ರಾಜ್ಯ

ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು.

ಪ್ರತಿಪಕ್ಷದ ನಾಯಕ ಆರ್.ಅಶೋಕ್ ನಿಲುವಳಿ ಸೂಚನೆಯಡಿ, ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಯ ಕುರಿತು ಚರ್ಚೆ ಮಾಡಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಧಾರವಾಡ, ವಿಜಯಪುರ ಸೇರಿದಂತೆ ಹಲವಾರು ಕಡೆಗಳಲ್ಲಿ ಉದ್ಯೋಗಾಕಾಂಕ್ಷಿಗಳು ಸಾವಿರಾರು ಸಂಖ್ಯೆಯಲ್ಲಿ ಸೇರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳಗಾವಿಯ ಚಳಿಗಾಲದ ಅಧಿವೇಶನದ ವೇಳೆಯಲ್ಲೂ ಸುವರ್ಣಸೌಧದ ಮುಂದೆ ಪ್ರತಿಭಟಿಸಲು ಅನುಮತಿ ಕೇಳಲಾಗಿತ್ತು. ೩೦ ಸಾವಿರಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಯುವ ಜನರು ಸೇರುವ ಸಾಧ್ಯತೆ ಇರುವುದರಿಂದ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಇತ್ತ ಪ್ರತಿಭಟನೆಗಳಿಗೂ ಅನುಮತಿ ಕೊಡುತ್ತಿಲ್ಲ, ಸರ್ಕಾರಿ ಹುದ್ದೆಗಳ ನೇಮಕಾತಿಯೂ ಆಗುತ್ತಿಲ್ಲ. ಸದನದಲ್ಲಿ ಚರ್ಚಿಸಲಾದರೂ ಅವಕಾಶ ಕೊಡಿ ಎಂದು ಮನವಿ ಮಾಡಿದರು.

ಇದನ್ನೂ ಓದಿ:ಶೀಘ್ರ 3600 ಸಿಬ್ಬಂದಿ ನೇಮಕಾತಿಗೆ ಅಧಿಸೂಚನೆ : ಪರಮೇಶ್ವರ್‌

ಒಳ ಮೀಸಲಾತಿಯ ಗೊಂದಲವನ್ನು ಮುಂದಿಟ್ಟುಕೊಂಡು ಎರಡೂವರೆ ವರ್ಷಗಳಿಂದಲೂ ಸರ್ಕಾರ ಯಾವ ಹುದ್ದೆಗಳಿಗೂ ನೇಮಕಾತಿ ಮಾಡಿಲ್ಲ ಎಂದು ಆಕ್ಷೇಪಿಸಿದರು. ಸರ್ಕಾರದ ಪರವಾಗಿ ಉತ್ತರ ನೀಡಿದ ಸಚಿವ ಕೃಷ್ಣಭೈರೇಗೌಡ, ಒಳಮೀಸಲಾತಿಯ ಗೊಂದಲಗಳನ್ನು ಬಗೆಹರಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಈ ಗೊಂದಲದಿಂದಾಗಿಯೇ ನೇಮಕಾತಿ ವಿಳಂಬವಾಗಿದೆ. ಒಳ ಮೀಸಲಾತಿ ಕುರಿತ ಮಸೂದೆಯನ್ನು ಇದೇ ಅಧಿವೇಶನದಲ್ಲಿ ಮಂಡಿಸಲಾಗಿದೆ. ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲೂ ವಿಷಯ ಕುರಿತು ಚರ್ಚಿಸಲಾಗುತ್ತಿದೆ ಎಂದು ಹೇಳಿದರು.

ವಿಧಾನಸಭೆಯ ನಿಯಮಾವಳಿಗಳ ಪ್ರಕಾರ ನಿಲುವಳಿ ಸೂಚನೆಯಡಿ ಈ ವಿಚಾರವನ್ನು ಚರ್ಚಿಸಲು ಅವಕಾಶ ಇಲ್ಲ ಎಂದು ಸಭಾಧ್ಯಕ್ಷರು ನಿಲುವಳಿ ಸೂಚನೆಯನ್ನು ತಳ್ಳಿ ಹಾಕಿದರು.

ಆಂದೋಲನ ಡೆಸ್ಕ್

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

11 mins ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

57 mins ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

2 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

8 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

14 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

14 hours ago