ಬೆಂಗಳೂರು: ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿರುದ್ಧದ ನೂರಾರು ಕೋಟಿ ಮೌಲ್ಯಸ ಜಮೀನಿನ ಹಗರಣದ ದಾಖಲೆಯನ್ನು ಕಾಂಗ್ರೆಸ್ ಸಚಿವರು ಬಿಡುಗಡೆ ಮಾಡಿದ್ದಾರೆ.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್, ಸಚಿವ ಎಚ್.ಕೆ ಪಾಟೀಲ್, ಸಚಿವ ಸತೀಶ್ ಜಾರಕಿಹೊಳಿ ಹಾಗೂ ಸಚಿವ ಕೃಷ್ಣಭೈರೇಗೌಡ ಅವರು ಆರ್.ಅಶೋಕ್ ವಿರುದ್ಧದ ದಾಖಲೆ ಬಿಡುಗಡೆ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಪತ್ನಿ ಮುಡಾಗೆ ನಿವೇಶನಗಳನ್ನ ವಾಪಸ್ ಮಾಡಿದ್ದಾರೆ. ಆದರೂ ಬಿಜೆಪಿಯ ಮುಖಂಡರು ವಾಪಸ್ ಕೊಟ್ಟಿರೋದೆ ಸರಿಯಿಲ್ಲ. ತಪ್ಪನ್ನ ಒಪ್ಪಿಕೊಂಡಂತಾಯ್ತು ಅಂತಾ ಬೇರೆ ಬೇರೆ ಅರ್ಥದಲ್ಲಿ ಮಾತಾಡ್ತಿದ್ದಾರೆ. ಆದ್ರೆ ವಿಪಕ್ಷ ನಾಯಕ ಆರ್. ಅಶೋಕ್ ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಮಾಡಿರೋದೆ ತಪ್ಪು. ಸರ್ಕಾರದ ಜಾಗ ಕಬಳಿಸಿ ಒಪ್ಪಿಕೊಂಡಾಯ್ತು ಅಂತಾ ಅವರದೇ ಭಾಷೆಯಲ್ಲಿ ಮಾತಾಡಿದ್ದಾರೆ. ಅವರ ಅವಧಿಯಲ್ಲಾದ ಹಗರಣದ ಬಗ್ಗೆ ರಾಜ್ಯದ ಜನರ ಮುಂದಿಡೋಕೆ ಬಂದಿದ್ದೀವಿ ಎಂದು ಜಂಟಿಸುದ್ದಿಗೋಷ್ಠಿಯಲ್ಲಿ ಸಚಿವರು ಹೇಳಿದರು.
ಲೊಟ್ಟೆಗೊಲ್ಲಹಳ್ಳಿಯಲ್ಲಿ ನೂರಾರು ಕೋಟಿ ಜಮೀನಿನ ಹಗರಣವಾಗಿದೆ. 26 ಫೆಬ್ರವರಿ 2003ರಲ್ಲಿ ಹಾಗೂ 2007ರಲ್ಲಿ ಈ ಜಮೀನನ್ನು ಅಕ್ರಮವಾಗಿ ಕಬಳಿಸಲಾಗಿದೆ. ಬಿಡಿಎ ನೊಟಿಫಿಕೇಷನ್ಗೂ ಮೊದಲು ಈ ಜಮೀನು ರಾಮಸ್ವಾಮಿ ಎನ್ನುವವರ ಒಡೆತನದಲ್ಲಿತ್ತು. ಅದಾದ ಬಳಿಕ ಈ ಜಮೀನು 26 ವರ್ಷ ಬಿಡಿಎ ಒಡೆತನದಲ್ಲಿತ್ತು. ಆದರೆ 2003ರಲ್ಲಿ ಒಂದು ಬಾರಿ ಹಾಗೂ 2007ರಲ್ಲಿ ಆರ್ ಅಶೋಕ್ ಶುದ್ಧಕ್ರಯ ಮಾಡಿಕೊಂಡಿದ್ದಾರೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ದಾಖಲೆ ಬಿಡುಗಡೆ ಮಾಡಿದರು.
ದಾಖಲಾತಿ ಸಮೇತ ಮಂಡಿಸೊ ಕೆಲಸ ಮಾಡ್ತಿದ್ದೇವೆ. ಲೊಟ್ಟೆಗಲ್ಲಹಳ್ಳಿ ಸರ್ವೆ ನಂ 11 , ಎಫ್-1 ರಲ್ಲಿ ಬಿಡಿಎ 24-02-77 ಪ್ರಾಥಮಿಕ ಅಧಿಸೂಚನೆ ಹೊರಡಿಸುತ್ತೆ. 31-08-78 ರಲ್ಲಿ ಮತ್ತೊಂದು ಫೈನಲ್ ನೋಟಿಫಿಕೇಷನ್ ಆಗುತ್ತೆ. 26-02-2003 ರಲ್ಲಿ ಹಾಗೂ 2007 ರಲ್ಲಿ ಈ ಜಮೀನನ್ನ ಮೂಲ ಮಾಲೀಕತ್ವ ಯಾರದಿತ್ತು? ಬಿಡಿಎ ಅಧಿಸೂಚನೆ ಹೊರಡಿಸುವ ಮೊದಲು ರಾಮಸ್ವಾಮಿ ಅನ್ನೋರ ಮಾಲೀಕತ್ವದಲ್ಲಿರುತ್ತೆ. 1978 ರಿಂದ 2003ರ ವರಗೆ ಬಿಡಿಎ ಸ್ವಾಧೀನದಲ್ಲಿ ಜಮೀನು ಇತ್ತು. ಆರ್.ಅಶೋಕ್, 2007ರಲ್ಲಿ ಶುದ್ಧಕ್ರಯಕ್ಕೆ ಖರೀದಿ ಮಾಡಿದರು. ರಾಮಸ್ವಾಮಿಯಿಂದ 32 ಕುಂಟೆ ಖರೀದಿ ಮಾಡಿದರು. ಆದ್ರೆ ರಾಮಸ್ವಾಮಿ ಮಾಲೀಕನೆ ಅಲ್ಲ, ಆ ಭೂಮಿ ಬಿಡಿಎ ಸ್ವಾಧೀನದಲ್ಲಿರುತ್ತೆ ಎಂದು ಆರೋಪ ಮಾಡಿದ್ದಾರೆ.
