ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಶಿಕ್ಷಕರಿಗೆ ಕಡಿತವಾಗುವ ರಜೆಗಳನ್ನು ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗದಂತೆ, ಬೇರೆ ರೀತಿಯಲ್ಲಿ ಒದಗಿಸಲು ಚಿಂತನೆ ನಡೆಸುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಶಿಕ್ಷಕರನ್ನು ಬಳಸಿಕೊಳ್ಳುವುದರಿಂದ ಮಕ್ಕಳ ಕಲಿಕೆಗೆ ಯಾವುದೇ ತೊಂದರೆಯಾಗುವುದಿಲ್ಲ. ದಸರಾ ರಜೆಯ ಸಂದರ್ಭದ 15 ದಿನಗಳಲ್ಲಿ ಈ ಸಮೀಕ್ಷೆ ಪೂರ್ಣಗೊಳ್ಳಲಿದೆ ಎಂದರು.
ಈ ಅವಧಿಯ ರಜೆಯನ್ನು ಶಿಕ್ಷಕರಿಗೆ ಬೇರೆ ರೀತಿ ಕಲ್ಪಿಸುವ ಬಗ್ಗೆ ಚಿಂತನೆಗಳಿವೆ. ಸಮೀಕ್ಷೆಯಲ್ಲಿ ಭಾಗವಹಿಸುವವರಿಗೆ ಸರ್ಕಾರ ಹೆಚ್ಚುವರಿ ಗೌರವ ಧನ ನೀಡಲಿದೆ. ಶಿಕ್ಷಕರ ಸಂಘದ ಮುಖಂಡರ ಜೊತೆಗೆ ಚರ್ಚೆ ನಡೆಸಲಾಗಿದೆ. ಸಮೀಕ್ಷೆಯನ್ನು ಉತ್ತಮ ರೀತಿಯಲ್ಲಿ ನಡೆಸುವಂತೆ ಮನವಿ ಮಾಡಿದ್ದೇನೆ ಎಂದರು.
ಶಿಕ್ಷಕರನ್ನು ಸಮೀಕ್ಷೆಗೆ ಬಳಸಬಾರದು ಎಂಬ ಚರ್ಚೆಗಳಿವೆ. ಆದರೆ ಇದಕ್ಕೆ ಪರ್ಯಾಯವಾಗಿ ಬೇರೆ ವ್ಯವಸ್ಥೆಗಳು ಈವರೆಗೂ ಸೃಷ್ಟಿಯಾಗಿಲ್ಲ. ಕೇಂದ್ರ ಸರ್ಕಾರ ನಡೆಸಲಿರುವ ಜಾತಿ ಹಾಗೂ ಜನಗಣತಿಗೆ ಶಿಕ್ಷಕರನ್ನಲ್ಲದೇ ಬೇರೆ ಯಾರನ್ನು ಬಳಸಿಕೊಳ್ಳುತ್ತಾರೆ ಎಂದು ಪ್ರಶ್ನಿಸಿದರು.
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…