ರಾಜ್ಯ

ಬಿಗಿ ಬಂದೋಬಸ್ತ್‌ನಲ್ಲಿ ನಡೆದ ಮಾಲೂರು ಕ್ಷೇತ್ರದ ಮರು ಮತಎಣಿಕೆ

ಬೆಂಗಳೂರು: ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಪ್ರಕ್ರಿಯೆ ಇಂದು ಸುಪ್ರೀಂಕೋರ್ಟ್ ನಿರ್ದೇಶನದಂತೆ ಕೋಲಾರದ ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ನಡೆಯಿತು.

ಕಳೆದ 2023ರ ಮಾಲೂರು ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪಿನ ಅನುಸಾರ ಇಂದು ಮರು ಮತ ಎಣಿಕೆ ಬೆಳಗ್ಗೆ 8 ಗಂಟೆಯಿಂದ ಆರಂಭವಾಯಿತು.

ಎಣಿಕ ಕೇಂದ್ರದೊಳಗೆ ಪ್ರವೇಶಿಸುವ ಪ್ರತಿಯೊಬ್ಬರನ್ನು ಚುನಾವಣಾ ಸಿಬ್ಬಂದಿ, ಏಜೆಂಟರು ಮತ್ತು ಅಧಿಕಾರಿಗಳನ್ನು ಪೊಲೀಸರು ಸಂಪೂರ್ಣವಾಗಿ ತಪಾಸಣೆ ನಡೆಸಿ ಒಳಗೆ ಬಿಡಲಾಯಿತು. ಮತ ಎಣಿಕೆ ಕೇಂದ್ರದ ಸುತ್ತ ಸಿಸಿ ಕ್ಯಾಮೆರಾ ಕಣ್ಗಾವಲು ಇರಿಸಲಾಗಿತ್ತು.

ಇದನ್ನು ಓದಿ: ಮಾಲೂರು ಕ್ಷೇತ್ರದ ಮರು ಮತ ಎಣಿಕೆ: ಕೇಂದ್ರದ ಸುತ್ತ ನಿಷೇಧಾಜ್ಞೆ

ಮೊಬೈಲ್ ಫೋನ್, ಕಾಗದ, ಪೆನ್ ಸೇರಿದಂತೆ ಯಾವುದೇ ವಸ್ತುಗಳನ್ನು ಒಳಗೆ ತೆಗೆದುಕೊಂಡು ಹೋಗಲು ಅನುಮತಿ ನೀಡಲಿಲ್ಲ.

ಪರಿಶೀಲನೆಯ ನಂತರ ಮಾತ್ರ ಅವರಿಗೆ ಮತ ಎಣಿಕೆ ಕೇಂದ್ರಕ್ಕೆ ಪ್ರವೇಶ ನೀಡಲಾಯಿತು. ಎಣಿಕ ಕೇಂದ್ರದ ಆವರಣದೊಳಗೆ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಪಡೆ ನಿಯೋಜನೆ ಮಾಡಲಾಗಿತ್ತು.

2023 ಮೇ.13ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವೈ.ನಂಜೇಗೌಡ ಕೇವಲ 248 ಮತಗಳಿಂದ ಜಯಗಳಿಸಿದ್ದರು. ಬಿಜೆಪಿ ಅಭ್ಯರ್ಥಿ ಕೆ.ಎಸ್ ಮಂಜುನಾಥಗೌಡ ಮತ ಎಣಿಕೆಯಲ್ಲಿ ಲೋಪ ನಡೆದಿದೆ ಎಂದು ಮರು ಎಣಿಕೆಗೆ ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯ ಅರ್ಜಿ ಪರಿಗಣಿಸಿ ಮರು ಮತ ಎಣಿಕೆಗೆ ಅನುಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಮತ ಎಣಿಕೆ ನಡೆಸಿ ಫಲಿತಾಂಶ ಘೋಷಿಸದೆ ಸೀಲ್ ಮಾಡಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

 

ಆಂದೋಲನ ಡೆಸ್ಕ್

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

7 hours ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

7 hours ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

7 hours ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

8 hours ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

8 hours ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

8 hours ago