ರಾಜ್ಯ

ಜ್ವರದ ಜೊತೆ ಕಣ್ಣು ಕೆಂಪಾಯ್ತಾ.? ಝೀಕಾ ವೈರಸ್‌ ಟೆಸ್ಟ್‌ ಮಾಡಿಸಿ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಏರಿಕೆ ಬೆನ್ನಲ್ಲೇ ಈಗ ಝೀಕಾ ವೈರಸ್‌ ಆರ್ಭಟ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿ ಎಚ್ಚರ ವಹಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ರಾಜ್ಯದಲ್ಲಿ ಡೆಂಗ್ಯೂ ಬೆನ್ನಲ್ಲೇ ಝೀಕಾ ವೈರಸ್‌ ಅಬ್ಬರ ಶುರುವಾಗಿದ್ದು, ಶಿವಮೊಗ್ಗದಲ್ಲಿ ವೃದ್ಧ ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಆರೋಗ್ಯ ಇಲಾಖೆಯು ಮಾರ್ಗಸೂಚಿ ಬಿಡುಗಡೆ ಮಾಡಿ ಎಚ್ಚರ ವಹಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದೆ. ಡೆಂಗ್ಯೂ ರೀತಿಯಲ್ಲೇ ಸೋಂಕಿತ ಈಡಿಸ್‌ ಸೊಳ್ಳೆ ಕಚ್ಚುವುದರಿಂದ ಝೀಕಾ ವೈರಸ್‌ ಹರಡುತ್ತದೆ. ಸೋಂಕು ಕಾಣಿಸಿಕೊಂಡ ತಕ್ಷಣ ಎಚ್ಚೆತ್ತು ಚಿಕಿತ್ಸೆ ಪಡೆಯುವ ಸಲುವಾಗಿ ರೋಗದ ಗುಣಲಕ್ಷಣ, ಸೋಂಕು ಉಂಟಾದರೆ ತೆಗೆದುಕೊಳ್ಳಬೇಕಿರುವ ಪರಿಹಾರ ಕ್ರಮ, ಸೊಳ್ಳೆ ನಿಯಂತ್ರಣ ಮಾಡಲು ಮಾಡಬೇಕಿರುವ ಪರಿಹಾರ ಕ್ರಮಗಳ ಬಗ್ಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

ಝೀಕಾ ಸೋಂಕು ಉಂಟಾದರೆ ಸಾಮಾನ್ಯವಾಗಿ ಜ್ವರ, ತಲೆನೋವು, ಕಣ್ಣು ಕೆಂಪಾಗುವಿಕೆ, ದದ್ದುಗಳು ಉಂಟಾಗುವುದು ಆಗುತ್ತದೆ. ಜೊತೆಗೆ ಕಾಲು ಮತ್ತು ಸ್ನಾಯುಗಳಲ್ಲಿ ನೋವು ಉಂಟಾಗುತ್ತದೆ. ಇನ್ನು ಬಹುತೇಕರಲ್ಲಿ ಝೀಕಾ ರೋಗ ಲಕ್ಷಣಗಳು ಕಂಡುಬರುವುದಿಲ್ಲ. ಸಾಮಾನ್ಯವಾಗಿ ರೋಗದ ಲಕ್ಷಣ ಕಾಣಿಸಿಕೊಂಡರೆ ೨ ರಿಂದ ೭ ದಿನಗಳವರೆಗೆ ಇರುತ್ತದೆ. ಗರ್ಭಾವಸ್ಥೆಯಲ್ಲಿ ತಾಯಿಯಲ್ಲಿ ಝೀಕಾ ವೈರಸ್‌ ಸೋಂಕು ಕಾಣಿಸಿಕೊಂಡರೆ ಜನಿಸಿದ ಶಿಶುವಿನ ತಲೆಯ ಗಾತ್ರದಲ್ಲಿ ಕಡಿಮೆ ಬೆಳವಣಿಗೆ ಕಂಡು ಬರುವ ಸಾಧ್ಯತೆಯಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಝೀಕಾ ವೈರಸ್‌ನ ಸೋಂಕು ಉಂಟಾದರೆ ನಿರ್ದಿಷ್ಟ ಚಿಕಿತ್ಸೆ ಹಾಗೂ ಲಸಿಕೆ ಲಭ್ಯವಿಲ್ಲ. ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ. ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದು. ನಿರ್ಜಲೀಕರಣ ತಪ್ಪಿಸಲು ಹೆಚ್ಚು ನೀರಿನ ಅಂಶವುಳ್ಳ ಆಹಾರ ಪದಾರ್ಥ ಸೇವನೆ, ರೋಗ ಲಕ್ಷಣಗಳಿಗೆ ಅನುಗುಣವಾಗಿ ವೈದ್ಯರ ಸಲಹೆಯಂತೆ ನೀಡುವ ಔಷಧಿ ಪಡೆಯುವ ಜೊತೆಗೆ ಸಾಕಷ್ಟು ವಿಶ್ರಾಂತಿ ಪಡೆಯಬೇಕು. ಸೋಂಕು ಬೇರೆಯವರಿಗೆ ಹರಡದಂತೆ ಸೊಳ್ಳೆ ಪರದೆ ಉಪಯೋಗಿಸಬೇಕು ಎಂದು ಆರೋಗ್ಯ ಇಲಾಖೆ ಸಲಹೆ ನೀಡಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago