ಬೆಂಗಳೂರು: ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ನಿರಾಕರಣೆ ಮಾಡಿರುವ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ತಬ್ಧಚಿತ್ರಕ್ಕೆ ಮನ್ನಣೆ ನೀಡುವಂತೆ ಕೋರಿ ಪತ್ರ ಬರೆದಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪತ್ರವೊಂದನ್ನು ಫೋಸ್ಟ್ ಮಾಡಿರುವ ಸಿಎಂ, 7 ಕೋಟಿ ಕನ್ನಡಿಗರ ಆಳವಾದ ಭಾವನೆಯನ್ನು ವ್ಯಕ್ತಪಡಿಸಿದ್ದೇನೆ. ಗಣರಾಜ್ಯೋತ್ಸವ ಪರೇಡ್ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ನಿರಾಕರಿಸುವುದು ನಮ್ಮ ರಾಜ್ಯದ ಹೆಮ್ಮೆಗೆ ಧಕ್ಕೆಯಾಗಿದೆ. ನಮ್ಮ ಸಾಧನೆಗಳು ರಾಷ್ಟ್ರೀಯ ವೇದಿಕೆಗೆ ಅರ್ಹವಾಗಿವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಸತತವಾಗಿ ಕಳೆದ 14 ವರ್ಷಗಳಿಂದ ದೆಹಲಿಯ ಕರ್ತವ್ಯಪಥದಲ್ಲಿ ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕ ಪಾಲ್ಗೊಂಡು ಹಲವಾರು ಪ್ರಶಸ್ತಿಗಳನ್ನು ಗೆದ್ದಿದೆ. 2005ರಲ್ಲಿ ಭಗವಾನ್ ಬಾಹುಬಲಿ ಮಸ್ತಾಭಿಷೇಕ, 2008ರಲ್ಲಿ ಹೊಯ್ಸಳ, 2011ರಲ್ಲಿ ಬಿದರಿ ಕಲೆ, 2012ರಲ್ಲಿ ಭೂತಾರಾಧನೆ, 2015ರಲ್ಲಿ ಚನ್ನಪಟ್ಟಣದ ಅಟಿಕೆಗಳು, 2022ರಲ್ಲಿ ಸಾಂಪ್ರದಾಯಿಕ ಕಲೆಗಳ ಸ್ತಬ್ಧಚಿತ್ರಗಳಿಗೆ ಪ್ರತಿಷ್ಠಿತ ಬಹುಮಾನ ಸಿಕ್ಕಿದೆ. ಪ್ರತಿಯೊಂದು ಸ್ತಬ್ಧಚಿತ್ರಗಳು ನಾಡಿನ ಶ್ರೀಮಂತ ಸಂಸ್ಕೃತಿ, ಸಂಪ್ರದಾಯ ತೋರಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.
ಈ ಬಾರಿ (2024) ಬ್ರ್ಯಾಂಡ್ ಬೆಂಗಳೂರು ಥೀಮ್ ನಮ್ಮದಾಗಿತ್ತು. ರಕ್ಷಣಾ ಸಚಿವಾಲಯ ಕರೆದ ಎಲ್ಲ ಸಭೆಗಳಲ್ಲಿ ಕರ್ನಾಟಕದ ಪ್ರತಿನಿಧಿಗಳು ಭಾಗಿಯಾಗಿದ್ದರು. ಕೊನೆಯ ಸುತ್ತಿನ ಸಭೆ ಬಳಿಕ ಕರ್ನಾಟಕದ ಸ್ಥಬ್ತಚಿತ್ರ ಪರಿಗಣಿಸಿಲ್ಲ. ಸ್ತಬ್ಧ ಚಿತ್ರದ ಧ್ಯೇಯ ಅಪ್ರತಿಮ ನಗರ ಬೆಂಗಳೂರು ಹೇಗೆ ಅಭಿವೃದ್ಧಿಯಲ್ಲಿ ಪ್ರಗತಿ ಸಾಧಿಸಿದೆ ಮತ್ತು ಸಂಸ್ಕೃತಿ, ಸಂಪ್ರದಾಯದಲ್ಲಿ ದೃಢವಾಗಿ ಬೇರೂರಿದೆ ಎಂಬುದನ್ನು ಚಿತ್ರಿಸುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…