ರಾಜ್ಯ

ರೀಲ್ಸ್‌ ತಂದ ಆಪತ್ತು: ಅಪಘಾತದಲ್ಲಿ ಬಾಲಕ ಸಾವು

ಹುಬ್ಬಳ್ಳಿ: ಸಾಮಾಜಿಕ ಜಾಲತಾಣಗಳಲ್ಲಿ ‘ರೀಲ್ಸ್’ ಮಾಡಲು ಹೋಗಿ 15 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ಹುಬ್ಬಳ್ಳಿಯ ಬಿಜೆಪಿ ಮುಖಂಡ ವೀರೇಶ್ ಸಂಗಳದ ಅವರ 15 ವರ್ಷದ ಪುತ್ರ ನಮೀಶ್ ಸಂಗಳದ ರೀಲ್ಸ್ ಚಿತ್ರೀಕರಣ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೈಸೂರಿನಲ್ಲಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ನಮೀಶ್, ಯುಗಾದಿ ಹಬ್ಬದ ರಜೆಗಾಗಿ ತನ್ನ ಹುಬ್ಬಳ್ಳಿಯ ಮನೆಗೆ ಬಂದಿದ್ದನು. ಗುರುವಾರ ಸಂಜೆ ತನ್ನ ಸ್ನೇಹಿತರೊಂದಿಗೆ ಸೇರಿ ಹುಬ್ಬಳ್ಳಿಯ ಪ್ಲಾಟ್‌ವೊಂದರಲ್ಲಿ ರೀಲ್ಸ್ ಚಿತ್ರೀಕರಿಸಲು ತೆರಳಿದ್ದನು. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವಂತೆ ‘ಸ್ಟಂಟ್ ಮತ್ತು ಕ್ರಾಶ್’ ರೀತಿಯ ರೀಲ್ಸ್ ಚಿತ್ರೀಕರಿಸುತ್ತಿದ್ದರು ಎನ್ನಲಾಗಿದೆ. ವೇಗವಾಗಿ ಬರುವ ಕಾರು ಮತ್ತು ಬೈಕ್ ನಡುವೆ ಅಪಾಯಕಾರಿ ಸಾಹಸ ದೃಶ್ಯವನ್ನು ಚಿತ್ರೀಕರಿಸಲು ಯೋಜನೆ ರೂಪಿಸಿದ್ದರು.

ರೀಲ್ಸ್ ಚಿತ್ರೀಕರಣದ ವೇಳೆ ನಮೀಶ್ ಬೈಕ್ ಚಲಾಯಿಸುತ್ತಿದ್ದನು. ಎದುರಿನಿಂದ ಅತಿ ವೇಗವಾಗಿ ಬಂದ ಆಡಿ ಕಾರು ನೇರವಾಗಿ ನಮೀಶ್ ಚಲಾಯಿಸುತ್ತಿದ್ದ ಬೈಕ್‍ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಮೀಶ್ ಸುಮಾರು 30 ಅಡಿ ದೂರಕ್ಕೆ ಬಿದ್ದಿದ್ದಾನೆ. ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ದೃಶ್ಯವನ್ನು ನೋಡಿದ ಸ್ಥಳೀಯರು ಹಾಗೂ ಸ್ನೇಹಿತರು ಬೆಚ್ಚಿಬಿದ್ದಿದ್ದು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ರವಿನಗರದ ನಿವಾಸಿ ನಮೀಷ್ ಸಂಗಳದ ಮೃತಪಟ್ಟ ಬಾಲಕ. ಇಲ್ಲಿಯ ಶೇಜವಾಡ್ಕರ್ ಬಡಾವಣೆಯಲ್ಲಿ ಘಟನೆ ನಡೆದಿದ್ದು, ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

ಅಪ್ರಾಪ್ತರಿಗೆ ವಾಹನ ನೀಡಬೇಡಿ ಎಂದು ಪಾಲಕರಲ್ಲಿ ಜಾಗೃತಿ ಮೂಡಿಸುತ್ತಿದ್ದರೂ, ಅವರ ಗಮನಕ್ಕೆ ಬರದೆ ಕೆಲವು ಮಕ್ಕಳು ವಾಹನ ಚಲಾಯಿಸುತ್ತಿದ್ದಾರೆ. ಈ ಕುರಿತು ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

3 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

5 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

5 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

7 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

10 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

10 hours ago