2009ರ ಅಕ್ಟೋಬರ್ 1ಕ್ಕೆ ಡಿನೋಟಿಫೈ ಮಾಡಿಕೊಡಿ ಎಂದು ರಾಮಸ್ವಾಮಿಯಿಂದ ಸರ್ಕಾರಕ್ಕೆ ಅರ್ಜಿ ಸಲ್ಲಿಸುತ್ತಾರೆ. ಅಶೋಕ್ ಹಾಗೂ ರಾಮಸ್ವಾಮಿ ಮಾಲೀಕರೇ ಅಲ್ಲ. ಆದ್ರೂ ಅರ್ಜಿ ಸಲ್ಲಿಸ್ತಾರೆ, ಅಂದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕೂಡಲೇ ಮಂಡಿಸಿ ಅಂತ ಷರಾ ಬರೀತಾರೆ. ಎರಡೇ ತಿಂಗಳಲ್ಲೇ ಅಂದಿನ ಮುಖ್ಯಮಂತ್ರಿಗಳು ಡಿನೋಟಿಫಿಕೇಷನ್ ಮಾಡಿಕೊಡ್ತಾರೆ. ಆ ನಂತರ ನಿವೃತ್ತ ವಿಂಗ್ ಕಮಾಂಡರ್ ಜಿವಿ ಅತ್ರಿ ಲೋಕಾಯುಕ್ತಕ್ಕೆ ಅರ್ಜಿ ಹಾಕುತ್ತಾರೆ. ವಿಚಾರ ಕೋರ್ಟ್ಗೆ ಹೋಗುತ್ತೆ. ಆಗ ಅಶೋಕ್ ವಾಪಸ್ ಕೊಡುವ ತೀರ್ಮಾನ ತಗೊತಾರೆ. 26-08 -2011 ರಂದು ರಿಜಿಸ್ಟರ್ ಗಿಫ್ಟ್ ಮೂಲಕ ಬಿಡಿಎಗೆ ಭೂಮಿ ಹಿಂತಿರುಗಿಸುತ್ತಾರೆ. ಓನರ್ಶಿಪ್ ಇಲ್ಲದೇ ಅಶೋಕ್ ಗಿಫ್ಟ್ ಬಿಡಿಎಗೆ ನೀಡಿದ್ದಾರೆ ಎಂದು ಹಳೆಯ ಪ್ರಕರಣವೊಂದನ್ನ ಬಯಲು ಮಾಡಿದರು.
ಆ ನಂತರ ಹೈಕೋರ್ಟ್ ಅರ್ಜಿ ಹಾಕ್ತಾರೆ, ಕ್ರಿಮಿನಲ್ ಕೇಸ್ ಹಾಕಬೇಕು ಅನ್ನೋದು ಬೇಕಾಗಿಲ್ಲ, ಅಂತಾ ಹೈಕೋರ್ಟ್ನಿಂದ ತೀರ್ಪು ಬರುತ್ತೆ. ವಾಪಸ್ ಕೊಟ್ಟಿಬಿಟ್ಟರಲ್ಲ ಕೇಸ್ ಬೇಕಾಗಿಲ್ಲ ಅಂತಾ ಜಡ್ಜ್ ಮೆಂಟ್ ಬರುತ್ತೆ. ಈಗ ಸಿಎಂ ಪತ್ನಿ ಸೈಟು ವಾಪಸ್ ಮಾಡಿದಾಗ ಮಾತನಾಡುವವರು ಹಿಂದೆ ಮಾಡಿದ್ದೇನು? ಇದು ಎಷ್ಟರಮಟ್ಟಿಗೆ ನ್ಯಾಯ? ಕಬಳಿಸಿರೋದು, ಕಳ್ಳತನ ಮಾಡಿರೋದು ಅಂತಾ ಹೇಳಿದ್ರಿ, ನಾವು ನಿಮಗೆ ಅವರದ್ದೇ ಭಾಷೆಯಲ್ಲಿ ಹೇಳ್ಬೇಕಾಗುತ್ತೆ ಎಂದು ಸಚಿವ ಪರಮೇಶ್ವರ್ ಹೇಳಿದರು.
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…