಗಂಟೆಗೆ ಉಪಹಾರ ಹಾಗೂ ಮಧ್ಯಾಹ್ನದ ಭೋಜನ ವ್ಯವಸ್ಥೆ ಕಲ್ಪಿಸಿದ್ದಾರೆ.
ಈ ಮೂಲಕ ಶಾಸಕರು ಹೊರಗಡೆ ಉಪಹಾರ ಮಾಡಿ ಕಲಾಪಕ್ಕೆ ತಡವಾಗಿ ಬರುವುದನ್ನು ತಪ್ಪಿಸಲು ಹಾಗೂ ಮಧ್ಯಾಹ್ನ ಭೋಜನಕ್ಕೆ ಹೊರಗಡೆ ಹೋಗಿ ಬಳಿಕ ಕಲಾಪಕ್ಕೆ ಗೈರಾಗುವುದನ್ನು ತಪ್ಪಿಸಲು ಈ ಕ್ರಮ ಕೈಗೊಂಡಿದ್ದು, ಈ ಪರಿಪಾಠವನ್ನು ಕಳೆದ ಎರಡು ಮೂರು ಅಧಿವೇಶನಗಳಿಂದಲೂ ಮುಂದುವರಿಸಿಕೊಂಡು ಬರುತ್ತಿದ್ದಾರೆ.
ಶಾಸಕರು ಭೋಜನದ ಬಳಿಕ ನಿದ್ರೆ ಮಾಡಲು ಹೊರಗೆ ಹೋಗುವುದನ್ನು ತಪ್ಪಿಸಲು ವಿಶ್ರಾಂತಿಗಾಗಿ ವಿಧಾನಸಭೆಯ ಮೊಗಸಾಲೆಯನ್ನೇ ರಿಕ್ಲೈನರ್ ಚೇರ್ಗಳ ವ್ಯವಸ್ಥೆ ಕಲ್ಪಿಸಲು ಸ್ಪೀಕರ್ ಖಾದರ್ ತೀರ್ಮಾನಿಸಿದ್ದಾರೆ.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…