ಬೆಂಗಳೂರು: ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ನಿರಾಕರಣೆ ಮಾಡಿರುವ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ತಬ್ಧಚಿತ್ರಕ್ಕೆ ಮನ್ನಣೆ ನೀಡುವಂತೆ ಕೋರಿ ಪತ್ರ ಬರೆದಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪತ್ರವೊಂದನ್ನು ಫೋಸ್ಟ್ ಮಾಡಿರುವ ಸಿಎಂ, 7 ಕೋಟಿ ಕನ್ನಡಿಗರ ಆಳವಾದ ಭಾವನೆಯನ್ನು ವ್ಯಕ್ತಪಡಿಸಿದ್ದೇನೆ. ಗಣರಾಜ್ಯೋತ್ಸವ ಪರೇಡ್ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ನಿರಾಕರಿಸುವುದು ನಮ್ಮ ರಾಜ್ಯದ ಹೆಮ್ಮೆಗೆ ಧಕ್ಕೆಯಾಗಿದೆ. ನಮ್ಮ ಸಾಧನೆಗಳು ರಾಷ್ಟ್ರೀಯ ವೇದಿಕೆಗೆ ಅರ್ಹವಾಗಿವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಸತತವಾಗಿ ಕಳೆದ 14 ವರ್ಷಗಳಿಂದ ದೆಹಲಿಯ ಕರ್ತವ್ಯಪಥದಲ್ಲಿ ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕ ಪಾಲ್ಗೊಂಡು ಹಲವಾರು ಪ್ರಶಸ್ತಿಗಳನ್ನು ಗೆದ್ದಿದೆ. 2005ರಲ್ಲಿ ಭಗವಾನ್ ಬಾಹುಬಲಿ ಮಸ್ತಾಭಿಷೇಕ, 2008ರಲ್ಲಿ ಹೊಯ್ಸಳ, 2011ರಲ್ಲಿ ಬಿದರಿ ಕಲೆ, 2012ರಲ್ಲಿ ಭೂತಾರಾಧನೆ, 2015ರಲ್ಲಿ ಚನ್ನಪಟ್ಟಣದ ಅಟಿಕೆಗಳು, 2022ರಲ್ಲಿ ಸಾಂಪ್ರದಾಯಿಕ ಕಲೆಗಳ ಸ್ತಬ್ಧಚಿತ್ರಗಳಿಗೆ ಪ್ರತಿಷ್ಠಿತ ಬಹುಮಾನ ಸಿಕ್ಕಿದೆ. ಪ್ರತಿಯೊಂದು ಸ್ತಬ್ಧಚಿತ್ರಗಳು ನಾಡಿನ ಶ್ರೀಮಂತ ಸಂಸ್ಕೃತಿ, ಸಂಪ್ರದಾಯ ತೋರಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.
ಈ ಬಾರಿ (2024) ಬ್ರ್ಯಾಂಡ್ ಬೆಂಗಳೂರು ಥೀಮ್ ನಮ್ಮದಾಗಿತ್ತು. ರಕ್ಷಣಾ ಸಚಿವಾಲಯ ಕರೆದ ಎಲ್ಲ ಸಭೆಗಳಲ್ಲಿ ಕರ್ನಾಟಕದ ಪ್ರತಿನಿಧಿಗಳು ಭಾಗಿಯಾಗಿದ್ದರು. ಕೊನೆಯ ಸುತ್ತಿನ ಸಭೆ ಬಳಿಕ ಕರ್ನಾಟಕದ ಸ್ಥಬ್ತಚಿತ್ರ ಪರಿಗಣಿಸಿಲ್ಲ. ಸ್ತಬ್ಧ ಚಿತ್ರದ ಧ್ಯೇಯ ಅಪ್ರತಿಮ ನಗರ ಬೆಂಗಳೂರು ಹೇಗೆ ಅಭಿವೃದ್ಧಿಯಲ್ಲಿ ಪ್ರಗತಿ ಸಾಧಿಸಿದೆ ಮತ್ತು ಸಂಸ್ಕೃತಿ, ಸಂಪ್ರದಾಯದಲ್ಲಿ ದೃಢವಾಗಿ ಬೇರೂರಿದೆ ಎಂಬುದನ್ನು ಚಿತ್ರಿಸುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…