ಬೆಂಗಳೂರು: ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಪ್ರಕ್ರಿಯೆ ಇಂದು ಸುಪ್ರೀಂಕೋರ್ಟ್ ನಿರ್ದೇಶನದಂತೆ ಕೋಲಾರದ ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ನಡೆಯಿತು.
ಕಳೆದ 2023ರ ಮಾಲೂರು ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪಿನ ಅನುಸಾರ ಇಂದು ಮರು ಮತ ಎಣಿಕೆ ಬೆಳಗ್ಗೆ 8 ಗಂಟೆಯಿಂದ ಆರಂಭವಾಯಿತು.
ಎಣಿಕ ಕೇಂದ್ರದೊಳಗೆ ಪ್ರವೇಶಿಸುವ ಪ್ರತಿಯೊಬ್ಬರನ್ನು ಚುನಾವಣಾ ಸಿಬ್ಬಂದಿ, ಏಜೆಂಟರು ಮತ್ತು ಅಧಿಕಾರಿಗಳನ್ನು ಪೊಲೀಸರು ಸಂಪೂರ್ಣವಾಗಿ ತಪಾಸಣೆ ನಡೆಸಿ ಒಳಗೆ ಬಿಡಲಾಯಿತು. ಮತ ಎಣಿಕೆ ಕೇಂದ್ರದ ಸುತ್ತ ಸಿಸಿ ಕ್ಯಾಮೆರಾ ಕಣ್ಗಾವಲು ಇರಿಸಲಾಗಿತ್ತು.
ಇದನ್ನು ಓದಿ: ಮಾಲೂರು ಕ್ಷೇತ್ರದ ಮರು ಮತ ಎಣಿಕೆ: ಕೇಂದ್ರದ ಸುತ್ತ ನಿಷೇಧಾಜ್ಞೆ
ಮೊಬೈಲ್ ಫೋನ್, ಕಾಗದ, ಪೆನ್ ಸೇರಿದಂತೆ ಯಾವುದೇ ವಸ್ತುಗಳನ್ನು ಒಳಗೆ ತೆಗೆದುಕೊಂಡು ಹೋಗಲು ಅನುಮತಿ ನೀಡಲಿಲ್ಲ.
ಪರಿಶೀಲನೆಯ ನಂತರ ಮಾತ್ರ ಅವರಿಗೆ ಮತ ಎಣಿಕೆ ಕೇಂದ್ರಕ್ಕೆ ಪ್ರವೇಶ ನೀಡಲಾಯಿತು. ಎಣಿಕ ಕೇಂದ್ರದ ಆವರಣದೊಳಗೆ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಪಡೆ ನಿಯೋಜನೆ ಮಾಡಲಾಗಿತ್ತು.
2023 ಮೇ.13ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವೈ.ನಂಜೇಗೌಡ ಕೇವಲ 248 ಮತಗಳಿಂದ ಜಯಗಳಿಸಿದ್ದರು. ಬಿಜೆಪಿ ಅಭ್ಯರ್ಥಿ ಕೆ.ಎಸ್ ಮಂಜುನಾಥಗೌಡ ಮತ ಎಣಿಕೆಯಲ್ಲಿ ಲೋಪ ನಡೆದಿದೆ ಎಂದು ಮರು ಎಣಿಕೆಗೆ ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯ ಅರ್ಜಿ ಪರಿಗಣಿಸಿ ಮರು ಮತ ಎಣಿಕೆಗೆ ಅನುಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಮತ ಎಣಿಕೆ ನಡೆಸಿ ಫಲಿತಾಂಶ ಘೋಷಿಸದೆ ಸೀಲ್ ಮಾಡಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ…
ತುಮಕೂರು : ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯದ ಜನತೆಗೆ ಪ್ರಣಾಳಿಕೆಯಲ್ಲಿ ನೀಡಿದ್ದ 580 ಭರವಸೆಗಳ ಪೈಕಿ 290ಕ್ಕೂ ಹೆಚ್ಚು ಭರವಸೆಗಳನ್ನು…
ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ…
ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದ ಸುಪ್ರೀಂಕೋರ್ಟ್ ತನ್ನ ಆದೇಶವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದೆ.…
ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…