ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು.
ಪ್ರತಿಪಕ್ಷದ ನಾಯಕ ಆರ್.ಅಶೋಕ್ ನಿಲುವಳಿ ಸೂಚನೆಯಡಿ, ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಯ ಕುರಿತು ಚರ್ಚೆ ಮಾಡಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.
ಧಾರವಾಡ, ವಿಜಯಪುರ ಸೇರಿದಂತೆ ಹಲವಾರು ಕಡೆಗಳಲ್ಲಿ ಉದ್ಯೋಗಾಕಾಂಕ್ಷಿಗಳು ಸಾವಿರಾರು ಸಂಖ್ಯೆಯಲ್ಲಿ ಸೇರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳಗಾವಿಯ ಚಳಿಗಾಲದ ಅಧಿವೇಶನದ ವೇಳೆಯಲ್ಲೂ ಸುವರ್ಣಸೌಧದ ಮುಂದೆ ಪ್ರತಿಭಟಿಸಲು ಅನುಮತಿ ಕೇಳಲಾಗಿತ್ತು. ೩೦ ಸಾವಿರಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಯುವ ಜನರು ಸೇರುವ ಸಾಧ್ಯತೆ ಇರುವುದರಿಂದ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಇತ್ತ ಪ್ರತಿಭಟನೆಗಳಿಗೂ ಅನುಮತಿ ಕೊಡುತ್ತಿಲ್ಲ, ಸರ್ಕಾರಿ ಹುದ್ದೆಗಳ ನೇಮಕಾತಿಯೂ ಆಗುತ್ತಿಲ್ಲ. ಸದನದಲ್ಲಿ ಚರ್ಚಿಸಲಾದರೂ ಅವಕಾಶ ಕೊಡಿ ಎಂದು ಮನವಿ ಮಾಡಿದರು.
ಇದನ್ನೂ ಓದಿ:ಶೀಘ್ರ 3600 ಸಿಬ್ಬಂದಿ ನೇಮಕಾತಿಗೆ ಅಧಿಸೂಚನೆ : ಪರಮೇಶ್ವರ್
ಒಳ ಮೀಸಲಾತಿಯ ಗೊಂದಲವನ್ನು ಮುಂದಿಟ್ಟುಕೊಂಡು ಎರಡೂವರೆ ವರ್ಷಗಳಿಂದಲೂ ಸರ್ಕಾರ ಯಾವ ಹುದ್ದೆಗಳಿಗೂ ನೇಮಕಾತಿ ಮಾಡಿಲ್ಲ ಎಂದು ಆಕ್ಷೇಪಿಸಿದರು. ಸರ್ಕಾರದ ಪರವಾಗಿ ಉತ್ತರ ನೀಡಿದ ಸಚಿವ ಕೃಷ್ಣಭೈರೇಗೌಡ, ಒಳಮೀಸಲಾತಿಯ ಗೊಂದಲಗಳನ್ನು ಬಗೆಹರಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಈ ಗೊಂದಲದಿಂದಾಗಿಯೇ ನೇಮಕಾತಿ ವಿಳಂಬವಾಗಿದೆ. ಒಳ ಮೀಸಲಾತಿ ಕುರಿತ ಮಸೂದೆಯನ್ನು ಇದೇ ಅಧಿವೇಶನದಲ್ಲಿ ಮಂಡಿಸಲಾಗಿದೆ. ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲೂ ವಿಷಯ ಕುರಿತು ಚರ್ಚಿಸಲಾಗುತ್ತಿದೆ ಎಂದು ಹೇಳಿದರು.
ವಿಧಾನಸಭೆಯ ನಿಯಮಾವಳಿಗಳ ಪ್ರಕಾರ ನಿಲುವಳಿ ಸೂಚನೆಯಡಿ ಈ ವಿಚಾರವನ್ನು ಚರ್ಚಿಸಲು ಅವಕಾಶ ಇಲ್ಲ ಎಂದು ಸಭಾಧ್ಯಕ್ಷರು ನಿಲುವಳಿ ಸೂಚನೆಯನ್ನು ತಳ್ಳಿ ಹಾಕಿದರು.
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…