ಬೆಂಗಳೂರು: ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆದ ಬೃಹತ್ ಹೋರಾಟ ಕುರಿತು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರದಲ್ಲಿದ್ದಗ ಎಷ್ಟು ಹುದ್ದೆಗಳ ಭರ್ತಿ ಮಾಡಿದ್ದಾರೆ?. ಖಾಲಿ ಹುದ್ದೆಗಳ ಭರ್ತಿ ಮಾಡಲು ತಯಾರಿ ಮಾಡಿಕೊಂಡಿದ್ದೇವೆ. ರಾಜ್ಯಪಾಲರ ಅಂಕಿತದ ಬಳಿಕ ನಾವು ನೇಮಕಾತಿ ಪ್ರಕ್ರಿಯೆ ಮಾಡುತ್ತೇವೆ ಎಂದು ಹೇಳಿದರು.
ನನ್ನ ಇಲಾಖೆಯಲ್ಲಿ 4 ಸಾವಿರ ಹುದ್ದೆಗಳಿಗೆ ನೇಮಕಾತಿ ಮಾಡುತ್ತೇವೆ. ಹಣಕಾಸು ಇಲಾಖೆ ಅನುಮೋದನೆ ನೀಡಿದೆ. 9 ಸಾವಿರ ಹುದ್ದೆಗಳಿಗೆ ನೇಮಕಾತಿ ಶುರುವಾಗಲಿದೆ ಎಂದು ಹೇಳಿದರು.





