ರಾಜ್ಯ

ಮೇ.2ರಂದು ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ; ಹೈ ಆದೇಶದ ಬೆನ್ನಲ್ಲೇ ಸಕಲ ಸಿದ್ಧತೆ

ಬೆಂಗಳೂರು : ಕರ್ನಾಟಕ ಹೈಕೋರ್ಟ್ ನಿರ್ದೇಶನದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಮೇ 2ರಂದು ಐಡಿಎಸ್‌ಜಿ ಫಸ್ಟ್ ಗ್ರೇಡ್ ಕಾಲೇಜಿನಲ್ಲಿ ನಡೆಯಲಿದೆ. ಮರುಎಣಿಕೆ ಪ್ರಕ್ರಿಯೆಗೆ ಜಿಲ್ಲಾಡಳಿತ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ಎಡಿಸಿ ಗೌರವ್ ಶೆಟ್ಟಿ ಅವರನ್ನು ಚುನಾವಣಾಧಿಕಾರಿಯಾಗಿ ನೇಮಿಸಲಾಗಿದ್ದು, ನಾಲ್ವರು ಸಹಾಯಕ ಚುನಾವಣಾಧಿಕಾರಿಗಳನ್ನು ನಿಯೋಜಿಸಲಾಗಿದೆ. ಮತ ಎಣಿಕೆ ಕೊಠಡಿಯಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಬೆಳಗ್ಗೆ 8 ಗಂಟೆಗೆ ಮರುಎಣಿಕೆ ಪ್ರಾರಂಭವಾಗಲಿದೆ.

201 ಮತಗಳ ಅಂತರದಲ್ಲಿ ಸೋತಿದ್ದ ಜೀವರಾಜ್
2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ 201 ಮತಗಳ ಅಂತರದಿಂದ ಸೋತಿದ್ದರು. ಒಟ್ಟು 2,811 ಅಂಚೆ ಮತಗಳಲ್ಲಿ 279 ಮತಗಳು ತಿರಸ್ಕೃತವಾಗಿದ್ದವು. ಈ ಫಲಿತಾಂಶವನ್ನು ಪ್ರಶ್ನಿಸಿ ಡಿ.ಎನ್. ಜೀವರಾಜ್ ಮರುಎಣಿಕೆಗೆ ಮನವಿ ಮಾಡಿದ್ದರಾದರೂ, ಜಿಲ್ಲಾ ಚುನಾವಣಾಧಿಕಾರಿ ಅದನ್ನು ಪರಿಗಣಿಸದೆ ಟಿ.ಡಿ. ರಾಜೇಗೌಡರನ್ನು ವಿಜೇತರಾಗಿ ಘೋಷಿಸಿದ್ದರು. ಇದರಿಂದ ಅಸಮಾಧಾನಗೊಂಡ ಜೀವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದು, ಕೋರ್ಟ್​​ ಆದೇಶದಂತೆ ಇದೀಗ ಅಂಚೆ ಮತಗಳ ಮರುಎಣಿಕೆಗೆ ಸಿದ್ಧತೆ ನಡೆಸಲಾಗ್ತಿದೆ.

ಶೃಂಗೇರಿ ಶಾಸಕರಾಗಿ ಟಿ.ಡಿ.ರಾಜೇಗೌಡ ಆಯ್ಕೆ ಅಸಿಂಧು ಕೋರಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಡಿ.ಎನ್.ಜೀವರಾಜ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ಹೈಕೋರ್ಟ್ ಪೀಠ, 279 ಅಂಚೆ ಮತಪತ್ರಗಳ ಮರುಪರಿಶೀಲನೆಗೆ ಆದೇಶ ಹೊರಡಿಸಿತ್ತು. ಅಲ್ಲದೆ 2 ವಾರಗಳಲ್ಲಿ ಮರುಪರಿಶೀಲನೆ ನಡೆಸಿ ಫಲಿತಾಂಶ ಪ್ರಕಟಿಸಲು ನಿರ್ದೇಶನ ನೀಡಿತ್ತು. ಇನ್ನು ಮತ ಮರುಎಣಿಕೆ ವೇಳೆ ಏಜೆಂಟ್‌ಗಳು, ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಹಾಗೂ ಸೋತ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಹಾಜರಾಗುವ ನಿರೀಕ್ಷೆಯಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

14 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

14 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

14 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

14 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

14 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

15 hours ago