ರಾಜ್ಯ

ಆರ್.ಅಶೋಕ್‌ ವಿರುದ್ಧ ನೂರಾರು ಕೋಟಿ ಭೂಹಗರಣದ ದಾಖಲೆ ಬಿಡುಗಡೆ

ಬೆಂಗಳೂರು: ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ವಿರುದ್ಧದ ನೂರಾರು ಕೋಟಿ ಮೌಲ್ಯಸ ಜಮೀನಿನ ಹಗರಣದ ದಾಖಲೆಯನ್ನು ಕಾಂಗ್ರೆಸ್‌ ಸಚಿವರು ಬಿಡುಗಡೆ ಮಾಡಿದ್ದಾರೆ.

ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್‌, ಸಚಿವ ಎಚ್‌.ಕೆ ಪಾಟೀಲ್‌, ಸಚಿವ ಸತೀಶ್ ಜಾರಕಿಹೊಳಿ ಹಾಗೂ ಸಚಿವ ಕೃಷ್ಣಭೈರೇಗೌಡ ಅವರು ಆರ್.ಅಶೋಕ್‌ ವಿರುದ್ಧದ ದಾಖಲೆ ಬಿಡುಗಡೆ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಪತ್ನಿ ಮುಡಾಗೆ ನಿವೇಶನಗಳನ್ನ ವಾಪಸ್ ಮಾಡಿದ್ದಾರೆ. ಆದರೂ ಬಿಜೆಪಿಯ ಮುಖಂಡರು ವಾಪಸ್ ಕೊಟ್ಟಿರೋದೆ ಸರಿಯಿಲ್ಲ. ತಪ್ಪನ್ನ ಒಪ್ಪಿಕೊಂಡಂತಾಯ್ತು ಅಂತಾ ಬೇರೆ ಬೇರೆ ಅರ್ಥದಲ್ಲಿ ಮಾತಾಡ್ತಿದ್ದಾರೆ. ಆದ್ರೆ ವಿಪಕ್ಷ ನಾಯಕ ಆರ್‌. ಅಶೋಕ್‌ ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಮಾಡಿರೋದೆ ತಪ್ಪು. ಸರ್ಕಾರದ ಜಾಗ ಕಬಳಿಸಿ ಒಪ್ಪಿಕೊಂಡಾಯ್ತು ಅಂತಾ ಅವರದೇ ಭಾಷೆಯಲ್ಲಿ ಮಾತಾಡಿದ್ದಾರೆ. ಅವರ ಅವಧಿಯಲ್ಲಾದ ಹಗರಣದ ಬಗ್ಗೆ ರಾಜ್ಯದ ಜನರ ಮುಂದಿಡೋಕೆ ಬಂದಿದ್ದೀವಿ ಎಂದು ಜಂಟಿಸುದ್ದಿಗೋಷ್ಠಿಯಲ್ಲಿ ಸಚಿವರು ಹೇಳಿದರು.

ಲೊಟ್ಟೆಗೊಲ್ಲಹಳ್ಳಿಯಲ್ಲಿ ನೂರಾರು ಕೋಟಿ ಜಮೀನಿನ ಹಗರಣವಾಗಿದೆ. 26 ಫೆಬ್ರವರಿ 2003ರಲ್ಲಿ ಹಾಗೂ 2007ರಲ್ಲಿ ಈ ಜಮೀನನ್ನು ಅಕ್ರಮವಾಗಿ ಕಬಳಿಸಲಾಗಿದೆ. ಬಿಡಿಎ ನೊಟಿಫಿಕೇಷನ್​ಗೂ ಮೊದಲು ಈ ಜಮೀನು ರಾಮಸ್ವಾಮಿ ಎನ್ನುವವರ ಒಡೆತನದಲ್ಲಿತ್ತು. ಅದಾದ ಬಳಿಕ ಈ ಜಮೀನು 26 ವರ್ಷ ಬಿಡಿಎ ಒಡೆತನದಲ್ಲಿತ್ತು. ಆದರೆ 2003ರಲ್ಲಿ ಒಂದು ಬಾರಿ ಹಾಗೂ 2007ರಲ್ಲಿ ಆರ್ ಅಶೋಕ್ ಶುದ್ಧಕ್ರಯ ಮಾಡಿಕೊಂಡಿದ್ದಾರೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್‌ ದಾಖಲೆ ಬಿಡುಗಡೆ ಮಾಡಿದರು.

