ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್ಸ್ಟೆಬಲ್ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಅವರು, ‘545 ಪಿಎಸ್ಐಗಳು ಈಗಾಗಲೇ ಇಲಾಖೆಗೆ ಸೇರ್ಪಡೆಯಾಗಿದ್ದಾರೆ. ಹೊಸದಾಗಿ 600 ಪಿಎಸ್ಐಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ಖಾಲಿ ಇರುವ ಹುದ್ದೆಗಳ ಪೈಕಿ 8 ಸಾವಿರ ಕಾನ್ಸ್ಟೆಬಲ್ಗಳ ನೇಮಕಾತಿ ಶೀಘ್ರವೇ ನಡೆಯಲಿದೆ’ ಎಂದರು.
56,834 ಹುದ್ದೆ ಭರ್ತಿಗೆ ಕ್ರಮ
‘56,834 ಹುದ್ದೆಗಳನ್ನು ನೇಮಕ ಮಾಡಿಕೊಳ್ಳುವುದಾಗಿ ಮುಖ್ಯಮಂತ್ರಿ ಈಗಾಗಲೇ ಪ್ರಕಟಿಸಿದ್ದಾರೆ. ಅದರಲ್ಲಿ ಕಾನ್ಸ್ಟೆಬಲ್ ಹುದ್ದೆಗಳೂ ಸೇರಿವೆ’ ಎಂದು ಸಚಿವರು ಸ್ಪಷ್ಟಪಡಿಸಿದರು.
ಸೈಬರ್ ಅಪರಾಧ ತಡೆಗೆ ಕ್ರಮ
‘ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಂಚನೆ ಮಾಡುವ ಪ್ರಕರಣಗಳ ಬಗ್ಗೆ ಇಲಾಖೆ ಗಂಭೀರವಾಗಿ ತನಿಖೆ ನಡೆಸುತ್ತಿದೆ. ಅದಕ್ಕಾಗಿಯೇ ಸೈಬರ್ ಅಪರಾಧಗಳ ಮೇಲ್ವಿಚಾರಣೆಗಾಗಿ ಡಿಜಿಪಿ ಹುದ್ದೆಯನ್ನು ಸೃಷ್ಟಿಸಲಾಗಿದೆ. 24 ಸಾವಿರ ಪ್ರಕರಣಗಳ ಪೈಕಿ 10 ಸಾವಿರ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಪೊಲೀಸರಿಗೂ ಸೈಬರ್ ಅಪರಾಧಗಳ ಬಗ್ಗೆ ತಾಂತ್ರಿಕ ತರಬೇತಿ ನೀಡಲಾಗುತ್ತಿದೆ’ ಎಂದರು.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…