ಬೆಂಗಳೂರು : ಏನೋ ಮಾಡಲು ಹೋಗಿ ಇನ್ನೆನೋ ಆಗಿ ಪೇಚಿಗೆ ಸಿಲುಕಿರುವ ಘಟನೆಗಳೂ ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಇದೀಗ ಇಂತಹುದದ್ದೇ ಒಂದು ಪ್ರಸಂಗ ಬೆಂಗಳೂರಲ್ಲಿಯೂ ನಡೆದಿದೆ.
ರೀಲ್ಸ್ ಮಾಡುವ ಚಟಕ್ಕೆ ವೃದ್ಧ ವ್ಯಕ್ತಿಯನ್ನು ಚೀಲದಲ್ಲಿ ಹಾಕಿ ಕೊರಿಯರ್ ಮಾಡಲು ಕುಟುಂಬವೊಂದು ಯತ್ನಿಸಿರುವ ಆಘಾತಕಾರಿ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಬೆಂಗಳೂರಿನ ವೈಯಾಲಿಕಾವಲ್ ಠಾಣಾ ವ್ಯಾಪ್ತಿಯಲ್ಲಿ ಇದು ನಡೆದಿದೆ.
ಮಹಿಳೆ, ಆಕೆಯ ಪತಿ, ಅತ್ತೆ ಹಾಗೂ ಮಾವ ಸೇರಿ ಐವರು ಕೊರಿಯರ್ ಕಚೇರಿಗೆ ದೊಡ್ಡ ಪಾರ್ಸಲ್ ಅನ್ನು ಹೊತ್ತು ತಂದಿದ್ದಾರೆ. ಇಷ್ಟು ದೊಡ್ಡ ಚೀಲ ನೋಡಿ ಒಳಗೆ ಏನಿದೆ ಎಂದು ಸಿಬ್ಬಂದಿ ಪ್ರಶ್ನಿಸಿದ್ದು, ಈ ವೇಳೆ ಕುಟುಂಬದವರಿಂದ ಯಾವುದೇ ಉತ್ತರ ಬಂದಿಲ್ಲ. ಇದರಿಂದ ಅನುಮಾನಗೊಂಡ ಸಿಬ್ಬಂದಿ ಪಾರ್ಸಲ್ ಓಪನ್ ಮಾಡಿ ನೋಡಿದ್ದಾರೆ. ಆ ವೇಳೆ ಅರೆಕ್ಷಣ ಅವರು ಬೆಚ್ಚಿಬಿದ್ದಿದ್ದು, ವೃದ್ಧ ವ್ಯಕ್ತಿಯೋರ್ವರು ಚೀಲದಲ್ಲಿ ಇರೋದು ಗೊತ್ತಾಗಿದೆ. ಆತ ಕೊರಿಯರ್ ಮಾಡಲು ಬಂದಿದ್ದ ಕುಟುಂಬದ ಪೈಕಿ ಮಹಿಳೆಯ ತಂದೆ ಎಂಬುದು ತಿಳಿದುಬಂದಿದೆ. ಅವರು ಚೀಲದಲ್ಲಿ ಉಸಿರಾಡಲೂ ಕಷ್ಟ ಪಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ.
ಹೀಗಿದ್ದರೂ ಕುಟುಂಬದವರು ಮಾತ್ರ ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿದ್ದು, ಯುಗಾದಿ ಮತ್ತು ರಂಜಾನ್ ಹಬ್ಬದ ಸಮಯದಲ್ಲಿ ಬಸ್ ಟಿಕೆಟ್ಗಳು ಸಿಗದ ಸಮಸ್ಯೆಯನ್ನು ತೋರಿಸಲು, ಮನುಷ್ಯನನ್ನೇ ಕೊರಿಯರ್ ಮಾಡುವ ಪರಿಸ್ಥಿತಿ ಬಂದಿದೆ ಎಂಬ ಸಂದೇಶದೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡಲು ಈ ರೀತಿ ಮಾಡಿದ್ದೇವೆ ಎಂದು ಹೇಳಿದ್ದಾರೆ. ಇವರ ಹುಚ್ಚಾಟದ ಬಗ್ಗೆ ಸಿಬ್ಬಂದಿ ಆಕ್ಷೇಪ ವ್ಯಕ್ತಪಡಿಸಿದರೂ, ಇಷ್ಟು ದೂರ ಬಂದು ಇಷ್ಟು ಕಷ್ಟಪಟ್ಟಿದ್ದೇವೆ. ದಯವಿಟ್ಟು ಪಾರ್ಸೆಲ್ ತೆಗೆದುಕೊಳ್ಳಿ ಎಂದು ಮತ್ತೆ ಮೊಂಡುತನ ಪ್ರದರ್ಶಿಸಿದ್ದಾರೆ ಎನ್ನಲಾಗಿದೆ.
ಬಳಿಕ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಖಾಕಿ, ಕುಟುಂಬಸ್ಥರನ್ನು ಠಾಣೆಗೆ ಕರೆದೊಯ್ದಿದೆ. ತಮ್ಮದು ತಪ್ಪಾಯ್ತು ಎಂದು ಕುಟುಂಬಸ್ಥರು ಕ್ಷಮೆಯಾಚನೆ ಮಾಡಿದ ವಿಡಿಯೋ ದಾಖಲಿಸಿಕೊಂಡ ಪೊಲೀಸರು, ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…