ದಾಖಲಾತಿ ಸಮೇತ ಮಂಡಿಸೊ ಕೆಲಸ ಮಾಡ್ತಿದ್ದೇವೆ. ಲೊಟ್ಟೆಗಲ್ಲಹಳ್ಳಿ ಸರ್ವೆ ನಂ 11 , ಎಫ್-1 ರಲ್ಲಿ ಬಿಡಿಎ 24-02-77 ಪ್ರಾಥಮಿಕ ಅಧಿಸೂಚನೆ ಹೊರಡಿಸುತ್ತೆ. 31-08-78 ರಲ್ಲಿ ಮತ್ತೊಂದು ಫೈನಲ್ ನೋಟಿಫಿಕೇಷನ್ ಆಗುತ್ತೆ. 26-02-2003 ರಲ್ಲಿ ಹಾಗೂ 2007 ರಲ್ಲಿ ಈ ಜಮೀನನ್ನ ಮೂಲ ಮಾಲೀಕತ್ವ ಯಾರದಿತ್ತು? ಬಿಡಿಎ ಅಧಿಸೂಚನೆ ಹೊರಡಿಸುವ ಮೊದಲು ರಾಮಸ್ವಾಮಿ ಅನ್ನೋರ ಮಾಲೀಕತ್ವದಲ್ಲಿರುತ್ತೆ. 1978 ರಿಂದ 2003ರ ವರಗೆ ಬಿಡಿಎ ಸ್ವಾಧೀನದಲ್ಲಿ ಜಮೀನು ಇತ್ತು. ಆರ್.ಅಶೋಕ್, 2007ರಲ್ಲಿ ಶುದ್ಧಕ್ರಯಕ್ಕೆ ಖರೀದಿ ಮಾಡಿದರು. ರಾಮಸ್ವಾಮಿಯಿಂದ 32 ಕುಂಟೆ ಖರೀದಿ ಮಾಡಿದರು. ಆದ್ರೆ ರಾಮಸ್ವಾಮಿ ಮಾಲೀಕನೆ ಅಲ್ಲ, ಆ ಭೂಮಿ ಬಿಡಿಎ ಸ್ವಾಧೀನದಲ್ಲಿರುತ್ತೆ ಎಂದು ಆರೋಪ ಮಾಡಿದ್ದಾರೆ.

2009ರ ಅಕ್ಟೋಬರ್‌ 1ಕ್ಕೆ ಡಿನೋಟಿಫೈ ಮಾಡಿಕೊಡಿ ಎಂದು ರಾಮಸ್ವಾಮಿಯಿಂದ ಸರ್ಕಾರಕ್ಕೆ ಅರ್ಜಿ ಸಲ್ಲಿಸುತ್ತಾರೆ. ಅಶೋಕ್ ಹಾಗೂ ರಾಮಸ್ವಾಮಿ ಮಾಲೀಕರೇ ಅಲ್ಲ. ಆದ್ರೂ ಅರ್ಜಿ ಸಲ್ಲಿಸ್ತಾರೆ, ಅಂದಿನ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಕೂಡಲೇ ಮಂಡಿಸಿ ಅಂತ ಷರಾ ಬರೀತಾರೆ. ಎರಡೇ ತಿಂಗಳಲ್ಲೇ ಅಂದಿನ ಮುಖ್ಯಮಂತ್ರಿಗಳು ಡಿನೋಟಿಫಿಕೇಷನ್ ಮಾಡಿಕೊಡ್ತಾರೆ. ಆ ನಂತರ ನಿವೃತ್ತ ವಿಂಗ್ ಕಮಾಂಡರ್ ಜಿವಿ ಅತ್ರಿ ಲೋಕಾಯುಕ್ತಕ್ಕೆ ಅರ್ಜಿ ಹಾಕುತ್ತಾರೆ. ವಿಚಾರ ಕೋರ್ಟ್‌ಗೆ ಹೋಗುತ್ತೆ. ಆಗ ಅಶೋಕ್ ವಾಪಸ್ ಕೊಡುವ ತೀರ್ಮಾನ ತಗೊತಾರೆ. 26-08 -2011 ರಂದು ರಿಜಿಸ್ಟರ್ ಗಿಫ್ಟ್ ಮೂಲಕ ಬಿಡಿಎಗೆ ಭೂಮಿ ಹಿಂತಿರುಗಿಸುತ್ತಾರೆ. ಓನರ್‌ಶಿಪ್‌ ಇಲ್ಲದೇ ಅಶೋಕ್ ಗಿಫ್ಟ್ ಬಿಡಿಎಗೆ ನೀಡಿದ್ದಾರೆ ಎಂದು ಹಳೆಯ ಪ್ರಕರಣವೊಂದನ್ನ ಬಯಲು ಮಾಡಿದರು.

ಆ ನಂತರ ಹೈಕೋರ್ಟ್ ಅರ್ಜಿ ಹಾಕ್ತಾರೆ, ಕ್ರಿಮಿನಲ್ ಕೇಸ್ ಹಾಕಬೇಕು ಅನ್ನೋದು ಬೇಕಾಗಿಲ್ಲ, ಅಂತಾ ಹೈಕೋರ್ಟ್‌ನಿಂದ ತೀರ್ಪು ಬರುತ್ತೆ. ವಾಪಸ್ ಕೊಟ್ಟಿಬಿಟ್ಟರಲ್ಲ ಕೇಸ್ ಬೇಕಾಗಿಲ್ಲ ಅಂತಾ ಜಡ್ಜ್ ಮೆಂಟ್ ಬರುತ್ತೆ. ಈಗ ಸಿಎಂ ಪತ್ನಿ ಸೈಟು ವಾಪಸ್‌ ಮಾಡಿದಾಗ ಮಾತನಾಡುವವರು ಹಿಂದೆ ಮಾಡಿದ್ದೇನು? ಇದು ಎಷ್ಟರಮಟ್ಟಿಗೆ ನ್ಯಾಯ? ಕಬಳಿಸಿರೋದು, ಕಳ್ಳತನ ಮಾಡಿರೋದು ಅಂತಾ ಹೇಳಿದ್ರಿ, ನಾವು ನಿಮಗೆ ಅವರದ್ದೇ ಭಾಷೆಯಲ್ಲಿ ಹೇಳ್ಬೇಕಾಗುತ್ತೆ ಎಂದು ಸಚಿವ ಪರಮೇಶ್ವರ್ ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

9 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

12 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

13 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

14 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

14 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

14 hours ago