ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಶಿಕ್ಷಕರಿಗೆ ಕಡಿತವಾಗುವ ರಜೆಗಳನ್ನು ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗದಂತೆ, ಬೇರೆ ರೀತಿಯಲ್ಲಿ ಒದಗಿಸಲು ಚಿಂತನೆ ನಡೆಸುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಶಿಕ್ಷಕರನ್ನು ಬಳಸಿಕೊಳ್ಳುವುದರಿಂದ ಮಕ್ಕಳ ಕಲಿಕೆಗೆ ಯಾವುದೇ ತೊಂದರೆಯಾಗುವುದಿಲ್ಲ. ದಸರಾ ರಜೆಯ ಸಂದರ್ಭದ 15 ದಿನಗಳಲ್ಲಿ ಈ ಸಮೀಕ್ಷೆ ಪೂರ್ಣಗೊಳ್ಳಲಿದೆ ಎಂದರು.
ಈ ಅವಧಿಯ ರಜೆಯನ್ನು ಶಿಕ್ಷಕರಿಗೆ ಬೇರೆ ರೀತಿ ಕಲ್ಪಿಸುವ ಬಗ್ಗೆ ಚಿಂತನೆಗಳಿವೆ. ಸಮೀಕ್ಷೆಯಲ್ಲಿ ಭಾಗವಹಿಸುವವರಿಗೆ ಸರ್ಕಾರ ಹೆಚ್ಚುವರಿ ಗೌರವ ಧನ ನೀಡಲಿದೆ. ಶಿಕ್ಷಕರ ಸಂಘದ ಮುಖಂಡರ ಜೊತೆಗೆ ಚರ್ಚೆ ನಡೆಸಲಾಗಿದೆ. ಸಮೀಕ್ಷೆಯನ್ನು ಉತ್ತಮ ರೀತಿಯಲ್ಲಿ ನಡೆಸುವಂತೆ ಮನವಿ ಮಾಡಿದ್ದೇನೆ ಎಂದರು.
ಶಿಕ್ಷಕರನ್ನು ಸಮೀಕ್ಷೆಗೆ ಬಳಸಬಾರದು ಎಂಬ ಚರ್ಚೆಗಳಿವೆ. ಆದರೆ ಇದಕ್ಕೆ ಪರ್ಯಾಯವಾಗಿ ಬೇರೆ ವ್ಯವಸ್ಥೆಗಳು ಈವರೆಗೂ ಸೃಷ್ಟಿಯಾಗಿಲ್ಲ. ಕೇಂದ್ರ ಸರ್ಕಾರ ನಡೆಸಲಿರುವ ಜಾತಿ ಹಾಗೂ ಜನಗಣತಿಗೆ ಶಿಕ್ಷಕರನ್ನಲ್ಲದೇ ಬೇರೆ ಯಾರನ್ನು ಬಳಸಿಕೊಳ್ಳುತ್ತಾರೆ ಎಂದು ಪ್ರಶ್ನಿಸಿದರು.
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ…
ನವದೆಹಲಿ: ನೀಟ್ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್ ಹಾಗೂ…