ರಾಜ್ಯ

ಕಲಬುರ್ಗಿ ತೊಗರಿಗೆ ಹೆಚ್ಚಿನ ಬೆಂಬಲ ಬೆಲೆಗೆ ರಾಜ್ಯದಿಂದ ಶಿಫಾರಸು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ಬೆಳಗಾವಿ: ಕಲಬುರಗಿ ಜಿಲ್ಲೆಯಲ್ಲಿ ಬೆಳೆಯುವ ತೊಗರಿಗೆ ಜಿ.ಐ.ಟ್ಯಾಗ್ ಪ್ರಮಾಣಪತ್ರ ದೊರೆತಿದ್ದು, ಇದಕ್ಕೆ ಶೇಕಡಾ 20-25ರಷ್ಟು ಹೆಚ್ಚಿನ ಬೆಂಬಲ ಬೆಲೆ ನಿಗದಿಪಡಿಸಲು ಕೇಂದ್ರದ ಕೃಷಿ ವೆಚ್ಚ ಮತ್ತು ಬೆಲೆ ಆಯೋಗವನ್ನು ಕೋರಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಈ ಬಗ್ಗೆ ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಇಂದು ಮಾಹಿತಿ ನೀಡಿದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು, ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರವು ಘೋಷಣೆ ಮಾಡುತ್ತದೆ. ಕೃಷಿ ವೆಚ್ಚ ಮತ್ತು ಬೆಲೆ ಆಯೋಗವು ಪ್ರತಿ ವರ್ಷ ಮುಂಗಾರು ಮತ್ತು ಹಿಂಗಾರು ಹಂಗಾಮಿನ ಬೆಳೆಗಳಿಗೆ ವಿವಿಧ ರಾಜ್ಯಗಳಲ್ಲಿ ಉತ್ಪಾದನಾ ವೆಚ್ಚ ವಿವರಗಳನ್ನು ಕೃಷಿ ವಿಶ್ವವಿದ್ಯಾನಿಲಯಗಳ ಸಹಯೋಗದಲ್ಲಿ ಲೆಕ್ಕಾಚಾರ ಮಾಡುತ್ತದೆ.

ಜೊತೆಗೆ ಎಲ್ಲಾ ರಾಜ್ಯ ಸರ್ಕಾರಗಳಿಂದ ಬೆಳೆಗಳ ಉತ್ಪಾದನಾ ವೆಚ್ಚದ ಮಾಹಿತಿ ಪಡೆದು, ತಜ್ಞರು, ಅಧಿಕಾರಿಗಳು ಮತ್ತು ರೈತರೊಂದಿಗೆ ಚರ್ಚಿಸಿ, ಉತ್ಪಾದನಾ ವೆಚ್ಚದ ವಿವರಗಳನ್ನು ಒಳಗೊಂಡ ಬೆಲೆ ನೀತಿ ವರದಿಯನ್ನು ತಯಾರಿಸಲಾಗುತ್ತದೆ ಎಂದು ಹೇಳಿದರು.

ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಪ್ರತಿ ವರ್ಷ ತೊಗರಿ ಬೆಳೆಗೆ ಹೆಚ್ಚಿನ ಬೆಂಬಲ ಬೆಲೆಗೆ ಶಿಫಾರಸ್ಸು ಮಾಡಲಾಗುತ್ತಿದೆ. ಅದರ ಅನ್ವಯದಂತೆ ವಿವಿಧ ಮಾನದಂಡಗಳನ್ನು ಅನುಸರಿಸಿ ಬೆಂಬಲ ಬೆಲೆ ನಿಗದಿಯಾಗಲಿದೆ ಎಂದು ವರ್ಷವಾರು ಅಂಕಿ ಅಂಶಗಳೊಂದಿಗೆ ಮಾಹಿತಿ ನೀಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

4 hours ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

4 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

4 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

5 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

5 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

5 hours ago