ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ 2,000 ಬೋಧಕ ಹುದ್ದೆಗಳನ್ನು ವೃಂದ ಮತ್ತು ನೇಮಕಾತಿ ನಿಯಮಗಳ ಅನ್ವಯ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅನುಮತಿ ನೀಡಿ ಆದೇಶಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ವಿಧಾನಪರಿಷತ್ಗೆ ತಿಳಿಸಿದರು.
ಶಾಸಕ ಡಾ.ತಳವಾರ್ ಸಾಬಣ್ಣ ಅವರು ನಿಯಮ 330 ರಡಿ ಪ್ರಸ್ತಾಪಿಸಿದ ಸೂಚನೆಗೆ ಉತ್ತರ ನೀಡಿದ ಸಚಿವರು, ಸಾರ್ವಜನಿಕ ವಿವಿಗಳಲ್ಲಿ 100 ಬೋಧಕ ಹುದ್ದೆಗಳನ್ನು ತರ್ಕಬದ್ಧಗೊಳಿಸಿ ಹಂತಹಂತವಾಗಿ ಭರ್ತಿ ಮಾಡಲು ಆಯವ್ಯಯದಲ್ಲಿ ಘೋಷಿಸಲಾಗಿದೆ. ಉನ್ನತ ಶಿಕ್ಷಣ ಇಲಾಖೆಯಡಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದರು.
ಉನ್ನತ ಶಿಕ್ಷಣ ಇಲಾಖೆಯಡಿ ಶೈಕ್ಷಣಿಕ ಚಟುವಟಿಕೆಗಳನ್ನು ಹಾಗೂ ವಿವಿಗಳನ್ನು ಬಲಪಡಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಹೇಳಿದರು.
2026-27ನೇ ಸಾಲಿನಿಂದ 2030-31ನೇ ಶೈಕ್ಷಣಿಕ ಸಾಲಿನವರೆಗೆ ಶೈಕ್ಷಣಿಕ ಚಟುವಟಿಕೆಗಳನ್ನು ನಿಗದಿತ ಸಮಯದೊಳಗಾಗಿ ನಡೆಸಲು ಒಟ್ಟು 5 ವರ್ಷಗಳ ಶೈಕ್ಷಣಿಕ ವೇಳಾಪಟ್ಟಿಯನ್ನು ಹೊರಡಿಸಲಾಗಿದೆ. ಅದರಂತೆ ವಿದ್ಯಾರ್ಥಿಗಳ ತರಗತಿ, ಪರೀಕ್ಷೆ ಮತ್ತು ಫಲಿತಾಂಶಗಳನ್ನು ಒಳಗೊಂಡಂತೆ ರಾಜ್ಯದ ಎಲ್ಲ ವಿವಿಗಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ಏಕರೂಪತೆಯನ್ನು ಸಾಽಸಲಾಗಿದೆ ಎಂದು ತಿಳಿಸಿದರು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…