ರಾಜ್ಯ

ಆಧುನಿಕ ಅನುಭವ ಮಂಟಪಕ್ಕೆ 50 ಕೋಟಿ ರೂ. ಬಿಡುಗಡೆ: ಈಶ್ವರ ಖಂಡ್ರೆ

ಬೆಂಗಳೂರು : ಪ್ರಜಾಪ್ರಭುತ್ವದ ಹೆಗ್ಗುರುತಾದ ಸಂಸತ್ ಭವನಕ್ಕೆ ಮೂಲ ಪ್ರೇರಣೆಯಾಗಿರುವ 12ನೇ ಶತಮಾನದ ಶಿವಶರಣರ ಕಾರ್ಯಕ್ಷೇತ್ರ ಬಸವಕಲ್ಯಾಣದಲ್ಲಿ ಆಧುನಿಕ ಅನುಭವ ಮಂಟಪ ನಿರ್ಮಾಣಕ್ಕೆ ರಾಜ್ಯ ಸರ್ಕಾರ 50 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಆಧುನಿಕ ಅನುಭವ ಮಂಟಪ ಕಾಮಗಾರಿಯ ಮಾರ್ಚ್ ವರೆಗಿನ ಬಿಲ್ ಗಳನ್ನು ಪಾವತಿ ಮಾಡಲು, ಕಾಮಗಾರಿಗೆ ತ್ವರಿತ ಚಾಲನೆ ನೀಡಲು 50 ಕೋಟಿ ರೂ. ಬಿಡುಗಡೆ ಮಾಡುವಂತೆ ತಾವು ಮಾಡಿದ್ದ ಮನವಿಗೆ ಸ್ಪಂದಿಸಿ ತತ್ ಕ್ಷಣವೇ ಹಣ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಶ್ವರ ಖಂಡ್ರೆ ಧನ್ಯವಾದ ಅರ್ಪಿಸಿದ್ದಾರೆ.

ಆಧುನಿಕ ಅನುಭವ ಮಂಟಪ ನಿರ್ಮಾಣ ಮಾಡಬೇಕು ಎಂದು 2017ರಲ್ಲಿ ಪೌರಾಡಳಿತ ಸಚಿವರಾಗಿದ್ದಾಗ ತಾವು ಮಾಡಿದ್ದ ಮನವಿಗೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿ ಅನುಮೋದನೆ ನೀಡಿ ಬಜೆಟ್ ನಲ್ಲಿ ಪ್ರಕಟಿಸಿದ್ದರು ಎಂದು ಅವರು ಸ್ಮರಿಸಿದ್ದಾರೆ.

ಆಧುನಿಕ ಅನುಭವ ಮಂಟಪ ನಿರ್ಮಾಣ ಬೀದರ್ ಉಸ್ತುವಾರಿ ಸಚಿವರಾಗಿ ತಮ್ಮ ಕನಸಾಗಿದ್ದು, ಮುಂದಿನ ಎರಡು ವರ್ಷಗಳಲ್ಲಿ ಭವ್ಯ, ದಿವ್ಯ ಆಧುನಿಕ ಅನುಭವ ಮಂಟಪ ನಿರ್ಮಾಣ ಮಾಡಿ ಬಸವಕಲ್ಯಾಣವನ್ನು ರಾಜ್ಯದ ಪ್ರಮುಖ ಪ್ರವಾಸಿ ತಾಣವಾಗಿ ಮಾಡುವ ಆಶಯ ಹೊಂದಿರುವುದಾಗಿ ಈಶ್ವರ ಖಂಡ್ರೆ ತಿಳಿಸಿದ್ದಾರೆ.

andolanait

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

2 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

2 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

2 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

2 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

2 hours ago