ಬೆಳಗಾವಿ: ಕಲಬುರಗಿ ಜಿಲ್ಲೆಯಲ್ಲಿ ಬೆಳೆಯುವ ತೊಗರಿಗೆ ಜಿ.ಐ.ಟ್ಯಾಗ್ ಪ್ರಮಾಣಪತ್ರ ದೊರೆತಿದ್ದು, ಇದಕ್ಕೆ ಶೇಕಡಾ 20-25ರಷ್ಟು ಹೆಚ್ಚಿನ ಬೆಂಬಲ ಬೆಲೆ ನಿಗದಿಪಡಿಸಲು ಕೇಂದ್ರದ ಕೃಷಿ ವೆಚ್ಚ ಮತ್ತು ಬೆಲೆ ಆಯೋಗವನ್ನು ಕೋರಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಈ ಬಗ್ಗೆ ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಇಂದು ಮಾಹಿತಿ ನೀಡಿದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು, ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರವು ಘೋಷಣೆ ಮಾಡುತ್ತದೆ. ಕೃಷಿ ವೆಚ್ಚ ಮತ್ತು ಬೆಲೆ ಆಯೋಗವು ಪ್ರತಿ ವರ್ಷ ಮುಂಗಾರು ಮತ್ತು ಹಿಂಗಾರು ಹಂಗಾಮಿನ ಬೆಳೆಗಳಿಗೆ ವಿವಿಧ ರಾಜ್ಯಗಳಲ್ಲಿ ಉತ್ಪಾದನಾ ವೆಚ್ಚ ವಿವರಗಳನ್ನು ಕೃಷಿ ವಿಶ್ವವಿದ್ಯಾನಿಲಯಗಳ ಸಹಯೋಗದಲ್ಲಿ ಲೆಕ್ಕಾಚಾರ ಮಾಡುತ್ತದೆ.
ಜೊತೆಗೆ ಎಲ್ಲಾ ರಾಜ್ಯ ಸರ್ಕಾರಗಳಿಂದ ಬೆಳೆಗಳ ಉತ್ಪಾದನಾ ವೆಚ್ಚದ ಮಾಹಿತಿ ಪಡೆದು, ತಜ್ಞರು, ಅಧಿಕಾರಿಗಳು ಮತ್ತು ರೈತರೊಂದಿಗೆ ಚರ್ಚಿಸಿ, ಉತ್ಪಾದನಾ ವೆಚ್ಚದ ವಿವರಗಳನ್ನು ಒಳಗೊಂಡ ಬೆಲೆ ನೀತಿ ವರದಿಯನ್ನು ತಯಾರಿಸಲಾಗುತ್ತದೆ ಎಂದು ಹೇಳಿದರು.
ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಪ್ರತಿ ವರ್ಷ ತೊಗರಿ ಬೆಳೆಗೆ ಹೆಚ್ಚಿನ ಬೆಂಬಲ ಬೆಲೆಗೆ ಶಿಫಾರಸ್ಸು ಮಾಡಲಾಗುತ್ತಿದೆ. ಅದರ ಅನ್ವಯದಂತೆ ವಿವಿಧ ಮಾನದಂಡಗಳನ್ನು ಅನುಸರಿಸಿ ಬೆಂಬಲ ಬೆಲೆ ನಿಗದಿಯಾಗಲಿದೆ ಎಂದು ವರ್ಷವಾರು ಅಂಕಿ ಅಂಶಗಳೊಂದಿಗೆ ಮಾಹಿತಿ ನೀಡಿದರು.
ಶ್ರೀರಂಗಪಟ್ಟಣ : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…
ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…
ಅಮೃತ್ಸರ : ಪಂಜಾಬ್ನ ಅಮೃತ್ಸರ್ ಮತ್ತು ಜಲಂಧರ್ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…
7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ : ವನ್ಯಜೀವಿಗಳ ಸಂಖ್ಯೆ ದಿನದಿಂದ…
ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…
ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…