ಬೆಂಗಳೂರು: ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ನಿರಾಕರಣೆ ಮಾಡಿರುವ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ತಬ್ಧಚಿತ್ರಕ್ಕೆ ಮನ್ನಣೆ ನೀಡುವಂತೆ ಕೋರಿ ಪತ್ರ ಬರೆದಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪತ್ರವೊಂದನ್ನು ಫೋಸ್ಟ್ ಮಾಡಿರುವ ಸಿಎಂ, 7 ಕೋಟಿ ಕನ್ನಡಿಗರ ಆಳವಾದ ಭಾವನೆಯನ್ನು ವ್ಯಕ್ತಪಡಿಸಿದ್ದೇನೆ. ಗಣರಾಜ್ಯೋತ್ಸವ ಪರೇಡ್ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ನಿರಾಕರಿಸುವುದು ನಮ್ಮ ರಾಜ್ಯದ ಹೆಮ್ಮೆಗೆ ಧಕ್ಕೆಯಾಗಿದೆ. ನಮ್ಮ ಸಾಧನೆಗಳು ರಾಷ್ಟ್ರೀಯ ವೇದಿಕೆಗೆ ಅರ್ಹವಾಗಿವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಸತತವಾಗಿ ಕಳೆದ 14 ವರ್ಷಗಳಿಂದ ದೆಹಲಿಯ ಕರ್ತವ್ಯಪಥದಲ್ಲಿ ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕ ಪಾಲ್ಗೊಂಡು ಹಲವಾರು ಪ್ರಶಸ್ತಿಗಳನ್ನು ಗೆದ್ದಿದೆ. 2005ರಲ್ಲಿ ಭಗವಾನ್ ಬಾಹುಬಲಿ ಮಸ್ತಾಭಿಷೇಕ, 2008ರಲ್ಲಿ ಹೊಯ್ಸಳ, 2011ರಲ್ಲಿ ಬಿದರಿ ಕಲೆ, 2012ರಲ್ಲಿ ಭೂತಾರಾಧನೆ, 2015ರಲ್ಲಿ ಚನ್ನಪಟ್ಟಣದ ಅಟಿಕೆಗಳು, 2022ರಲ್ಲಿ ಸಾಂಪ್ರದಾಯಿಕ ಕಲೆಗಳ ಸ್ತಬ್ಧಚಿತ್ರಗಳಿಗೆ ಪ್ರತಿಷ್ಠಿತ ಬಹುಮಾನ ಸಿಕ್ಕಿದೆ. ಪ್ರತಿಯೊಂದು ಸ್ತಬ್ಧಚಿತ್ರಗಳು ನಾಡಿನ ಶ್ರೀಮಂತ ಸಂಸ್ಕೃತಿ, ಸಂಪ್ರದಾಯ ತೋರಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.
ಈ ಬಾರಿ (2024) ಬ್ರ್ಯಾಂಡ್ ಬೆಂಗಳೂರು ಥೀಮ್ ನಮ್ಮದಾಗಿತ್ತು. ರಕ್ಷಣಾ ಸಚಿವಾಲಯ ಕರೆದ ಎಲ್ಲ ಸಭೆಗಳಲ್ಲಿ ಕರ್ನಾಟಕದ ಪ್ರತಿನಿಧಿಗಳು ಭಾಗಿಯಾಗಿದ್ದರು. ಕೊನೆಯ ಸುತ್ತಿನ ಸಭೆ ಬಳಿಕ ಕರ್ನಾಟಕದ ಸ್ಥಬ್ತಚಿತ್ರ ಪರಿಗಣಿಸಿಲ್ಲ. ಸ್ತಬ್ಧ ಚಿತ್ರದ ಧ್ಯೇಯ ಅಪ್ರತಿಮ ನಗರ ಬೆಂಗಳೂರು ಹೇಗೆ ಅಭಿವೃದ್ಧಿಯಲ್ಲಿ ಪ್ರಗತಿ ಸಾಧಿಸಿದೆ ಮತ್ತು ಸಂಸ್ಕೃತಿ, ಸಂಪ್ರದಾಯದಲ್ಲಿ ದೃಢವಾಗಿ ಬೇರೂರಿದೆ ಎಂಬುದನ್ನು ಚಿತ್ರಿಸುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್ಜಿ ಯೋಧರು ಹುತಾತ್ಮರಾಗಿದ್ದಾರೆ.…
ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…
ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…
ಬೆಂಗಳೂರು : ಬಜೆಟ್ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…